Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ತೂರು ಸಂತೋಷ್​ಗೆ ಬಿಗ್​ ಬಾಸ್​ನಲ್ಲಿ ಬಿಗ್ ಸರ್​ಪ್ರೈಸ್; ಅವರು ಉಳಿದುಕೊಳ್ಳೋದು ಪಕ್ಕಾ

ವೀಕೆಂಡ್​ನಲ್ಲಿ ಸಂತೋಷ್ ಅವರು ಮನೆಗೆ ಹೋಗುತ್ತೇನೆ ಎಂದರು. ಆದರೆ, ಇದಕ್ಕೆ ಸುದೀಪ್ ಅವಕಾಶ ನೀಡುವುದಿಲ್ಲ ಎಂದರು. ಅವರ ಮನಸ್ಸು ಗೊಂದಲದಲ್ಲೇ ಇತ್ತು. ಈಗ ಬಿಗ್ ಬಾಸ್ ಕಡೆಯಿಂದ ಅವರಿಗೆ ಸರ್​ಪ್ರೈಸ್ ಸಿಕ್ಕಿದೆ.

ವರ್ತೂರು ಸಂತೋಷ್​ಗೆ ಬಿಗ್​ ಬಾಸ್​ನಲ್ಲಿ ಬಿಗ್ ಸರ್​ಪ್ರೈಸ್; ಅವರು ಉಳಿದುಕೊಳ್ಳೋದು ಪಕ್ಕಾ
ವರ್ತೂರು ಸಂತೋಷ್
Follow us
ರಾಜೇಶ್ ದುಗ್ಗುಮನೆ
|

Updated on: Nov 13, 2023 | 2:42 PM

‘ಬಿಗ್ ಬಾಸ್​’ನಿಂದ ನಾನು ಹೊರ ಹೋಗುತ್ತೇನೆ ಎಂದು ವರ್ತೂರು ಸಂತೋಷ್ (Varthur Santosh) ಅವರು ಹಠ ಹಿಡಿದು ಕುಳಿತಿದ್ದರು. ಸುದೀಪ್ ಅವರು ಪರಿಪರಿಯಾಗಿ ಕೇಳಿಕೊಂಡರೂ ಅವರು ಕೇಳೋಕೆ ಸಿದ್ಧರಿರಲಿಲ್ಲ. ‘ಭಾಗ್ಯಲಕ್ಷ್ಮೀ’ ಧಾರಾವಾಹಿಯ ಮುಖ್ಯ ಕಲಾವಿದೆ ಸುಷ್ಮಾ ರಾವ್ ಅವರು ಬಿಗ್ ಬಾಸ್​ಗೆ ಬಂದು ಸಂತೋಷ್ ಅವರ ಮನ ಒಲಿಸಲು ಪ್ರಯತ್ನಿಸದರೂ ಮನಸ್ಸು ಬದಲಾಗಿರಲಿಲ್ಲ. ಈಗ ಬಿಗ್ ಬಾಸ್​ನಲ್ಲಿ ಅವರಿಗೆ ಸರ್​ಪ್ರೈಸ್ ಸಿಕ್ಕಿದೆ. ದೊಡ್ಮನೆಯಲ್ಲಿ ಅಮ್ಮನ ಕೈತುತ್ತು ಸಿಕ್ಕಿದೆ.

‘ಬಿಗ್ ಬಾಸ್’ ಒಳಗೆ ವರ್ತೂರು ಸಂತೋಷ್ ಅವರು ಎಂಟ್ರಿ ಕೊಟ್ಟರು. ಅವರ ಕತ್ತಿನಲ್ಲಿದ್ದ ಹುಲಿಯ ಉಗುರು ಎಲ್ಲರ ಕಣ್ಣುಕುಕ್ಕಿತು. ವನ್ಯಜೀವಿ ಸಂರಕ್ಷಣೆ ಆ್ಯಕ್ಟ್ ಅಡಿಯಲ್ಲಿ ಅವರನ್ನು ಬಂಧಿಸಲಾಯಿತು. 14 ದಿನ ನ್ಯಾಯಾಂಗ ಬಂಧನವನ್ನೂ ವಿಧಿಸಲಾಯಿತು. ಕೆಲವೇ ದಿನಗಳಲ್ಲಿ ಅವರಿಗೆ ಜಾಮೀನು ಸಿಕ್ಕಿತು. ಜಾಮೀನು ಪಡೆದು ಹೊರ ಬಂದ ಅವರು ನೇರವಾಗಿ ಬಿಗ್ ಬಾಸ್ ಮನೆಗೆ ಹೋಗಿದ್ದಾರೆ.

ಅಲ್ಲಿ ಮೊದಲ ವಾರ ಅವರು ನಾರ್ಮಲ್ ಆಗಿದ್ದರು. ಎರಡನೇ ವಾರ ಅವರು ಡಲ್ ಹೊಡೆದಿದ್ದಾರೆ. ವೀಕೆಂಡ್​ನಲ್ಲಿ ಅವರು ಮನೆಗೆ ಹೋಗುತ್ತೇನೆ ಎಂದರು. ಆದರೆ, ಇದಕ್ಕೆ ಸುದೀಪ್ ಅವಕಾಶ ನೀಡುವುದಿಲ್ಲ ಎಂದರು. ಅವರ ಮನಸ್ಸು ಗೊಂದಲದಲ್ಲೇ ಇತ್ತು. ಈಗ ಬಿಗ್ ಬಾಸ್ ಕಡೆಯಿಂದ ಅವರಿಗೆ ಸರ್​ಪ್ರೈಸ್ ಸಿಕ್ಕಿದೆ.

ಇದನ್ನೂ ಓದಿ: ‘ಕಾಲಿಗೆ ಬೀಳ್ತೀನಿ, ಇಲ್ಲೇ ಉಳಿದುಕೊಳ್ಳಿ’; ವರ್ತೂರು ಸಂತೋಷ್​ಗೆ ತುಕಾಲಿ ಮನವಿ

ದೀಪಾವಳಿ ಹಬ್ಬದ ಪ್ರಯುಕ್ತ ಎಲ್ಲರ ಮನೆಯಿಂದ ಊಟ ಬಂದಿತ್ತು. ವರ್ತೂರು ಸಂತೋಷ್​ಗೆ ಮಾತ್ರ ಈ ಭಾಗ್ಯ ಸಿಗಲಿಲ್ಲ. ಇದನ್ನು ನೋಡಿ ಅವರಿಗೆ ಸಾಕಷ್ಟು ಬೇಸರ ಆಯಿತು. ಆ ಬಳಿಕ ಮನೆಯಿಂದ ಊಟವನ್ನು ಹಿಡಿದುಕೊಂಡು ಬಿಗ್ ಬಾಸ್ ಒಳಗೆ ಬಂದರು ವರ್ತೂರು ಸಂತೋಷ್ ತಾಯಿ. ಇದನ್ನು ನೋಡಿ ಖುಷಿಯಾದರು ಅವರು. ‘ನನ್ನ ಆಸೆಯನ್ನು ನೆರವೇರಿಸುತ್ತಾನೆ ನನ್ನ ಮಗ’ ಎಂದು ವರ್ತೂರು ಸಂತೋಷ್ ತಾಯಿ ಹೇಳಿದ್ದಾರೆ. ಈ ಮೂಲಕ ಸಂತೋಷ್ ಮನೆಯಲ್ಲಿ ಉಳಿದುಕೊಳ್ಳೋದು ಬಹುತೇಕ ಖಚಿತ ಆಗಿದೆ. ಈ ಎಪಿಸೋಡ್ ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಪ್ರಸಾರ ಆಗಲಿದೆ. 24 ಗಂಟೆ ಲೈವ್ ನೋಡೋಕೆ ಅವಕಾಶ ಸಿಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ