AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ತೂರು ಸಂತೋಷ್​ಗೆ ಬಿಗ್​ ಬಾಸ್​ನಲ್ಲಿ ಬಿಗ್ ಸರ್​ಪ್ರೈಸ್; ಅವರು ಉಳಿದುಕೊಳ್ಳೋದು ಪಕ್ಕಾ

ವೀಕೆಂಡ್​ನಲ್ಲಿ ಸಂತೋಷ್ ಅವರು ಮನೆಗೆ ಹೋಗುತ್ತೇನೆ ಎಂದರು. ಆದರೆ, ಇದಕ್ಕೆ ಸುದೀಪ್ ಅವಕಾಶ ನೀಡುವುದಿಲ್ಲ ಎಂದರು. ಅವರ ಮನಸ್ಸು ಗೊಂದಲದಲ್ಲೇ ಇತ್ತು. ಈಗ ಬಿಗ್ ಬಾಸ್ ಕಡೆಯಿಂದ ಅವರಿಗೆ ಸರ್​ಪ್ರೈಸ್ ಸಿಕ್ಕಿದೆ.

ವರ್ತೂರು ಸಂತೋಷ್​ಗೆ ಬಿಗ್​ ಬಾಸ್​ನಲ್ಲಿ ಬಿಗ್ ಸರ್​ಪ್ರೈಸ್; ಅವರು ಉಳಿದುಕೊಳ್ಳೋದು ಪಕ್ಕಾ
ವರ್ತೂರು ಸಂತೋಷ್
ರಾಜೇಶ್ ದುಗ್ಗುಮನೆ
|

Updated on: Nov 13, 2023 | 2:42 PM

Share

‘ಬಿಗ್ ಬಾಸ್​’ನಿಂದ ನಾನು ಹೊರ ಹೋಗುತ್ತೇನೆ ಎಂದು ವರ್ತೂರು ಸಂತೋಷ್ (Varthur Santosh) ಅವರು ಹಠ ಹಿಡಿದು ಕುಳಿತಿದ್ದರು. ಸುದೀಪ್ ಅವರು ಪರಿಪರಿಯಾಗಿ ಕೇಳಿಕೊಂಡರೂ ಅವರು ಕೇಳೋಕೆ ಸಿದ್ಧರಿರಲಿಲ್ಲ. ‘ಭಾಗ್ಯಲಕ್ಷ್ಮೀ’ ಧಾರಾವಾಹಿಯ ಮುಖ್ಯ ಕಲಾವಿದೆ ಸುಷ್ಮಾ ರಾವ್ ಅವರು ಬಿಗ್ ಬಾಸ್​ಗೆ ಬಂದು ಸಂತೋಷ್ ಅವರ ಮನ ಒಲಿಸಲು ಪ್ರಯತ್ನಿಸದರೂ ಮನಸ್ಸು ಬದಲಾಗಿರಲಿಲ್ಲ. ಈಗ ಬಿಗ್ ಬಾಸ್​ನಲ್ಲಿ ಅವರಿಗೆ ಸರ್​ಪ್ರೈಸ್ ಸಿಕ್ಕಿದೆ. ದೊಡ್ಮನೆಯಲ್ಲಿ ಅಮ್ಮನ ಕೈತುತ್ತು ಸಿಕ್ಕಿದೆ.

‘ಬಿಗ್ ಬಾಸ್’ ಒಳಗೆ ವರ್ತೂರು ಸಂತೋಷ್ ಅವರು ಎಂಟ್ರಿ ಕೊಟ್ಟರು. ಅವರ ಕತ್ತಿನಲ್ಲಿದ್ದ ಹುಲಿಯ ಉಗುರು ಎಲ್ಲರ ಕಣ್ಣುಕುಕ್ಕಿತು. ವನ್ಯಜೀವಿ ಸಂರಕ್ಷಣೆ ಆ್ಯಕ್ಟ್ ಅಡಿಯಲ್ಲಿ ಅವರನ್ನು ಬಂಧಿಸಲಾಯಿತು. 14 ದಿನ ನ್ಯಾಯಾಂಗ ಬಂಧನವನ್ನೂ ವಿಧಿಸಲಾಯಿತು. ಕೆಲವೇ ದಿನಗಳಲ್ಲಿ ಅವರಿಗೆ ಜಾಮೀನು ಸಿಕ್ಕಿತು. ಜಾಮೀನು ಪಡೆದು ಹೊರ ಬಂದ ಅವರು ನೇರವಾಗಿ ಬಿಗ್ ಬಾಸ್ ಮನೆಗೆ ಹೋಗಿದ್ದಾರೆ.

ಅಲ್ಲಿ ಮೊದಲ ವಾರ ಅವರು ನಾರ್ಮಲ್ ಆಗಿದ್ದರು. ಎರಡನೇ ವಾರ ಅವರು ಡಲ್ ಹೊಡೆದಿದ್ದಾರೆ. ವೀಕೆಂಡ್​ನಲ್ಲಿ ಅವರು ಮನೆಗೆ ಹೋಗುತ್ತೇನೆ ಎಂದರು. ಆದರೆ, ಇದಕ್ಕೆ ಸುದೀಪ್ ಅವಕಾಶ ನೀಡುವುದಿಲ್ಲ ಎಂದರು. ಅವರ ಮನಸ್ಸು ಗೊಂದಲದಲ್ಲೇ ಇತ್ತು. ಈಗ ಬಿಗ್ ಬಾಸ್ ಕಡೆಯಿಂದ ಅವರಿಗೆ ಸರ್​ಪ್ರೈಸ್ ಸಿಕ್ಕಿದೆ.

ಇದನ್ನೂ ಓದಿ: ‘ಕಾಲಿಗೆ ಬೀಳ್ತೀನಿ, ಇಲ್ಲೇ ಉಳಿದುಕೊಳ್ಳಿ’; ವರ್ತೂರು ಸಂತೋಷ್​ಗೆ ತುಕಾಲಿ ಮನವಿ

ದೀಪಾವಳಿ ಹಬ್ಬದ ಪ್ರಯುಕ್ತ ಎಲ್ಲರ ಮನೆಯಿಂದ ಊಟ ಬಂದಿತ್ತು. ವರ್ತೂರು ಸಂತೋಷ್​ಗೆ ಮಾತ್ರ ಈ ಭಾಗ್ಯ ಸಿಗಲಿಲ್ಲ. ಇದನ್ನು ನೋಡಿ ಅವರಿಗೆ ಸಾಕಷ್ಟು ಬೇಸರ ಆಯಿತು. ಆ ಬಳಿಕ ಮನೆಯಿಂದ ಊಟವನ್ನು ಹಿಡಿದುಕೊಂಡು ಬಿಗ್ ಬಾಸ್ ಒಳಗೆ ಬಂದರು ವರ್ತೂರು ಸಂತೋಷ್ ತಾಯಿ. ಇದನ್ನು ನೋಡಿ ಖುಷಿಯಾದರು ಅವರು. ‘ನನ್ನ ಆಸೆಯನ್ನು ನೆರವೇರಿಸುತ್ತಾನೆ ನನ್ನ ಮಗ’ ಎಂದು ವರ್ತೂರು ಸಂತೋಷ್ ತಾಯಿ ಹೇಳಿದ್ದಾರೆ. ಈ ಮೂಲಕ ಸಂತೋಷ್ ಮನೆಯಲ್ಲಿ ಉಳಿದುಕೊಳ್ಳೋದು ಬಹುತೇಕ ಖಚಿತ ಆಗಿದೆ. ಈ ಎಪಿಸೋಡ್ ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಪ್ರಸಾರ ಆಗಲಿದೆ. 24 ಗಂಟೆ ಲೈವ್ ನೋಡೋಕೆ ಅವಕಾಶ ಸಿಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ