AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Varthur Santhosh: ಆರೋಪ ಸಾಬೀತಾದರೆ ಸಂತೋಷ್​ಗೆ ಎಷ್ಟು ವರ್ಷ ಶಿಕ್ಷೆ? ಇಲ್ಲಿದೆ ಮಾಹಿತಿ

ಹುಲಿ ಉಗುರು ಇರುವ ಲಾಕೆಟ್ ಹಾಕಿಯೇ ಬಿಗ್ ಬಾಸ್ ಮನೆ ಒಳಗೆ ಬಂದಿದ್ದರು ಸಂತೋಷ್. ಈ ಲಾಕೆಟ್ ಎಲ್ಲರ ಕಣ್ಣು ಕುಕ್ಕಿತ್ತು. ಅನೇಕರಿಗೆ ಇದು ಹುಲಿ ಉಗುರು ಇರಬಹುದು ಎನ್ನುವ ಅನುಮಾನ ಮೂಡಿತ್ತು. ಈ ಕಾರಣದಿಂದಲೇ ಅರಣ್ಯಾಧಿಕಾರಿಗಳು ಬಿಗ್ ಬಾಸ್​ಗೆ ತೆರಳಿ ಅವರನ್ನು ಅರೆಸ್ಟ್ ಮಾಡಿದ್ದಾರೆ.

Varthur Santhosh: ಆರೋಪ ಸಾಬೀತಾದರೆ ಸಂತೋಷ್​ಗೆ ಎಷ್ಟು ವರ್ಷ ಶಿಕ್ಷೆ? ಇಲ್ಲಿದೆ ಮಾಹಿತಿ
ವರ್ತೂರು ಸಂತೋಷ್
ರಾಜೇಶ್ ದುಗ್ಗುಮನೆ
|

Updated on: Oct 23, 2023 | 12:02 PM

Share

ವರ್ತೂರು ಸಂತೋಷ್ (Varthur Santhosh) ಅವರನ್ನು ಅರಣ್ಯಾಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಬಿಗ್ ಬಾಸ್ ಮನೆ ಒಳಗೆ ಬಂದ ಅರಣ್ಯಾಧಿಕಾರಿಗಳು ಅವರನ್ನು ಕರೆದೊಯ್ದಿದ್ದಾರೆ. ಕನ್ನಡ ಬಿಗ್ ಬಾಸ್ ಇತಿಹಾಸದಲ್ಲಿ ಈ ರೀತಿ ಆಗಿರುವುದು ಇದೇ ಮೊದಲು. ಸದ್ಯ ಸಂತೋಷ್ ಅವರ ಬಳಿ ಇದ್ದಿದ್ದು ಹುಲಿ ಉಗುರು ಹೌದು ಎಂಬುದು ಸಾಬೀತಾದರೆ ಅವರಿಗೆ ಶಿಕ್ಷೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಹುಲಿ ಉಗುರು ಇರುವ ಲಾಕೆಟ್ ಹಾಕಿಯೇ ಬಿಗ್ ಬಾಸ್ ಮನೆ ಒಳಗೆ ಬಂದಿದ್ದರು ಸಂತೋಷ್. ಈ ಲಾಕೆಟ್ ಎಲ್ಲರ ಕಣ್ಣು ಕುಕ್ಕಿತ್ತು. ಅನೇಕರಿಗೆ ಇದು ಹುಲಿ ಉಗುರು ಇರಬಹುದು ಎನ್ನುವ ಅನುಮಾನ ಮೂಡಿತ್ತು. ಈ ಕಾರಣದಿಂದಲೇ ಅರಣ್ಯಾಧಿಕಾರಿಗಳು ಬಿಗ್ ಬಾಸ್​ಗೆ ತೆರಳಿ ಅವರನ್ನು ಅರೆಸ್ಟ್ ಮಾಡಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಅಡಿಯಲ್ಲಿ ಇವರ ಬಂಧನ ಆಗಿದೆ. ಆರೋಪ ಸಾಬೀತಾದರೆ 3ರಿಂದ 7 ವರ್ಷಗಳವರೆಗೆ ಶಿಕ್ಷೆ ಆಗುತ್ತದೆ. 10,000ರಿಂದ 25,000ದವರೆಗೆ ದಂಡ ವಿಧಿಸುವ ಸಾಧ್ಯತೆ ಇದೆ.

ಸದ್ಯ ವರ್ತೂರು ಸಂತೋಷ್ ಅವರನ್ನು ಅರಣ್ಯಾಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ‘ನಾನು ವ್ಯಕ್ತಿಯೊಬ್ಬನಿಂದ ಹುಲಿ ಉಗುರು ಖರೀದಿಸಿದ್ದೆ’ ಎಂದು ಅವರು ಅರಣ್ಯಾಧಿಕಾರಿಗಳ ಎದುರು ಹೇಳಿದ್ದಾರಂತೆ. ಈ ಮೂಲಕ ತಮಗೆ ಹುಲಿ ಉಗುರು ಸಿಕ್ಕಿದ್ದು ಹೇಗೆ ಎಂಬುದನ್ನು ಅವರು ವಿವರಿಸಿದ್ದಾರೆ. ಪ್ರಕರಣ ಯಾವ ರೀತಿಯಲ್ಲಿ ಸಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಹುಲಿಯುಗುರು ಪೆಂಡೆಂಟ್ ಧರಿಸಿದ್ದ ಬಿಗ್ ಬಾಸ್ ಕನ್ನಡ ಸ್ಪರ್ಧಿ ವರ್ತೂರು ಸಂತೋಷ್ ಬಂಧಿಸಿದ ಅರಣ್ಯಾಧಿಕಾರಿಗಳು

ವರ್ತೂರು ಸಂತೋಷ್ ಅವರು ರೈತನಾಗಿ ಗುರುತಿಸಿಕೊಂಡಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಚರ್ಚೆಗೆ ಒಳಗಾಗಿದ್ದು ಇದೆ. ಬಿಗ್ ಬಾಸ್​ಗೆ ಹೋದ ಬಳಿಕ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿತ್ತು. ಈಗ ಹುಲಿ ಉಗುರು ಪ್ರಕರಣದಲ್ಲಿ ಅವರಿಗೆ ಸಂಕಷ್ಟ ಎದುರಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​