AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Varthur Santhosh: ಆರೋಪ ಸಾಬೀತಾದರೆ ಸಂತೋಷ್​ಗೆ ಎಷ್ಟು ವರ್ಷ ಶಿಕ್ಷೆ? ಇಲ್ಲಿದೆ ಮಾಹಿತಿ

ಹುಲಿ ಉಗುರು ಇರುವ ಲಾಕೆಟ್ ಹಾಕಿಯೇ ಬಿಗ್ ಬಾಸ್ ಮನೆ ಒಳಗೆ ಬಂದಿದ್ದರು ಸಂತೋಷ್. ಈ ಲಾಕೆಟ್ ಎಲ್ಲರ ಕಣ್ಣು ಕುಕ್ಕಿತ್ತು. ಅನೇಕರಿಗೆ ಇದು ಹುಲಿ ಉಗುರು ಇರಬಹುದು ಎನ್ನುವ ಅನುಮಾನ ಮೂಡಿತ್ತು. ಈ ಕಾರಣದಿಂದಲೇ ಅರಣ್ಯಾಧಿಕಾರಿಗಳು ಬಿಗ್ ಬಾಸ್​ಗೆ ತೆರಳಿ ಅವರನ್ನು ಅರೆಸ್ಟ್ ಮಾಡಿದ್ದಾರೆ.

Varthur Santhosh: ಆರೋಪ ಸಾಬೀತಾದರೆ ಸಂತೋಷ್​ಗೆ ಎಷ್ಟು ವರ್ಷ ಶಿಕ್ಷೆ? ಇಲ್ಲಿದೆ ಮಾಹಿತಿ
ವರ್ತೂರು ಸಂತೋಷ್
ರಾಜೇಶ್ ದುಗ್ಗುಮನೆ
|

Updated on: Oct 23, 2023 | 12:02 PM

Share

ವರ್ತೂರು ಸಂತೋಷ್ (Varthur Santhosh) ಅವರನ್ನು ಅರಣ್ಯಾಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಬಿಗ್ ಬಾಸ್ ಮನೆ ಒಳಗೆ ಬಂದ ಅರಣ್ಯಾಧಿಕಾರಿಗಳು ಅವರನ್ನು ಕರೆದೊಯ್ದಿದ್ದಾರೆ. ಕನ್ನಡ ಬಿಗ್ ಬಾಸ್ ಇತಿಹಾಸದಲ್ಲಿ ಈ ರೀತಿ ಆಗಿರುವುದು ಇದೇ ಮೊದಲು. ಸದ್ಯ ಸಂತೋಷ್ ಅವರ ಬಳಿ ಇದ್ದಿದ್ದು ಹುಲಿ ಉಗುರು ಹೌದು ಎಂಬುದು ಸಾಬೀತಾದರೆ ಅವರಿಗೆ ಶಿಕ್ಷೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಹುಲಿ ಉಗುರು ಇರುವ ಲಾಕೆಟ್ ಹಾಕಿಯೇ ಬಿಗ್ ಬಾಸ್ ಮನೆ ಒಳಗೆ ಬಂದಿದ್ದರು ಸಂತೋಷ್. ಈ ಲಾಕೆಟ್ ಎಲ್ಲರ ಕಣ್ಣು ಕುಕ್ಕಿತ್ತು. ಅನೇಕರಿಗೆ ಇದು ಹುಲಿ ಉಗುರು ಇರಬಹುದು ಎನ್ನುವ ಅನುಮಾನ ಮೂಡಿತ್ತು. ಈ ಕಾರಣದಿಂದಲೇ ಅರಣ್ಯಾಧಿಕಾರಿಗಳು ಬಿಗ್ ಬಾಸ್​ಗೆ ತೆರಳಿ ಅವರನ್ನು ಅರೆಸ್ಟ್ ಮಾಡಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಅಡಿಯಲ್ಲಿ ಇವರ ಬಂಧನ ಆಗಿದೆ. ಆರೋಪ ಸಾಬೀತಾದರೆ 3ರಿಂದ 7 ವರ್ಷಗಳವರೆಗೆ ಶಿಕ್ಷೆ ಆಗುತ್ತದೆ. 10,000ರಿಂದ 25,000ದವರೆಗೆ ದಂಡ ವಿಧಿಸುವ ಸಾಧ್ಯತೆ ಇದೆ.

ಸದ್ಯ ವರ್ತೂರು ಸಂತೋಷ್ ಅವರನ್ನು ಅರಣ್ಯಾಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ‘ನಾನು ವ್ಯಕ್ತಿಯೊಬ್ಬನಿಂದ ಹುಲಿ ಉಗುರು ಖರೀದಿಸಿದ್ದೆ’ ಎಂದು ಅವರು ಅರಣ್ಯಾಧಿಕಾರಿಗಳ ಎದುರು ಹೇಳಿದ್ದಾರಂತೆ. ಈ ಮೂಲಕ ತಮಗೆ ಹುಲಿ ಉಗುರು ಸಿಕ್ಕಿದ್ದು ಹೇಗೆ ಎಂಬುದನ್ನು ಅವರು ವಿವರಿಸಿದ್ದಾರೆ. ಪ್ರಕರಣ ಯಾವ ರೀತಿಯಲ್ಲಿ ಸಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಹುಲಿಯುಗುರು ಪೆಂಡೆಂಟ್ ಧರಿಸಿದ್ದ ಬಿಗ್ ಬಾಸ್ ಕನ್ನಡ ಸ್ಪರ್ಧಿ ವರ್ತೂರು ಸಂತೋಷ್ ಬಂಧಿಸಿದ ಅರಣ್ಯಾಧಿಕಾರಿಗಳು

ವರ್ತೂರು ಸಂತೋಷ್ ಅವರು ರೈತನಾಗಿ ಗುರುತಿಸಿಕೊಂಡಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಚರ್ಚೆಗೆ ಒಳಗಾಗಿದ್ದು ಇದೆ. ಬಿಗ್ ಬಾಸ್​ಗೆ ಹೋದ ಬಳಿಕ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿತ್ತು. ಈಗ ಹುಲಿ ಉಗುರು ಪ್ರಕರಣದಲ್ಲಿ ಅವರಿಗೆ ಸಂಕಷ್ಟ ಎದುರಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ