AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Varthur Santhosh: ಆರೋಪ ಸಾಬೀತಾದರೆ ಸಂತೋಷ್​ಗೆ ಎಷ್ಟು ವರ್ಷ ಶಿಕ್ಷೆ? ಇಲ್ಲಿದೆ ಮಾಹಿತಿ

ಹುಲಿ ಉಗುರು ಇರುವ ಲಾಕೆಟ್ ಹಾಕಿಯೇ ಬಿಗ್ ಬಾಸ್ ಮನೆ ಒಳಗೆ ಬಂದಿದ್ದರು ಸಂತೋಷ್. ಈ ಲಾಕೆಟ್ ಎಲ್ಲರ ಕಣ್ಣು ಕುಕ್ಕಿತ್ತು. ಅನೇಕರಿಗೆ ಇದು ಹುಲಿ ಉಗುರು ಇರಬಹುದು ಎನ್ನುವ ಅನುಮಾನ ಮೂಡಿತ್ತು. ಈ ಕಾರಣದಿಂದಲೇ ಅರಣ್ಯಾಧಿಕಾರಿಗಳು ಬಿಗ್ ಬಾಸ್​ಗೆ ತೆರಳಿ ಅವರನ್ನು ಅರೆಸ್ಟ್ ಮಾಡಿದ್ದಾರೆ.

Varthur Santhosh: ಆರೋಪ ಸಾಬೀತಾದರೆ ಸಂತೋಷ್​ಗೆ ಎಷ್ಟು ವರ್ಷ ಶಿಕ್ಷೆ? ಇಲ್ಲಿದೆ ಮಾಹಿತಿ
ವರ್ತೂರು ಸಂತೋಷ್
ರಾಜೇಶ್ ದುಗ್ಗುಮನೆ
|

Updated on: Oct 23, 2023 | 12:02 PM

Share

ವರ್ತೂರು ಸಂತೋಷ್ (Varthur Santhosh) ಅವರನ್ನು ಅರಣ್ಯಾಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಬಿಗ್ ಬಾಸ್ ಮನೆ ಒಳಗೆ ಬಂದ ಅರಣ್ಯಾಧಿಕಾರಿಗಳು ಅವರನ್ನು ಕರೆದೊಯ್ದಿದ್ದಾರೆ. ಕನ್ನಡ ಬಿಗ್ ಬಾಸ್ ಇತಿಹಾಸದಲ್ಲಿ ಈ ರೀತಿ ಆಗಿರುವುದು ಇದೇ ಮೊದಲು. ಸದ್ಯ ಸಂತೋಷ್ ಅವರ ಬಳಿ ಇದ್ದಿದ್ದು ಹುಲಿ ಉಗುರು ಹೌದು ಎಂಬುದು ಸಾಬೀತಾದರೆ ಅವರಿಗೆ ಶಿಕ್ಷೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಹುಲಿ ಉಗುರು ಇರುವ ಲಾಕೆಟ್ ಹಾಕಿಯೇ ಬಿಗ್ ಬಾಸ್ ಮನೆ ಒಳಗೆ ಬಂದಿದ್ದರು ಸಂತೋಷ್. ಈ ಲಾಕೆಟ್ ಎಲ್ಲರ ಕಣ್ಣು ಕುಕ್ಕಿತ್ತು. ಅನೇಕರಿಗೆ ಇದು ಹುಲಿ ಉಗುರು ಇರಬಹುದು ಎನ್ನುವ ಅನುಮಾನ ಮೂಡಿತ್ತು. ಈ ಕಾರಣದಿಂದಲೇ ಅರಣ್ಯಾಧಿಕಾರಿಗಳು ಬಿಗ್ ಬಾಸ್​ಗೆ ತೆರಳಿ ಅವರನ್ನು ಅರೆಸ್ಟ್ ಮಾಡಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಅಡಿಯಲ್ಲಿ ಇವರ ಬಂಧನ ಆಗಿದೆ. ಆರೋಪ ಸಾಬೀತಾದರೆ 3ರಿಂದ 7 ವರ್ಷಗಳವರೆಗೆ ಶಿಕ್ಷೆ ಆಗುತ್ತದೆ. 10,000ರಿಂದ 25,000ದವರೆಗೆ ದಂಡ ವಿಧಿಸುವ ಸಾಧ್ಯತೆ ಇದೆ.

ಸದ್ಯ ವರ್ತೂರು ಸಂತೋಷ್ ಅವರನ್ನು ಅರಣ್ಯಾಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ‘ನಾನು ವ್ಯಕ್ತಿಯೊಬ್ಬನಿಂದ ಹುಲಿ ಉಗುರು ಖರೀದಿಸಿದ್ದೆ’ ಎಂದು ಅವರು ಅರಣ್ಯಾಧಿಕಾರಿಗಳ ಎದುರು ಹೇಳಿದ್ದಾರಂತೆ. ಈ ಮೂಲಕ ತಮಗೆ ಹುಲಿ ಉಗುರು ಸಿಕ್ಕಿದ್ದು ಹೇಗೆ ಎಂಬುದನ್ನು ಅವರು ವಿವರಿಸಿದ್ದಾರೆ. ಪ್ರಕರಣ ಯಾವ ರೀತಿಯಲ್ಲಿ ಸಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಹುಲಿಯುಗುರು ಪೆಂಡೆಂಟ್ ಧರಿಸಿದ್ದ ಬಿಗ್ ಬಾಸ್ ಕನ್ನಡ ಸ್ಪರ್ಧಿ ವರ್ತೂರು ಸಂತೋಷ್ ಬಂಧಿಸಿದ ಅರಣ್ಯಾಧಿಕಾರಿಗಳು

ವರ್ತೂರು ಸಂತೋಷ್ ಅವರು ರೈತನಾಗಿ ಗುರುತಿಸಿಕೊಂಡಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಚರ್ಚೆಗೆ ಒಳಗಾಗಿದ್ದು ಇದೆ. ಬಿಗ್ ಬಾಸ್​ಗೆ ಹೋದ ಬಳಿಕ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿತ್ತು. ಈಗ ಹುಲಿ ಉಗುರು ಪ್ರಕರಣದಲ್ಲಿ ಅವರಿಗೆ ಸಂಕಷ್ಟ ಎದುರಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್