AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Varthur Santhosh: ಆರೋಪ ಸಾಬೀತಾದರೆ ಸಂತೋಷ್​ಗೆ ಎಷ್ಟು ವರ್ಷ ಶಿಕ್ಷೆ? ಇಲ್ಲಿದೆ ಮಾಹಿತಿ

ಹುಲಿ ಉಗುರು ಇರುವ ಲಾಕೆಟ್ ಹಾಕಿಯೇ ಬಿಗ್ ಬಾಸ್ ಮನೆ ಒಳಗೆ ಬಂದಿದ್ದರು ಸಂತೋಷ್. ಈ ಲಾಕೆಟ್ ಎಲ್ಲರ ಕಣ್ಣು ಕುಕ್ಕಿತ್ತು. ಅನೇಕರಿಗೆ ಇದು ಹುಲಿ ಉಗುರು ಇರಬಹುದು ಎನ್ನುವ ಅನುಮಾನ ಮೂಡಿತ್ತು. ಈ ಕಾರಣದಿಂದಲೇ ಅರಣ್ಯಾಧಿಕಾರಿಗಳು ಬಿಗ್ ಬಾಸ್​ಗೆ ತೆರಳಿ ಅವರನ್ನು ಅರೆಸ್ಟ್ ಮಾಡಿದ್ದಾರೆ.

Varthur Santhosh: ಆರೋಪ ಸಾಬೀತಾದರೆ ಸಂತೋಷ್​ಗೆ ಎಷ್ಟು ವರ್ಷ ಶಿಕ್ಷೆ? ಇಲ್ಲಿದೆ ಮಾಹಿತಿ
ವರ್ತೂರು ಸಂತೋಷ್
ರಾಜೇಶ್ ದುಗ್ಗುಮನೆ
|

Updated on: Oct 23, 2023 | 12:02 PM

Share

ವರ್ತೂರು ಸಂತೋಷ್ (Varthur Santhosh) ಅವರನ್ನು ಅರಣ್ಯಾಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಬಿಗ್ ಬಾಸ್ ಮನೆ ಒಳಗೆ ಬಂದ ಅರಣ್ಯಾಧಿಕಾರಿಗಳು ಅವರನ್ನು ಕರೆದೊಯ್ದಿದ್ದಾರೆ. ಕನ್ನಡ ಬಿಗ್ ಬಾಸ್ ಇತಿಹಾಸದಲ್ಲಿ ಈ ರೀತಿ ಆಗಿರುವುದು ಇದೇ ಮೊದಲು. ಸದ್ಯ ಸಂತೋಷ್ ಅವರ ಬಳಿ ಇದ್ದಿದ್ದು ಹುಲಿ ಉಗುರು ಹೌದು ಎಂಬುದು ಸಾಬೀತಾದರೆ ಅವರಿಗೆ ಶಿಕ್ಷೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಹುಲಿ ಉಗುರು ಇರುವ ಲಾಕೆಟ್ ಹಾಕಿಯೇ ಬಿಗ್ ಬಾಸ್ ಮನೆ ಒಳಗೆ ಬಂದಿದ್ದರು ಸಂತೋಷ್. ಈ ಲಾಕೆಟ್ ಎಲ್ಲರ ಕಣ್ಣು ಕುಕ್ಕಿತ್ತು. ಅನೇಕರಿಗೆ ಇದು ಹುಲಿ ಉಗುರು ಇರಬಹುದು ಎನ್ನುವ ಅನುಮಾನ ಮೂಡಿತ್ತು. ಈ ಕಾರಣದಿಂದಲೇ ಅರಣ್ಯಾಧಿಕಾರಿಗಳು ಬಿಗ್ ಬಾಸ್​ಗೆ ತೆರಳಿ ಅವರನ್ನು ಅರೆಸ್ಟ್ ಮಾಡಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಅಡಿಯಲ್ಲಿ ಇವರ ಬಂಧನ ಆಗಿದೆ. ಆರೋಪ ಸಾಬೀತಾದರೆ 3ರಿಂದ 7 ವರ್ಷಗಳವರೆಗೆ ಶಿಕ್ಷೆ ಆಗುತ್ತದೆ. 10,000ರಿಂದ 25,000ದವರೆಗೆ ದಂಡ ವಿಧಿಸುವ ಸಾಧ್ಯತೆ ಇದೆ.

ಸದ್ಯ ವರ್ತೂರು ಸಂತೋಷ್ ಅವರನ್ನು ಅರಣ್ಯಾಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ‘ನಾನು ವ್ಯಕ್ತಿಯೊಬ್ಬನಿಂದ ಹುಲಿ ಉಗುರು ಖರೀದಿಸಿದ್ದೆ’ ಎಂದು ಅವರು ಅರಣ್ಯಾಧಿಕಾರಿಗಳ ಎದುರು ಹೇಳಿದ್ದಾರಂತೆ. ಈ ಮೂಲಕ ತಮಗೆ ಹುಲಿ ಉಗುರು ಸಿಕ್ಕಿದ್ದು ಹೇಗೆ ಎಂಬುದನ್ನು ಅವರು ವಿವರಿಸಿದ್ದಾರೆ. ಪ್ರಕರಣ ಯಾವ ರೀತಿಯಲ್ಲಿ ಸಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಹುಲಿಯುಗುರು ಪೆಂಡೆಂಟ್ ಧರಿಸಿದ್ದ ಬಿಗ್ ಬಾಸ್ ಕನ್ನಡ ಸ್ಪರ್ಧಿ ವರ್ತೂರು ಸಂತೋಷ್ ಬಂಧಿಸಿದ ಅರಣ್ಯಾಧಿಕಾರಿಗಳು

ವರ್ತೂರು ಸಂತೋಷ್ ಅವರು ರೈತನಾಗಿ ಗುರುತಿಸಿಕೊಂಡಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಚರ್ಚೆಗೆ ಒಳಗಾಗಿದ್ದು ಇದೆ. ಬಿಗ್ ಬಾಸ್​ಗೆ ಹೋದ ಬಳಿಕ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿತ್ತು. ಈಗ ಹುಲಿ ಉಗುರು ಪ್ರಕರಣದಲ್ಲಿ ಅವರಿಗೆ ಸಂಕಷ್ಟ ಎದುರಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ