AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Varthur Santhosh: ಆರೋಪ ಸಾಬೀತಾದರೆ ಸಂತೋಷ್​ಗೆ ಎಷ್ಟು ವರ್ಷ ಶಿಕ್ಷೆ? ಇಲ್ಲಿದೆ ಮಾಹಿತಿ

ಹುಲಿ ಉಗುರು ಇರುವ ಲಾಕೆಟ್ ಹಾಕಿಯೇ ಬಿಗ್ ಬಾಸ್ ಮನೆ ಒಳಗೆ ಬಂದಿದ್ದರು ಸಂತೋಷ್. ಈ ಲಾಕೆಟ್ ಎಲ್ಲರ ಕಣ್ಣು ಕುಕ್ಕಿತ್ತು. ಅನೇಕರಿಗೆ ಇದು ಹುಲಿ ಉಗುರು ಇರಬಹುದು ಎನ್ನುವ ಅನುಮಾನ ಮೂಡಿತ್ತು. ಈ ಕಾರಣದಿಂದಲೇ ಅರಣ್ಯಾಧಿಕಾರಿಗಳು ಬಿಗ್ ಬಾಸ್​ಗೆ ತೆರಳಿ ಅವರನ್ನು ಅರೆಸ್ಟ್ ಮಾಡಿದ್ದಾರೆ.

Varthur Santhosh: ಆರೋಪ ಸಾಬೀತಾದರೆ ಸಂತೋಷ್​ಗೆ ಎಷ್ಟು ವರ್ಷ ಶಿಕ್ಷೆ? ಇಲ್ಲಿದೆ ಮಾಹಿತಿ
ವರ್ತೂರು ಸಂತೋಷ್
ರಾಜೇಶ್ ದುಗ್ಗುಮನೆ
|

Updated on: Oct 23, 2023 | 12:02 PM

Share

ವರ್ತೂರು ಸಂತೋಷ್ (Varthur Santhosh) ಅವರನ್ನು ಅರಣ್ಯಾಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಬಿಗ್ ಬಾಸ್ ಮನೆ ಒಳಗೆ ಬಂದ ಅರಣ್ಯಾಧಿಕಾರಿಗಳು ಅವರನ್ನು ಕರೆದೊಯ್ದಿದ್ದಾರೆ. ಕನ್ನಡ ಬಿಗ್ ಬಾಸ್ ಇತಿಹಾಸದಲ್ಲಿ ಈ ರೀತಿ ಆಗಿರುವುದು ಇದೇ ಮೊದಲು. ಸದ್ಯ ಸಂತೋಷ್ ಅವರ ಬಳಿ ಇದ್ದಿದ್ದು ಹುಲಿ ಉಗುರು ಹೌದು ಎಂಬುದು ಸಾಬೀತಾದರೆ ಅವರಿಗೆ ಶಿಕ್ಷೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಹುಲಿ ಉಗುರು ಇರುವ ಲಾಕೆಟ್ ಹಾಕಿಯೇ ಬಿಗ್ ಬಾಸ್ ಮನೆ ಒಳಗೆ ಬಂದಿದ್ದರು ಸಂತೋಷ್. ಈ ಲಾಕೆಟ್ ಎಲ್ಲರ ಕಣ್ಣು ಕುಕ್ಕಿತ್ತು. ಅನೇಕರಿಗೆ ಇದು ಹುಲಿ ಉಗುರು ಇರಬಹುದು ಎನ್ನುವ ಅನುಮಾನ ಮೂಡಿತ್ತು. ಈ ಕಾರಣದಿಂದಲೇ ಅರಣ್ಯಾಧಿಕಾರಿಗಳು ಬಿಗ್ ಬಾಸ್​ಗೆ ತೆರಳಿ ಅವರನ್ನು ಅರೆಸ್ಟ್ ಮಾಡಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಅಡಿಯಲ್ಲಿ ಇವರ ಬಂಧನ ಆಗಿದೆ. ಆರೋಪ ಸಾಬೀತಾದರೆ 3ರಿಂದ 7 ವರ್ಷಗಳವರೆಗೆ ಶಿಕ್ಷೆ ಆಗುತ್ತದೆ. 10,000ರಿಂದ 25,000ದವರೆಗೆ ದಂಡ ವಿಧಿಸುವ ಸಾಧ್ಯತೆ ಇದೆ.

ಸದ್ಯ ವರ್ತೂರು ಸಂತೋಷ್ ಅವರನ್ನು ಅರಣ್ಯಾಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ‘ನಾನು ವ್ಯಕ್ತಿಯೊಬ್ಬನಿಂದ ಹುಲಿ ಉಗುರು ಖರೀದಿಸಿದ್ದೆ’ ಎಂದು ಅವರು ಅರಣ್ಯಾಧಿಕಾರಿಗಳ ಎದುರು ಹೇಳಿದ್ದಾರಂತೆ. ಈ ಮೂಲಕ ತಮಗೆ ಹುಲಿ ಉಗುರು ಸಿಕ್ಕಿದ್ದು ಹೇಗೆ ಎಂಬುದನ್ನು ಅವರು ವಿವರಿಸಿದ್ದಾರೆ. ಪ್ರಕರಣ ಯಾವ ರೀತಿಯಲ್ಲಿ ಸಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಹುಲಿಯುಗುರು ಪೆಂಡೆಂಟ್ ಧರಿಸಿದ್ದ ಬಿಗ್ ಬಾಸ್ ಕನ್ನಡ ಸ್ಪರ್ಧಿ ವರ್ತೂರು ಸಂತೋಷ್ ಬಂಧಿಸಿದ ಅರಣ್ಯಾಧಿಕಾರಿಗಳು

ವರ್ತೂರು ಸಂತೋಷ್ ಅವರು ರೈತನಾಗಿ ಗುರುತಿಸಿಕೊಂಡಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಚರ್ಚೆಗೆ ಒಳಗಾಗಿದ್ದು ಇದೆ. ಬಿಗ್ ಬಾಸ್​ಗೆ ಹೋದ ಬಳಿಕ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿತ್ತು. ಈಗ ಹುಲಿ ಉಗುರು ಪ್ರಕರಣದಲ್ಲಿ ಅವರಿಗೆ ಸಂಕಷ್ಟ ಎದುರಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ