AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಗನಿಂದಾಗಿ ನಾನು ಸೆಲೆಬ್ರಿಟಿ ಆದೆ, ಎಲ್ಲಾ ಕಡೆ ನನ್ನೇ ಕರೆಯುತ್ತಾರೆ’; ವರ್ತೂರು ಸಂತೋಷ್ ತಾಯಿ

ವರ್ತೂರು ಸಂತೋಷ್ ಅವರ ತಾಯಿ ಮಂಜುಳಾ ದೊಡ್ಮನೆಗೆ ಬಂದಿದ್ದಾರೆ. ಈ ವೇಳೆ ಅವರು ಕೆಲವು ಕಿವಿ ಮಾತು ಹೇಳಿದ್ದಾರೆ. ಆ ಬಳಿಕ ಹೊರಗೆ ಪರಿಸ್ಥಿತಿ ಹೇಗಿದೆ ಎಂಬುದನ್ನು ವಿವರಿಸಿದರು ಮಂಜುಳಾ.

‘ಮಗನಿಂದಾಗಿ ನಾನು ಸೆಲೆಬ್ರಿಟಿ ಆದೆ, ಎಲ್ಲಾ ಕಡೆ ನನ್ನೇ ಕರೆಯುತ್ತಾರೆ’; ವರ್ತೂರು ಸಂತೋಷ್ ತಾಯಿ
Varthur Santosh
ರಾಜೇಶ್ ದುಗ್ಗುಮನೆ
|

Updated on: Dec 27, 2023 | 11:14 AM

Share

ವರ್ತೂರು ಸಂತೋಷ್ (Varthur Santosh) ಅವರು ಬಿಗ್ ಬಾಸ್​ಗೆ ಬರುವುದಕ್ಕೂ ಮೊದಲು ಒಂದಷ್ಟು ಹೆಸರು ಮಾಡಿದ್ದರು. ಹಳ್ಳಿಕಾರ್ ತಳಿಯ ಹೋರಿಗಳ ಸಂರಕ್ಷಣೆಗೆ ಅವರು ಶ್ರಮಿಸಿದ್ದಾರೆ. ಈ ಮೂಲಕ ಅವರು ಗುರುತಿಸಿಕೊಂಡಿದ್ದಾರೆ. ಬಿಗ್ ಬಾಸ್​ಗೆ ಬಂದ ಬಳಿಕ ಅವರ ಜನಪ್ರಿಯತೆ ಹೆಚ್ಚಿದೆ. ವಿಶೇಷ ಎಂದರೆ ವರ್ತೂರು ಸಂತೋಷ್ ಜೊತೆ ಅವರ ತಾಯಿ ಮಂಜುಳಾ ಜನಪ್ರಿಯತೆಯೂ ಹೆಚ್ಚಿದೆ. ಈ ಬಗ್ಗೆ ಬಿಗ್ ಬಾಸ್ ಮನೆಯಲ್ಲಿ ಅವರು ಹೇಳಿದ್ದಾರೆ.

ಬಿಗ್ ಬಾಸ್​ನಲ್ಲಿ ಫ್ಯಾಮಿಲಿ ವೀಕ್ ನಡೆಯುತ್ತಿದೆ. ಸ್ಪರ್ಧಿಗಳ ಕುಟುಂಬದವರು ಬಂದು ಮಾತನಾಡಿ ಹೋಗುತ್ತಿದ್ದಾರೆ. ವರ್ತೂರು ಸಂತೋಷ್ ಅವರ ತಾಯಿ ಮಂಜುಳಾ ದೊಡ್ಮನೆಗೆ ಬಂದಿದ್ದಾರೆ. ಈ ವೇಳೆ ಅವರು ಕೆಲವು ಕಿವಿ ಮಾತು ಹೇಳಿದ್ದಾರೆ. ‘ಎಲ್ಲರ ಜೊತೆಯೂ ಮಾತನಾಡು. ಕೋಪದಿಂದ ಆಡಬೇಡಿ’ ಎಂದು ಮಂಜುಳಾ ಅವರು ವರ್ತೂರಿಗೆ ಹೇಳಿದರು. ಆ ಬಳಿಕ ಹೊರಗೆ ಪರಿಸ್ಥಿತಿ ಹೇಗಿದೆ ಎಂಬುದನ್ನು ವಿವರಿಸಿದರು ಮಂಜುಳಾ.

‘ಸಂತೊಷನ ಬದಲಿಗೆ ನಾನೇ ಎಲ್ಲಾ ಕಾರ್ಯಕ್ರಮಕ್ಕೂ ತೆರಳುತ್ತಿದ್ದೇನೆ. ನನ್ನನ್ನೇ ಕರೆಯುತ್ತಿದ್ದಾರೆ. ನಾನು ಸೆಲೆಬ್ರಿಟಿ ಆಗಿದ್ದೇನೆ. ನನ್ನ ಮಗ ಎಂದು ನಾನು ಎಲ್ಲ ಕಡೆ ಪರಿಚಯಿಸುತ್ತಿದ್ದೆ. ಆದರೆ, ಈಗ ಎಲ್ಲವೂ ಬದಲಾಗಿದೆ. ನೀವು ಸಂತೋಷ್ ಅವರ ತಾಯಿನಾ ಎಂದು ಕೇಳುತ್ತಾರೆ. ಎಲ್ಲಕ್ಕಿಂತ ಮುಖ್ಯವಾಗಿ ವರ್ತೂರು ಅವರ ತಾಯಿನಾ ಎನ್ನುತ್ತಾರೆ’ ಎಂದು ಖುಷಿಯಿಂದ ಬಿಗ್ ಬಾಸ್​ನಲ್ಲಿ ವಿವರಿಸಿದರು ಮಂಜುಳಾ.

ಇದನ್ನೂ ಓದಿ: ‘ವರ್ತೂರು ಸಂತೋಷ್​ಗೆ ಬಿಗ್​ ಬಾಸ್​ ಗೆಲ್ಲುವ ಚಾನ್ಸ್​ ಇದೆ’: ಅವಿನಾಶ್​ ಶೆಟ್ಟಿ

ಉಳಿದ ಸೀಸನ್​ಗಳಿಗಿಂತ ಈ ಬಾರಿಯ ಬಿಗ್ ಬಾಸ್ ಸೀಸನ್ ಸಾಕಷ್ಟು ಮೆಚ್ಚುಗೆ ಪಡೆಯುತ್ತಿದೆ. ಒಳ್ಳೆಯ ಟಿಆರ್​ಪಿ ಕೂಡ ಬರುತ್ತಿದೆ. ಈ ಬಾರಿ ಬಿಗ್ ಬಾಸ್ ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡಲು ಅವಕಾಶವಿದೆ ಅನ್ನೋದು ವಿಶೇಷ. ಇದರಿಂದ ಬಿಗ್ ಬಾಸ್ ಮನೆಯಲ್ಲಿ ಏನಾಗುತ್ತಿದೆ ಎಂಬುದನ್ನು ಲೈವ್​ನಲ್ಲೇ ತಿಳಿದುಕೊಳ್ಳಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ