AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಗನಿಂದಾಗಿ ನಾನು ಸೆಲೆಬ್ರಿಟಿ ಆದೆ, ಎಲ್ಲಾ ಕಡೆ ನನ್ನೇ ಕರೆಯುತ್ತಾರೆ’; ವರ್ತೂರು ಸಂತೋಷ್ ತಾಯಿ

ವರ್ತೂರು ಸಂತೋಷ್ ಅವರ ತಾಯಿ ಮಂಜುಳಾ ದೊಡ್ಮನೆಗೆ ಬಂದಿದ್ದಾರೆ. ಈ ವೇಳೆ ಅವರು ಕೆಲವು ಕಿವಿ ಮಾತು ಹೇಳಿದ್ದಾರೆ. ಆ ಬಳಿಕ ಹೊರಗೆ ಪರಿಸ್ಥಿತಿ ಹೇಗಿದೆ ಎಂಬುದನ್ನು ವಿವರಿಸಿದರು ಮಂಜುಳಾ.

‘ಮಗನಿಂದಾಗಿ ನಾನು ಸೆಲೆಬ್ರಿಟಿ ಆದೆ, ಎಲ್ಲಾ ಕಡೆ ನನ್ನೇ ಕರೆಯುತ್ತಾರೆ’; ವರ್ತೂರು ಸಂತೋಷ್ ತಾಯಿ
Varthur Santosh
ರಾಜೇಶ್ ದುಗ್ಗುಮನೆ
|

Updated on: Dec 27, 2023 | 11:14 AM

Share

ವರ್ತೂರು ಸಂತೋಷ್ (Varthur Santosh) ಅವರು ಬಿಗ್ ಬಾಸ್​ಗೆ ಬರುವುದಕ್ಕೂ ಮೊದಲು ಒಂದಷ್ಟು ಹೆಸರು ಮಾಡಿದ್ದರು. ಹಳ್ಳಿಕಾರ್ ತಳಿಯ ಹೋರಿಗಳ ಸಂರಕ್ಷಣೆಗೆ ಅವರು ಶ್ರಮಿಸಿದ್ದಾರೆ. ಈ ಮೂಲಕ ಅವರು ಗುರುತಿಸಿಕೊಂಡಿದ್ದಾರೆ. ಬಿಗ್ ಬಾಸ್​ಗೆ ಬಂದ ಬಳಿಕ ಅವರ ಜನಪ್ರಿಯತೆ ಹೆಚ್ಚಿದೆ. ವಿಶೇಷ ಎಂದರೆ ವರ್ತೂರು ಸಂತೋಷ್ ಜೊತೆ ಅವರ ತಾಯಿ ಮಂಜುಳಾ ಜನಪ್ರಿಯತೆಯೂ ಹೆಚ್ಚಿದೆ. ಈ ಬಗ್ಗೆ ಬಿಗ್ ಬಾಸ್ ಮನೆಯಲ್ಲಿ ಅವರು ಹೇಳಿದ್ದಾರೆ.

ಬಿಗ್ ಬಾಸ್​ನಲ್ಲಿ ಫ್ಯಾಮಿಲಿ ವೀಕ್ ನಡೆಯುತ್ತಿದೆ. ಸ್ಪರ್ಧಿಗಳ ಕುಟುಂಬದವರು ಬಂದು ಮಾತನಾಡಿ ಹೋಗುತ್ತಿದ್ದಾರೆ. ವರ್ತೂರು ಸಂತೋಷ್ ಅವರ ತಾಯಿ ಮಂಜುಳಾ ದೊಡ್ಮನೆಗೆ ಬಂದಿದ್ದಾರೆ. ಈ ವೇಳೆ ಅವರು ಕೆಲವು ಕಿವಿ ಮಾತು ಹೇಳಿದ್ದಾರೆ. ‘ಎಲ್ಲರ ಜೊತೆಯೂ ಮಾತನಾಡು. ಕೋಪದಿಂದ ಆಡಬೇಡಿ’ ಎಂದು ಮಂಜುಳಾ ಅವರು ವರ್ತೂರಿಗೆ ಹೇಳಿದರು. ಆ ಬಳಿಕ ಹೊರಗೆ ಪರಿಸ್ಥಿತಿ ಹೇಗಿದೆ ಎಂಬುದನ್ನು ವಿವರಿಸಿದರು ಮಂಜುಳಾ.

‘ಸಂತೊಷನ ಬದಲಿಗೆ ನಾನೇ ಎಲ್ಲಾ ಕಾರ್ಯಕ್ರಮಕ್ಕೂ ತೆರಳುತ್ತಿದ್ದೇನೆ. ನನ್ನನ್ನೇ ಕರೆಯುತ್ತಿದ್ದಾರೆ. ನಾನು ಸೆಲೆಬ್ರಿಟಿ ಆಗಿದ್ದೇನೆ. ನನ್ನ ಮಗ ಎಂದು ನಾನು ಎಲ್ಲ ಕಡೆ ಪರಿಚಯಿಸುತ್ತಿದ್ದೆ. ಆದರೆ, ಈಗ ಎಲ್ಲವೂ ಬದಲಾಗಿದೆ. ನೀವು ಸಂತೋಷ್ ಅವರ ತಾಯಿನಾ ಎಂದು ಕೇಳುತ್ತಾರೆ. ಎಲ್ಲಕ್ಕಿಂತ ಮುಖ್ಯವಾಗಿ ವರ್ತೂರು ಅವರ ತಾಯಿನಾ ಎನ್ನುತ್ತಾರೆ’ ಎಂದು ಖುಷಿಯಿಂದ ಬಿಗ್ ಬಾಸ್​ನಲ್ಲಿ ವಿವರಿಸಿದರು ಮಂಜುಳಾ.

ಇದನ್ನೂ ಓದಿ: ‘ವರ್ತೂರು ಸಂತೋಷ್​ಗೆ ಬಿಗ್​ ಬಾಸ್​ ಗೆಲ್ಲುವ ಚಾನ್ಸ್​ ಇದೆ’: ಅವಿನಾಶ್​ ಶೆಟ್ಟಿ

ಉಳಿದ ಸೀಸನ್​ಗಳಿಗಿಂತ ಈ ಬಾರಿಯ ಬಿಗ್ ಬಾಸ್ ಸೀಸನ್ ಸಾಕಷ್ಟು ಮೆಚ್ಚುಗೆ ಪಡೆಯುತ್ತಿದೆ. ಒಳ್ಳೆಯ ಟಿಆರ್​ಪಿ ಕೂಡ ಬರುತ್ತಿದೆ. ಈ ಬಾರಿ ಬಿಗ್ ಬಾಸ್ ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡಲು ಅವಕಾಶವಿದೆ ಅನ್ನೋದು ವಿಶೇಷ. ಇದರಿಂದ ಬಿಗ್ ಬಾಸ್ ಮನೆಯಲ್ಲಿ ಏನಾಗುತ್ತಿದೆ ಎಂಬುದನ್ನು ಲೈವ್​ನಲ್ಲೇ ತಿಳಿದುಕೊಳ್ಳಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ