AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಸಲಿ ಬಿಗ್ ಬಾಸ್​ನ ನೋಡಬೇಕು’; ವರ್ತೂರು ಸಂತೋಷ್ ಆಸೆ ಕೇಳಿ ಕಂಗಾಲಾದ ಬಿಗ್ ಬಾಸ್

ಬಿಗ್ ಬಾಸ್ ಅಂದರೆ ಯಾರು ಅನ್ನೋದು ಹಲವರ ಮನಸ್ಸಿನಲ್ಲಿರೋ ಪ್ರಶ್ನೆ. ಈ ಪ್ರಶ್ನೆ ವರ್ತೂರು ಸಂತೋಷ್​ಗೆ ಅತಿಯಾಗಿ ಕಾಡಿದೆ. ಈ ಪ್ರಶ್ನೆಯನ್ನು ಸ್ವತಃ ಬಿಗ್ ಬಾಸ್ ಎದುರು ಇಟ್ಟಿದ್ದಾರೆ ಅವರು. ಇದನ್ನು ಕೇಳಿ ಬಿಗ್ ಬಾಸ್ ಶಾಕ್​ಗೆ ಒಳಗಾದರು.

‘ಅಸಲಿ ಬಿಗ್ ಬಾಸ್​ನ ನೋಡಬೇಕು’; ವರ್ತೂರು ಸಂತೋಷ್ ಆಸೆ ಕೇಳಿ ಕಂಗಾಲಾದ ಬಿಗ್ ಬಾಸ್
ವರ್ತೂರು ಸಂತೋಷ್
ರಾಜೇಶ್ ದುಗ್ಗುಮನೆ
|

Updated on:Jan 23, 2024 | 7:08 AM

Share

ಬಿಗ್ ಬಾಸ್ (Bigg Boss)​ ಅಂದರೆ ಯಾರು ಅನ್ನೋದು ಅನೇಕರ ಪ್ರಶ್ನೆ. ಈ ಪ್ರಶ್ನೆಗೆ ಉತ್ತರ ಸಿಗುವುದಿಲ್ಲ. ಕೆಲವರು ಸುದೀಪ್​ನ ಬಿಗ್ ಬಾಸ್ ಎಂದು ಕರೆದರೆ ಇನ್ನೂ ಕೆಲವರು ಆದೇಶ ನೀಡುವವರನ್ನು ಬಿಗ್ ಬಾಸ್ ಎಂದು ಕರೆಯುತ್ತಾರೆ. ಈಗ ಫಿನಾಲೆ ವೀಕ್​ನಲ್ಲಿ ಸ್ಪರ್ಧಿಗಳಿಗೆ ಒಂದು ಅವಕಾಶ ನೀಡಲಾಯಿತು. ಮನಸ್ಸಿನ ಆಸೆಯನ್ನು ಹೇಳಿಕೊಳ್ಳುವಂತೆ ಕೇಳಲಾಯಿತು. ಆಗ ವರ್ತೂರು ಸಂತೋಷ್ ಆಡಿದ ಮಾತು ಕೇಳಿ ಎಲ್ಲರೂ ನಕ್ಕಿದ್ದಾರೆ. ಸ್ವತಃ ಬಿಗ್ ಬಾಸ್ ಶಾಕ್ ಆಗಿದ್ದಾರೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಜನವರಿ 22ರಂದು ಬಿಗ್ ಬಾಸ್ ಪ್ರಸಾರ ಕಂಡಿದೆ.

ಒಂದು ಬಾವಿಯನ್ನು ನಿರ್ಮಿಸಲಾಗಿತ್ತು. ಈ ಬಾವಿಯ ಒಳಗೆ ತಮ್ಮಿಷ್ಟದ ಐದು ಆಸೆಗಳನ್ನು ಹೇಳಿಕೊಂಡು ಕಾಯಿನ್ ಹಾಕಬೇಕು. ಇಷ್ಟು ದಿನ ಅದುಮಿಟ್ಟುಕೊಂಡಿದ್ದ ಆಸೆಯನ್ನು ಎಲ್ಲರೂ ಹೇಳುತ್ತಾ ಬಂದರು.  ವರ್ತೂರು ಸಂತೋಷ್ ಹೇಳಿದ ಒಂದು ಆಸೆ ಕೇಳಿ ಸ್ವತಃ ಬಿಗ್ ಬಾಸ್ ಶಾಕ್​ಗೆ ಒಳಗಾದರು.

ವರ್ತೂರು ಸಂತೋಷ್ ಹಳ್ಳಿಕಾರ್ ಹೋರಿಗಳ ತಳಿಯನ್ನು ಬೆಳೆಸಿ ಫೇಮಸ್ ಆದವರು. ಹೀಗಾಗಿ, ಅವುಗಳನ್ನು ಮನೆ ಒಳಗೆ ಕಳುಹಿಸಬೇಕು ಎಂದರು. ಈ ಆಸೆಯನ್ನು ಈಡೇರಿಸೋದು ದೊಡ್ಡ ವಿಚಾರ ಅಲ್ಲವೇ ಅಲ್ಲ. ಇನ್ನು, ಮತ್ತೊಂದು ಬೇಡಿಕೆ ಇಟ್ಟರು. ಹಳ್ಳಿಕಾರ್ ಟಿ-ಶರ್ಟ್ ಹಾಗೂ ಚೈನ್ ಅನ್ನು ಕೊಡಿ ಎಂದು ಅವರು ಕೇಳಿಕೊಂಡರು. ಅವರ ಮತ್ತೊಂದು ಆಸೆ ಕೇಳಿ ಬಿಗ್ ಬಾಸ್​ಗೆ ಶಾಕ್ ಆಯಿತು. ‘ನಾನು ಬಿಗ್​ ಬಾಸ್​​ನ ನೋಡಬೇಕು’ ಎಂದು ಆಸೆ ವ್ಯಕ್ತಪಡಿಸಿದರು.

ವರ್ತೂರು ಸಂತೋಷ್ ಅವರ ಬೇಡಿಕೆಯನ್ನು ಬಿಗ್ ಬಾಸ್ ಅಲ್ಲಗಳೆದರು. ಇದು ಸಾಧ್ಯವೇ ಇಲ್ಲ ಎಂದು ನೇರವಾಗಿ ಹೇಳಿದರು. ಆ ಬಳಿಕ ಅವರು ಬೇರೆ ಆಸೆ ಹೇಳಿದರು. ಈ ಪೈಕಿ ಯಾವುದನ್ನು ಬಿಗ್ ಬಾಸ್ ಈಡೇರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ:  ಆಸೆಗಳ ಬಿಚ್ಚಿಟ್ಟ ಮನೆ ಮಂದಿ, ಈಡೇರಿಸುತ್ತಾರಾ ಬಿಗ್​ಬಾಸ್? ಯಾರ ಆಸೆ ಏನು?

ಇನ್ನು ಸಂಗೀತಾ ಶೃಂಗೇರಿ ಅವರ ಆಸೆ ದೊಡ್ಡದಾಗಿತ್ತು. ಯಶ್ ಹಾಗೂ ರಾಧಿಕಾ ಪಂಡಿತ್ ಅವರಿಂದ ಸಂದೇಶ ಬರಬೇಕು. ರಕ್ಷಿತ್ ಶೆಟ್ಟಿ ಹಾಗೂ ರಿಷಬ್ ಶೆಟ್ಟಿ ಅವರು ಭಾಗವಹಿಸಬೇಕು ಎಂದು ಕೋರಿದರು. ಇದನ್ನು ತಳ್ಳಿ ಹಾಕಿದರು. ಕಲರ್ಸ್ ಕನ್ನಡ ವಾಹಿನಿಯಲ್ಲಿ ಎಪಿಸೋಡ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ 24 ಗಂಟೆ ಲೈವ್ ಕೂಡ ವಿಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:04 am, Tue, 23 January 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು