AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಷನಿಗಾಗಿ ಕೈ ಕತ್ತರಿಸಿಕೊಂಡ ವರುಧಿನಿ; ಮಂಟಪ ಬಿಟ್ಟು ಆಸ್ಪತ್ರೆಗೆ ಹೋದ ಭುವಿ

ಭುವಿ ಮೇಕಪ್​ ರೂಂನಲ್ಲಿ ರೆಡಿ ಆಗುತ್ತಾ ನಿಂತಿದ್ದಳು. ಅದೇ ಸಮಯಕ್ಕೆ ವರುಧಿನಿಯ ಎಂಟ್ರಿ ಆಗಿದೆ. ಭುವಿಗೆ ತಿಂಡಿ ತಿನ್ನಿಸುತ್ತೇನೆ ಎನ್ನುವ ನೆಪ ಹೇಳಿ ಅಲ್ಲಿಯೇ ಕೂರಿಸಿಕೊಂಡಳು. ಆ ಸಂದರ್ಭದಲ್ಲಿ ವರುಧಿನಿ ಹಳೆ ರಾಗ ತೆಗೆದಿದ್ದಾಳೆ.

ಹರ್ಷನಿಗಾಗಿ ಕೈ ಕತ್ತರಿಸಿಕೊಂಡ ವರುಧಿನಿ; ಮಂಟಪ ಬಿಟ್ಟು ಆಸ್ಪತ್ರೆಗೆ ಹೋದ ಭುವಿ
ಭುವಿ-ವರು
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jun 23, 2022 | 2:30 PM

Share

‘ಕನ್ನಡತಿ’ ಧಾರಾವಾಹಿಯಲ್ಲಿ (Kannadathi Serial) ಈಗ ಮದುವೆ ಸಂಭ್ರಮ. ಆದರೆ, ಯಾವುದೇ ಕಾರಣಕ್ಕೂ ಮದುವೆ ಆಗಲು ಬಿಡಲೇಬಾರದು ಎಂದು ಹಠ ಹೊತ್ತವಳು ವರುಧಿನಿ. ಅವಳು ಹರ್ಷ ಹಾಗೂ ಭುವಿ ಮದುವೆ ದಿನವೇ ದೊಡ್ಡ ಹೈಡ್ರಾಮಾ ಮಾಡಿದ್ದಾಳೆ. ಕೈ ಕತ್ತರಿಸಿಕೊಂಡು ಆಸ್ಪತ್ರೆ ಸೇರಿದ್ದಾಳೆ. ಮದುವೆ ಮಂಟಪಕ್ಕೆ ಹೋಗಬೇಕಿದ್ದ ಭುವಿ (Bhuvi), ಈಗ ವರುಧಿನಿಯನ್ನು ಕರೆದುಕೊಂಡು ಆಸ್ಪತ್ರೆಗೆ ತೆರಳಿದ್ದಾಳೆ. ಈ ಕಾರಣದಿಂದ ಹರ್ಷ ಹಾಗೂ ಭುವಿ ಮದುವೆ ಆಗುತ್ತದೆಯೋ ಅಥವಾ ಇಲ್ಲವೋ ಎನ್ನುವ ಕುತೂಹಲ ಮೂಡಿದೆ. ಹರ್ಷ ಹಾಗೂ ಭುವಿ ವಿವಾಹಕ್ಕೆ ವರುಧಿನಿ ವಿಲನ್ ಆಗುವ ಸೂಚನೆ ಸಿಕ್ಕಿದೆ.

ಭುವಿ ಮೇಕಪ್​ ರೂಂನಲ್ಲಿ ರೆಡಿ ಆಗುತ್ತಾ ನಿಂತಿದ್ದಳು. ಅದೇ ಸಮಯಕ್ಕೆ ವರುಧಿನಿಯ ಎಂಟ್ರಿ ಆಗಿದೆ. ಭುವಿಗೆ ತಿಂಡಿ ತಿನ್ನಿಸುತ್ತೇನೆ ಎನ್ನುವ ನೆಪ ಹೇಳಿ ಅಲ್ಲಿಯೇ ಕೂರಿಸಿಕೊಂಡಳು. ಆ ಸಂದರ್ಭದಲ್ಲಿ ವರುಧಿನಿ ಹಳೆ ರಾಗ ತೆಗೆದಿದ್ದಾಳೆ. ‘ನನಗೆ ನನ್ನ ಹೀರೋನಾ (ಹರ್ಷ) ಬಿಟ್ಟುಕೊಡು. ಹರ್ಷ ಇಲ್ಲದೆ ನಾನು ಬದುಕೋಕೆ ಆಗುವುದಿಲ್ಲ. ನೀವಿಬ್ಬರೂ ಮದುವೆ ಆಗುವುದನ್ನು ನನ್ನ ಕಣ್ಣಿಂದ ನೋಡೋಕೆ ಸಾಧ್ಯವೇ ಇಲ್ಲ. ದಯವಿಟ್ಟು ಅರ್ಥ ಮಾಡಿಕೋ’ ಎಂದು ಕೋರಿದಳು ವರುಧಿನಿ.

ಆದರೆ, ಭುವಿ ಇದಕ್ಕೆ ಕರಗಲಿಲ್ಲ. ಒಂದೇ ಮಾತಲ್ಲಿ ‘ಹರ್ಷನನ್ನು ಬಿಟ್ಟುಕೊಡಲು ಸಾಧ್ಯವೇ ಇಲ್ಲ’ ಎಂದಳು. ‘ಮದುವೆ ಅನ್ನೋದು ನಾನು ತೆಗೆದುಕೊಂಡ ನಿರ್ಧಾರ ಅಲ್ಲ. ನಮ್ಮ ಸಂಬಂಧದಲ್ಲಿ ನಾವಿಬ್ಬರೂ ತುಂಬಾನೇ ಮುಂದೆ ಬಂದಿದ್ದೇವೆ. ದಯವಿಟ್ಟು ಅರ್ಥ ಮಾಡಿಕೋ’ ಎಂದು ವರುನನ್ನು ಮನವೊಲಿಸಲು ಪ್ರಯತ್ನಿಸಿದಳು. ಆದರೆ, ಅವಳು ಕೇಳುವ ಸ್ಥಿತಿಯಲ್ಲಿ ಇರಲಿಲ್ಲ.

ಇದನ್ನೂ ಓದಿ
Image
‘ಕನ್ನಡತಿ’ ಧಾರಾವಾಹಿ: ಮದುವೆಗೂ ಮುನ್ನ ಹರ್ಷನ ಬಳಿ ಮಾಡಿದ್ದ 30 ಲಕ್ಷ ರೂಪಾಯಿ ಸಾಲ ತೀರಿಸಿದ ಭುವಿ
Image
ಮತ್ತೊಂದು ಚಿತ್ರ ಒಪ್ಪಿಕೊಂಡ ನಟ ಕಿರಣ್ ರಾಜ್; ‘ಭರ್ಜರಿ ಗಂಡು’ ನಿರ್ದೇಶಕನ ಜತೆ ಹೊಸ ಸಿನಿಮಾ
Image
‘ಕನ್ನಡತಿ’ ಧಾರಾವಾಹಿಗಿಂತಲೂ ಮುಂಚೆ ನಟ ಕಿರಣ್​ ರಾಜ್​ ಈ ಸಿನಿಮಾ ಒಪ್ಪಿಕೊಂಡಿದ್ದು ಯಾಕೆ?
Image
‘ಕನ್ನಡತಿ’ ಹೀರೋ ಕಿರಣ್​ ರಾಜ್​ ದುಡಿಮೆಯ ಶೇ.40ರಷ್ಟು ಹಣ ಬಡವರಿಗೆ ಮೀಸಲು

ಅಲ್ಲಿಯೇ ಇದ್ದ ಕತ್ತಿಯಿಂದ ವರುಧಿನಿ ಕೈ ಕತ್ತರಿಸಿಕೊಂಡಳು. ಇದರಿಂದ ಒಂದೇ ಸಮನೆ ರಕ್ತ ಸುರಿಯೋಕು ಶುರುವಾಯಿತು. ಆಕೆಯನ್ನು ಹೊತ್ತುಕೊಂಡು ಭುವಿ ಕಾರಿನವರೆಗೆ ಹೋದಳು. ಕಾರಿನಲ್ಲಿ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಇವರ ಹಿಂದೆ ಹರ್ಷ ಕೂಡ ಓಡಿದ್ದಾನೆ.

ಇದನ್ನೂ ಓದಿ: ‘ಕನ್ನಡತಿ’ ಧಾರಾವಾಹಿ: ಮದುವೆಗೂ ಮುನ್ನ ಹರ್ಷನ ಬಳಿ ಮಾಡಿದ್ದ 30 ಲಕ್ಷ ರೂಪಾಯಿ ಸಾಲ ತೀರಿಸಿದ ಭುವಿ

ಮಂಟಪಕ್ಕೆ ಬರಬೇಕಿದ್ದ ಭುವಿ ಈಗ ಆಸ್ಪತ್ರೆಗೆ ಹೋಗಿದ್ದಾಳೆ. ಈ ಬೆಳವಣಿಗೆಯಿಂದ ಮುಂದೇನಾಗುತ್ತದೆ ಎನ್ನುವ ಕುತೂಹಲ ಪ್ರೇಕ್ಷಕರದ್ದು. ‘ನಾನಿಲ್ಲದೆ ನೀನು ಮದುವೆ ಆಗಲೇಬಾರದು’ ಎಂದು ಭುವಿಯ ಬಳಿ ವರುಧಿನಿ ಈ ಮೊದಲೇ ಮಾತು ತೆಗೆದುಕೊಂಡಿದ್ದಾಳೆ. ಹೀಗಾಗಿ, ಅವಳು ಆಸ್ಪತ್ರೆಯಿಂದ ಮರಳಿ ಬರುವವರೆಗೆ ಈ ಮದುವೆ ನಡೆಯೋದು ಡೌಟು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ