AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವರುಣ್ ಆರಾಧ್ಯ ಬ್ಲ್ಯಾಕ್​ಮೇಲೆ ಮಾಡಿಲ್ಲ’; ಉಲ್ಟಾ ಹೊಡೆದ್ರಾ ವರ್ಷಾ ಕಾವೇರಿ?

ಧಾರಾವಾಹಿ ನಟ ವರುಣ್​ ಆರಾಧ್ಯ ವಿರುದ್ಧ ಐಟಿ ಕಾಯ್ದೆ ಅನ್ವಯ ಕೇಸ್​ ದಾಖಲು ಮಾಡಿಕೊಳ್ಳಲಾಗಿದೆ. ಪೊಲೀಸರು ವಿಚಾರಣೆ ಕೂಡ ಆರಂಭಿಸಿದ್ದಾರೆ. ವರ್ಷಾ ಕಾವೇರಿ ಹುಡುಗಿಯ ಖಾಸಗಿ ಫೋಟೋಗಳನ್ನು ಇಟ್ಟುಕೊಂಡು ಬ್ಲ್ಯಾಕ್​ಮೇಲ್​ ಮಾಡಿದ ಆರೋಪ ವರುಣ್​ ಆರಾಧ್ಯ ಮೇಲಿದೆ. ಈ ಬಗ್ಗೆ ವರ್ಷಾ ಸ್ಪಷ್ಟನೆ ನೀಡಿದ್ದಾರೆ.

‘ವರುಣ್ ಆರಾಧ್ಯ ಬ್ಲ್ಯಾಕ್​ಮೇಲೆ ಮಾಡಿಲ್ಲ’; ಉಲ್ಟಾ ಹೊಡೆದ್ರಾ ವರ್ಷಾ ಕಾವೇರಿ?
ವರುಣ್-ವರ್ಷಾ
ರಾಜೇಶ್ ದುಗ್ಗುಮನೆ
|

Updated on: Sep 12, 2024 | 11:35 AM

Share

ವರುಣ್ ಆರಾಧ್ಯ ಅವರು ಸದ್ಯ ಸುದ್ದಿಯಲ್ಲಿ ಇದ್ದಾರೆ. ರೀಲ್ಸ್ ಮೂಲಕ ಫೇಮಸ್ ಆಗಿದ್ದ ಇವರು ನಂತರ ಕಲರ್ಸ್ ಕನ್ನಡದ ‘ಬೃಂದಾವನ’ ಧಾರಾವಾಹಿಯಲ್ಲಿ ನಟಿಸಿದರು. ಈಗ ಅವರು ಮಾಜಿ ಗೆಳೆತಿ ವರ್ಷಾ ಕಾವೇರಿಗೆ ಬ್ಲ್ಯಾಕ್​ಮೇಲೆ ಮಾಡುತ್ತಿದ್ದಾರೆ ಎಂದು ವರದಿ ಆಗಿತ್ತು. ಆದರೆ, ಆ ರೀತಿ ಇಲ್ಲ ಎಂದು ವರ್ಷಾ ಕಾವೇರಿ ಕಡೆಯಿಂದಲೇ ಸ್ಪಷ್ಟನೆ ಸಿಕ್ಕಿದೆ. ತಾವು ದೂರು ನೀಡಿದ್ದು ಏಕೆ ಎಂಬ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ವರುಣ್ ಆರಾಧ್ಯ ರೀಲ್ಸ್ ಮೂಲಕ ಫೇಮಸ್ ಆದರು. ವರ್ಷಾ ಕಾವೇರಿ ಜೊತೆ ಪರಿಚಯ ಬೆಳೆದಿದ್ದು ಕೂಡ ಸೋಶಿಯಲ್ ಮೀಡಿಯಾದಿಂದಲೇ. ಇಬ್ಬರೂ ಹಲವು ವರ್ಷ ಪ್ರೀತಿಯಲ್ಲಿ ಇದ್ದರು. ಆ ಬಳಿಕ ಬ್ರೇಕಪ್ ಮಾಡಿಕೊಳ್ಳೋ ನಿರ್ಧಾರಕ್ಕೆ ಬಂದರು. ಹೀಗಿರುವಾಗಲೇ ವರುಣ್ ಆರಾಧ್ಯ ವಿರುದ್ಧ ವರ್ಷಾ ಕಾವೇರಿ ದೂರು ನೀಡಿದ್ದರು. ‘ಖಾಸಗಿ ಫೋಟೋ ಇಟ್ಟುಕೊಂಡು ವರುಣ್ ಬೆದರಿಸುತ್ತಿದ್ದಾನೆ’ ಎಂಬುದಾಗಿ ವರ್ಷಾ ದೂರು ನೀಡಿರುವುದಾಗಿ ವರದಿ ಆಗಿತ್ತು. ಆದರೆ, ಇದು ಸುಳ್ಳು ಎಂದು ವರ್ಷಾ ಹೇಳಿದ್ದಾರೆ.

‘ಎಲ್ಲಕಡೆ ವೈರಲ್ ಆಗಿರುವುದು ಸುಳ್ಳು ಮಾಹಿತಿ. ನಾನು ಇನ್​ಸ್ಟಾಗ್ರಾಮ್ ಪ್ರೊಫೈಲ್ ಮತ್ತು ಇತರ ಸಾಮಾಜಿಕ ಜಾಲತಾಣಗಳಿಂದ ರೀಲ್ಸ್​ಗಳನ್ನು ತೆಗೆಯುವುದರ ಕುರಿತಾಗಿದೆ. ನಕಲಿ ಸುದ್ದಿಗಳನ್ನು ಹರಡುವುದನ್ನು ನಿಲ್ಲಿಸಿ. ಮೂರು ದಿನ ಕಾಯಿರಿ. ನಾನು ಕ್ಲ್ಯಾರಿಟಿಯೊಂದಿಗೆ ಬರುತ್ತೇನೆ’ ಎಂದಿದ್ದಾರೆ ವರ್ಷಾ.

ಇದನ್ನೂ ಓದಿ: ಯುವತಿಯ ಖಾಸಗಿ ಫೋಟೋ ಇಟ್ಟುಕೊಂಡು ಬ್ಲ್ಯಾಕ್​ಮೇಲ್; ಕಿರುತೆರೆ ನಟ ವರುಣ್ ಆರಾಧ್ಯ ವಿರುದ್ಧ ಕೇಸ್

2019ರಲ್ಲಿ ಸಾಮಾಜಿಕ ‌ಜಾಲತಾಣದಲ್ಲಿ‌ ವರುಣ್ ಹಾಗೂ ವರ್ಷಾ ಕಾವೇರಿ ಮಧ್ಯೆ ಪರಿಚಯ ಬೆಳೆಯಿತು. ಸುಮಾರು ‌ನಾಲ್ಕು ವರ್ಷಗಳ ಕಾಲ ಪರಸ್ಪರ ‌ಪ್ರೀತಿ‌ಯಲ್ಲಿದ್ದ ಜೋಡಿಯ ನಡುವೆ ನಂತರ ಬಿರುಕು ಮೂಡಿತು. ಈಗ ಅದೇ ಹುಡುಗಿಯ ಫೋಟೋ ಇಟ್ಟುಕೊಂಡು ವರುಣ್ ಬ್ಲ್ಯಾಕ್​ಮೇಲ್ ಮಾಡುತ್ತಿದ್ದಾರೆ ಎಂದು ವರದಿ ಆಗಿತ್ತು. ಮುಂದಿನ ದಿನಗಳಲ್ಲಿ ಲೈವ್​​ನಲ್ಲಿ ಬಂದು ವರ್ಷಾ ಈ ಬಗ್ಗೆ ಸ್ಪಷ್ಟನೆ ಕೊಡುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!