AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವರುಣ್ ಆರಾಧ್ಯ ಬ್ಲ್ಯಾಕ್​ಮೇಲೆ ಮಾಡಿಲ್ಲ’; ಉಲ್ಟಾ ಹೊಡೆದ್ರಾ ವರ್ಷಾ ಕಾವೇರಿ?

ಧಾರಾವಾಹಿ ನಟ ವರುಣ್​ ಆರಾಧ್ಯ ವಿರುದ್ಧ ಐಟಿ ಕಾಯ್ದೆ ಅನ್ವಯ ಕೇಸ್​ ದಾಖಲು ಮಾಡಿಕೊಳ್ಳಲಾಗಿದೆ. ಪೊಲೀಸರು ವಿಚಾರಣೆ ಕೂಡ ಆರಂಭಿಸಿದ್ದಾರೆ. ವರ್ಷಾ ಕಾವೇರಿ ಹುಡುಗಿಯ ಖಾಸಗಿ ಫೋಟೋಗಳನ್ನು ಇಟ್ಟುಕೊಂಡು ಬ್ಲ್ಯಾಕ್​ಮೇಲ್​ ಮಾಡಿದ ಆರೋಪ ವರುಣ್​ ಆರಾಧ್ಯ ಮೇಲಿದೆ. ಈ ಬಗ್ಗೆ ವರ್ಷಾ ಸ್ಪಷ್ಟನೆ ನೀಡಿದ್ದಾರೆ.

‘ವರುಣ್ ಆರಾಧ್ಯ ಬ್ಲ್ಯಾಕ್​ಮೇಲೆ ಮಾಡಿಲ್ಲ’; ಉಲ್ಟಾ ಹೊಡೆದ್ರಾ ವರ್ಷಾ ಕಾವೇರಿ?
ವರುಣ್-ವರ್ಷಾ
ರಾಜೇಶ್ ದುಗ್ಗುಮನೆ
|

Updated on: Sep 12, 2024 | 11:35 AM

Share

ವರುಣ್ ಆರಾಧ್ಯ ಅವರು ಸದ್ಯ ಸುದ್ದಿಯಲ್ಲಿ ಇದ್ದಾರೆ. ರೀಲ್ಸ್ ಮೂಲಕ ಫೇಮಸ್ ಆಗಿದ್ದ ಇವರು ನಂತರ ಕಲರ್ಸ್ ಕನ್ನಡದ ‘ಬೃಂದಾವನ’ ಧಾರಾವಾಹಿಯಲ್ಲಿ ನಟಿಸಿದರು. ಈಗ ಅವರು ಮಾಜಿ ಗೆಳೆತಿ ವರ್ಷಾ ಕಾವೇರಿಗೆ ಬ್ಲ್ಯಾಕ್​ಮೇಲೆ ಮಾಡುತ್ತಿದ್ದಾರೆ ಎಂದು ವರದಿ ಆಗಿತ್ತು. ಆದರೆ, ಆ ರೀತಿ ಇಲ್ಲ ಎಂದು ವರ್ಷಾ ಕಾವೇರಿ ಕಡೆಯಿಂದಲೇ ಸ್ಪಷ್ಟನೆ ಸಿಕ್ಕಿದೆ. ತಾವು ದೂರು ನೀಡಿದ್ದು ಏಕೆ ಎಂಬ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ವರುಣ್ ಆರಾಧ್ಯ ರೀಲ್ಸ್ ಮೂಲಕ ಫೇಮಸ್ ಆದರು. ವರ್ಷಾ ಕಾವೇರಿ ಜೊತೆ ಪರಿಚಯ ಬೆಳೆದಿದ್ದು ಕೂಡ ಸೋಶಿಯಲ್ ಮೀಡಿಯಾದಿಂದಲೇ. ಇಬ್ಬರೂ ಹಲವು ವರ್ಷ ಪ್ರೀತಿಯಲ್ಲಿ ಇದ್ದರು. ಆ ಬಳಿಕ ಬ್ರೇಕಪ್ ಮಾಡಿಕೊಳ್ಳೋ ನಿರ್ಧಾರಕ್ಕೆ ಬಂದರು. ಹೀಗಿರುವಾಗಲೇ ವರುಣ್ ಆರಾಧ್ಯ ವಿರುದ್ಧ ವರ್ಷಾ ಕಾವೇರಿ ದೂರು ನೀಡಿದ್ದರು. ‘ಖಾಸಗಿ ಫೋಟೋ ಇಟ್ಟುಕೊಂಡು ವರುಣ್ ಬೆದರಿಸುತ್ತಿದ್ದಾನೆ’ ಎಂಬುದಾಗಿ ವರ್ಷಾ ದೂರು ನೀಡಿರುವುದಾಗಿ ವರದಿ ಆಗಿತ್ತು. ಆದರೆ, ಇದು ಸುಳ್ಳು ಎಂದು ವರ್ಷಾ ಹೇಳಿದ್ದಾರೆ.

‘ಎಲ್ಲಕಡೆ ವೈರಲ್ ಆಗಿರುವುದು ಸುಳ್ಳು ಮಾಹಿತಿ. ನಾನು ಇನ್​ಸ್ಟಾಗ್ರಾಮ್ ಪ್ರೊಫೈಲ್ ಮತ್ತು ಇತರ ಸಾಮಾಜಿಕ ಜಾಲತಾಣಗಳಿಂದ ರೀಲ್ಸ್​ಗಳನ್ನು ತೆಗೆಯುವುದರ ಕುರಿತಾಗಿದೆ. ನಕಲಿ ಸುದ್ದಿಗಳನ್ನು ಹರಡುವುದನ್ನು ನಿಲ್ಲಿಸಿ. ಮೂರು ದಿನ ಕಾಯಿರಿ. ನಾನು ಕ್ಲ್ಯಾರಿಟಿಯೊಂದಿಗೆ ಬರುತ್ತೇನೆ’ ಎಂದಿದ್ದಾರೆ ವರ್ಷಾ.

ಇದನ್ನೂ ಓದಿ: ಯುವತಿಯ ಖಾಸಗಿ ಫೋಟೋ ಇಟ್ಟುಕೊಂಡು ಬ್ಲ್ಯಾಕ್​ಮೇಲ್; ಕಿರುತೆರೆ ನಟ ವರುಣ್ ಆರಾಧ್ಯ ವಿರುದ್ಧ ಕೇಸ್

2019ರಲ್ಲಿ ಸಾಮಾಜಿಕ ‌ಜಾಲತಾಣದಲ್ಲಿ‌ ವರುಣ್ ಹಾಗೂ ವರ್ಷಾ ಕಾವೇರಿ ಮಧ್ಯೆ ಪರಿಚಯ ಬೆಳೆಯಿತು. ಸುಮಾರು ‌ನಾಲ್ಕು ವರ್ಷಗಳ ಕಾಲ ಪರಸ್ಪರ ‌ಪ್ರೀತಿ‌ಯಲ್ಲಿದ್ದ ಜೋಡಿಯ ನಡುವೆ ನಂತರ ಬಿರುಕು ಮೂಡಿತು. ಈಗ ಅದೇ ಹುಡುಗಿಯ ಫೋಟೋ ಇಟ್ಟುಕೊಂಡು ವರುಣ್ ಬ್ಲ್ಯಾಕ್​ಮೇಲ್ ಮಾಡುತ್ತಿದ್ದಾರೆ ಎಂದು ವರದಿ ಆಗಿತ್ತು. ಮುಂದಿನ ದಿನಗಳಲ್ಲಿ ಲೈವ್​​ನಲ್ಲಿ ಬಂದು ವರ್ಷಾ ಈ ಬಗ್ಗೆ ಸ್ಪಷ್ಟನೆ ಕೊಡುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ