AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವರುಣ್ ಆರಾಧ್ಯ ಬ್ಲ್ಯಾಕ್​ಮೇಲೆ ಮಾಡಿಲ್ಲ’; ಉಲ್ಟಾ ಹೊಡೆದ್ರಾ ವರ್ಷಾ ಕಾವೇರಿ?

ಧಾರಾವಾಹಿ ನಟ ವರುಣ್​ ಆರಾಧ್ಯ ವಿರುದ್ಧ ಐಟಿ ಕಾಯ್ದೆ ಅನ್ವಯ ಕೇಸ್​ ದಾಖಲು ಮಾಡಿಕೊಳ್ಳಲಾಗಿದೆ. ಪೊಲೀಸರು ವಿಚಾರಣೆ ಕೂಡ ಆರಂಭಿಸಿದ್ದಾರೆ. ವರ್ಷಾ ಕಾವೇರಿ ಹುಡುಗಿಯ ಖಾಸಗಿ ಫೋಟೋಗಳನ್ನು ಇಟ್ಟುಕೊಂಡು ಬ್ಲ್ಯಾಕ್​ಮೇಲ್​ ಮಾಡಿದ ಆರೋಪ ವರುಣ್​ ಆರಾಧ್ಯ ಮೇಲಿದೆ. ಈ ಬಗ್ಗೆ ವರ್ಷಾ ಸ್ಪಷ್ಟನೆ ನೀಡಿದ್ದಾರೆ.

‘ವರುಣ್ ಆರಾಧ್ಯ ಬ್ಲ್ಯಾಕ್​ಮೇಲೆ ಮಾಡಿಲ್ಲ’; ಉಲ್ಟಾ ಹೊಡೆದ್ರಾ ವರ್ಷಾ ಕಾವೇರಿ?
ವರುಣ್-ವರ್ಷಾ
ರಾಜೇಶ್ ದುಗ್ಗುಮನೆ
|

Updated on: Sep 12, 2024 | 11:35 AM

Share

ವರುಣ್ ಆರಾಧ್ಯ ಅವರು ಸದ್ಯ ಸುದ್ದಿಯಲ್ಲಿ ಇದ್ದಾರೆ. ರೀಲ್ಸ್ ಮೂಲಕ ಫೇಮಸ್ ಆಗಿದ್ದ ಇವರು ನಂತರ ಕಲರ್ಸ್ ಕನ್ನಡದ ‘ಬೃಂದಾವನ’ ಧಾರಾವಾಹಿಯಲ್ಲಿ ನಟಿಸಿದರು. ಈಗ ಅವರು ಮಾಜಿ ಗೆಳೆತಿ ವರ್ಷಾ ಕಾವೇರಿಗೆ ಬ್ಲ್ಯಾಕ್​ಮೇಲೆ ಮಾಡುತ್ತಿದ್ದಾರೆ ಎಂದು ವರದಿ ಆಗಿತ್ತು. ಆದರೆ, ಆ ರೀತಿ ಇಲ್ಲ ಎಂದು ವರ್ಷಾ ಕಾವೇರಿ ಕಡೆಯಿಂದಲೇ ಸ್ಪಷ್ಟನೆ ಸಿಕ್ಕಿದೆ. ತಾವು ದೂರು ನೀಡಿದ್ದು ಏಕೆ ಎಂಬ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ವರುಣ್ ಆರಾಧ್ಯ ರೀಲ್ಸ್ ಮೂಲಕ ಫೇಮಸ್ ಆದರು. ವರ್ಷಾ ಕಾವೇರಿ ಜೊತೆ ಪರಿಚಯ ಬೆಳೆದಿದ್ದು ಕೂಡ ಸೋಶಿಯಲ್ ಮೀಡಿಯಾದಿಂದಲೇ. ಇಬ್ಬರೂ ಹಲವು ವರ್ಷ ಪ್ರೀತಿಯಲ್ಲಿ ಇದ್ದರು. ಆ ಬಳಿಕ ಬ್ರೇಕಪ್ ಮಾಡಿಕೊಳ್ಳೋ ನಿರ್ಧಾರಕ್ಕೆ ಬಂದರು. ಹೀಗಿರುವಾಗಲೇ ವರುಣ್ ಆರಾಧ್ಯ ವಿರುದ್ಧ ವರ್ಷಾ ಕಾವೇರಿ ದೂರು ನೀಡಿದ್ದರು. ‘ಖಾಸಗಿ ಫೋಟೋ ಇಟ್ಟುಕೊಂಡು ವರುಣ್ ಬೆದರಿಸುತ್ತಿದ್ದಾನೆ’ ಎಂಬುದಾಗಿ ವರ್ಷಾ ದೂರು ನೀಡಿರುವುದಾಗಿ ವರದಿ ಆಗಿತ್ತು. ಆದರೆ, ಇದು ಸುಳ್ಳು ಎಂದು ವರ್ಷಾ ಹೇಳಿದ್ದಾರೆ.

‘ಎಲ್ಲಕಡೆ ವೈರಲ್ ಆಗಿರುವುದು ಸುಳ್ಳು ಮಾಹಿತಿ. ನಾನು ಇನ್​ಸ್ಟಾಗ್ರಾಮ್ ಪ್ರೊಫೈಲ್ ಮತ್ತು ಇತರ ಸಾಮಾಜಿಕ ಜಾಲತಾಣಗಳಿಂದ ರೀಲ್ಸ್​ಗಳನ್ನು ತೆಗೆಯುವುದರ ಕುರಿತಾಗಿದೆ. ನಕಲಿ ಸುದ್ದಿಗಳನ್ನು ಹರಡುವುದನ್ನು ನಿಲ್ಲಿಸಿ. ಮೂರು ದಿನ ಕಾಯಿರಿ. ನಾನು ಕ್ಲ್ಯಾರಿಟಿಯೊಂದಿಗೆ ಬರುತ್ತೇನೆ’ ಎಂದಿದ್ದಾರೆ ವರ್ಷಾ.

ಇದನ್ನೂ ಓದಿ: ಯುವತಿಯ ಖಾಸಗಿ ಫೋಟೋ ಇಟ್ಟುಕೊಂಡು ಬ್ಲ್ಯಾಕ್​ಮೇಲ್; ಕಿರುತೆರೆ ನಟ ವರುಣ್ ಆರಾಧ್ಯ ವಿರುದ್ಧ ಕೇಸ್

2019ರಲ್ಲಿ ಸಾಮಾಜಿಕ ‌ಜಾಲತಾಣದಲ್ಲಿ‌ ವರುಣ್ ಹಾಗೂ ವರ್ಷಾ ಕಾವೇರಿ ಮಧ್ಯೆ ಪರಿಚಯ ಬೆಳೆಯಿತು. ಸುಮಾರು ‌ನಾಲ್ಕು ವರ್ಷಗಳ ಕಾಲ ಪರಸ್ಪರ ‌ಪ್ರೀತಿ‌ಯಲ್ಲಿದ್ದ ಜೋಡಿಯ ನಡುವೆ ನಂತರ ಬಿರುಕು ಮೂಡಿತು. ಈಗ ಅದೇ ಹುಡುಗಿಯ ಫೋಟೋ ಇಟ್ಟುಕೊಂಡು ವರುಣ್ ಬ್ಲ್ಯಾಕ್​ಮೇಲ್ ಮಾಡುತ್ತಿದ್ದಾರೆ ಎಂದು ವರದಿ ಆಗಿತ್ತು. ಮುಂದಿನ ದಿನಗಳಲ್ಲಿ ಲೈವ್​​ನಲ್ಲಿ ಬಂದು ವರ್ಷಾ ಈ ಬಗ್ಗೆ ಸ್ಪಷ್ಟನೆ ಕೊಡುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ