AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌತಮಿ ಅಪ್ಪ-ಅಮ್ಮನ ಬಗ್ಗೆ ಮಾತನಾಡಿ ನಾಲಿಗೆ ಹರಿಬಿಟ್ಟ ರಜತ್; ಅತಿಯಾಯ್ತು ಮಾತು

ರಜತ್ ಅವರ ವರ್ತನೆಗೆ ಕಳೆದ ವಾರ ಕಿಚ್ಚ ಸುದೀಪ್ ಶಿಕ್ಷೆ ನೀಡಿದ್ದರು. ಹಾಗಿದ್ದರೂ ಕೂಡ ರಜತ್ ಬದಲಾಗಿಲ್ಲ. ಈ ವಾರ ಅವರು ಗೌತಮಿ ಜಾದವ್ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿದ್ದಾರೆ. ಇದರಿಂದ ಗೌತಮಿ ಅವರು ಕೋಪಗೊಂಡಿದ್ದಾರೆ. ಪಾಸಿಟಿವಿ ಮಾಯವಾಗುವ ರೀತಿಯಲ್ಲಿ ಜಗಳ ಆಡಿದ್ದಾರೆ. ಗೌತಮಿಗೆ ತಿರುಗೇಟು ನೀಡಲೇಬೇಕು ಎಂದು ರಜತ್ ಹಠ ಹಿಡಿದು ಕುಳಿತಿದ್ದಾರೆ.

ಗೌತಮಿ ಅಪ್ಪ-ಅಮ್ಮನ ಬಗ್ಗೆ ಮಾತನಾಡಿ ನಾಲಿಗೆ ಹರಿಬಿಟ್ಟ ರಜತ್; ಅತಿಯಾಯ್ತು ಮಾತು
ರಜತ್, ಗೌತಮಿ ಜಾದವ್
Follow us
ಮದನ್​ ಕುಮಾರ್​
|

Updated on: Dec 16, 2024 | 10:52 PM

ವೈಲ್ಡ್ ಕಾರ್ಡ್​ ಮೂಲಕ ಬಿಗ್ ಬಾಸ್​ ಮನೆಗೆ ಬಂದಿರುವ ರಜತ್ ಅವರು ಬಹುತೇಕ ಎಲ್ಲರ ಜೊತೆಯೂ ಕಿರಿಕ್ ಮಾಡಿಕೊಂಡಿದ್ದಾರೆ. ಬಂದ ಮೊದಲ ವಾರದಲ್ಲೇ ಗೋಲ್ಡ್ ಸುರೇಶ್​ಗೆ ಅವಾಚ್ಯ ಪದಗಳನ್ನು ಬಳಸಿ ಕೆಂಗಣ್ಣಿಗೆ ಗುರಿಯಾಗಿದ್ದ ರಜತ್, ಈಗ ಗೌತಮಿಯ ಬಗ್ಗೆ ಮಾತನಾಡಿದ್ದಾರೆ. ಮಾತಿನ ಭರದಲ್ಲಿ ಅಪ್ಪ-ಅಮ್ಮನ ವಿಚಾರವನ್ನೆಲ್ಲ ಪ್ರಸ್ತಾಪಿಸಲು ಶುರು ಮಾಡಿದ್ದಾರೆ. ಇದರಿಂದಾಗಿ ಗೌತಮಿ ಅವರಿಗೆ ಸಖತ್ ಕೋಪ ಬಂದಿದೆ. ಡಿಸೆಂಬರ್​ 16ರ ಸಂಚಿಕೆಯಲ್ಲಿ ಗೌತಮಿ ಜಾದವ್ ಮತ್ತು ರಜತ್ ಅವರು ಸಿಕ್ಕಾಪಟ್ಟೆ ಜಗಳ ಮಾಡಿಕೊಂಡಿದ್ದಾರೆ. ರಜತ್ ಅವರ ಮಾತುಗಳನ್ನು ಉಗ್ರಂ ಮಂಜು ಖಂಡಿಸಿದ್ದಾರೆ.

ಇಡೀ ಮನೆಯಲ್ಲಿ ಕ್ಲೀನ್ ಮಾಡುವ ಟಾಸ್ಕ್​ ನೀಡಲಾಗಿತ್ತು. ಈ ಟಾಸ್ಕ್ ನಿಭಾಯಿಸುವ ವೇಳೆ ಗೌತಮಿ ಜಾದವ್ ಮತ್ತು ರಜತ್ ನಡುವೆ ಜಗಳ ಆರಂಭ ಆಯಿತು. ಕೆಲಸದ ವಿಚಾರ ಬಂದಾಗ ರಜತ್ ಯಾವಾಗಲೂ ಸೋಮಾರಿತನ ಪ್ರದರ್ಶಿಸುತ್ತಾರೆ. ಕೆಲಸ ಮಾಡಲು ಹಿಂದೇಟು ಹಾಕಿದ ಅವರಿಗೆ ‘ಸುಮ್ಮನೆ ಕುಳಿತುಕೊಂಡು ಹಣ್ಣು ತಿನ್ನಿ’ ಎಂದು ಗೌತಮಿ ಜಾದವ್ ತಿರುಗೇಟು ನೀಡಿದರು. ಅಲ್ಲಿಂದ ಮಾತಿನ ಚಕಮಕಿ ಆರಂಭ ಆಯಿತು.

ತಾವು ಹಣ್ಣು ತಿನ್ನುವುದನ್ನು ಗೌತಮಿ ಜಾದವ್ ಟೀಕಿಸಿದ್ದಕ್ಕೆ ರಜತ್ ಅವರಿಗೆ ವಿಪರೀತ ಕೋಪ ಬಂತು. ಆಗ ಅವರಿಬ್ಬರ ನಡುವೆ ಮಾತಿಗೆ ಮಾತು ಬೆಳೆಯಿತು. ಇಷ್ಟು ದಿನ ಪಾಸಿಟಿವ್ ಮಂತ್ರ ಜಪಿಸುತ್ತಿದ್ದ ಗೌತಮಿ ಜಾದವ್ ಅವರು ರಜತ್​ಗೆ ಏಕವಚನದಲ್ಲಿ ಬೈಯ್ಯುವ ಮಟ್ಟಕ್ಕೆ ಬದಲಾದರು. ‘ಇವರ ಅಪ್ಪನ ಮನೆಯಿಂದ ತಂದವಳ ರೀತಿ ಹೇಳುತ್ತಾಳೆ’ ಎಂದು ರಜತ್ ಅವರು ಬಾಯಿಗೆ ಬಂದಂತೆ ಮಾತನಾಡಿ ಗದ್ದಲ ಎಬ್ಬಿಸಿದರು.

ಇದನ್ನೂ ಓದಿ: ‘ಗೋಲ್ಡ್ ಸುರೇಶ್​ ಸೋತಿಲ್ಲ’: ಮುಖ್ಯವಾದ ಸಂದೇಶ ನೀಡಿದ ಕಿಚ್ಚ ಸುದೀಪ್

ಮನೆ ಕ್ಲೀನ್ ಮಾಡುವ ಟಾಸ್ಕ್​ ಮುಗಿದ ಬಳಿಕ ಬಿಗ್ ಬಾಸ್ ಕಡೆಯಿಂದ ದಿನಸಿ ವಸ್ತುಗಳು ಬಂದವು. ಅದನ್ನು ನೋಡುತ್ತ ಇರುವಾಗ ‘ಇದು ಬಿಗ್ ಬಾಸ್ ಕಳಿಸಿದ್ದು ತಾನೆ? ಯಾರಾದರೂ ಅಪ್ಪನ ಮನೆಯಿಂದ ತಂದಿದ್ದೀರಾ’ ಎಂದು ರಜತ್ ಮತ್ತೊಮ್ಮೆ ಗೌತಮಿಯನ್ನು ಕೆಣಕಿದರು. ‘ಅಮ್ಮ ಅಮ್ಮನ ವಿಷಯಕ್ಕೆ ಬಂದರೆ ಸರಿ ಇರುವುದಿಲ್ಲ’ ಎಂದು ಗೌತಮಿ ಅವರು ರಜತ್​ಗೆ ವಾರ್ನಿಂಗ್ ನೀಡಿದ್ದಾರೆ. ಈ ವಿಚಾರದ ಬಗ್ಗೆ ವೀಕೆಂಡ್​ ಎಪಿಸೋಡ್​ನಲ್ಲಿ ಕಿಚ್ಚ ಸುದೀಪ್ ಅವರು ರಜತ್​ಗೆ ಕ್ಲಾಸ್​ ತೆಗೆದುಕೊಳ್ಳುವ ಸಾಧ್ಯತೆ ಜಾಸ್ತಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್