AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌತಮಿ ಅಪ್ಪ-ಅಮ್ಮನ ಬಗ್ಗೆ ಮಾತನಾಡಿ ನಾಲಿಗೆ ಹರಿಬಿಟ್ಟ ರಜತ್; ಅತಿಯಾಯ್ತು ಮಾತು

ರಜತ್ ಅವರ ವರ್ತನೆಗೆ ಕಳೆದ ವಾರ ಕಿಚ್ಚ ಸುದೀಪ್ ಶಿಕ್ಷೆ ನೀಡಿದ್ದರು. ಹಾಗಿದ್ದರೂ ಕೂಡ ರಜತ್ ಬದಲಾಗಿಲ್ಲ. ಈ ವಾರ ಅವರು ಗೌತಮಿ ಜಾದವ್ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿದ್ದಾರೆ. ಇದರಿಂದ ಗೌತಮಿ ಅವರು ಕೋಪಗೊಂಡಿದ್ದಾರೆ. ಪಾಸಿಟಿವಿ ಮಾಯವಾಗುವ ರೀತಿಯಲ್ಲಿ ಜಗಳ ಆಡಿದ್ದಾರೆ. ಗೌತಮಿಗೆ ತಿರುಗೇಟು ನೀಡಲೇಬೇಕು ಎಂದು ರಜತ್ ಹಠ ಹಿಡಿದು ಕುಳಿತಿದ್ದಾರೆ.

ಗೌತಮಿ ಅಪ್ಪ-ಅಮ್ಮನ ಬಗ್ಗೆ ಮಾತನಾಡಿ ನಾಲಿಗೆ ಹರಿಬಿಟ್ಟ ರಜತ್; ಅತಿಯಾಯ್ತು ಮಾತು
ರಜತ್, ಗೌತಮಿ ಜಾದವ್
ಮದನ್​ ಕುಮಾರ್​
|

Updated on: Dec 16, 2024 | 10:52 PM

Share

ವೈಲ್ಡ್ ಕಾರ್ಡ್​ ಮೂಲಕ ಬಿಗ್ ಬಾಸ್​ ಮನೆಗೆ ಬಂದಿರುವ ರಜತ್ ಅವರು ಬಹುತೇಕ ಎಲ್ಲರ ಜೊತೆಯೂ ಕಿರಿಕ್ ಮಾಡಿಕೊಂಡಿದ್ದಾರೆ. ಬಂದ ಮೊದಲ ವಾರದಲ್ಲೇ ಗೋಲ್ಡ್ ಸುರೇಶ್​ಗೆ ಅವಾಚ್ಯ ಪದಗಳನ್ನು ಬಳಸಿ ಕೆಂಗಣ್ಣಿಗೆ ಗುರಿಯಾಗಿದ್ದ ರಜತ್, ಈಗ ಗೌತಮಿಯ ಬಗ್ಗೆ ಮಾತನಾಡಿದ್ದಾರೆ. ಮಾತಿನ ಭರದಲ್ಲಿ ಅಪ್ಪ-ಅಮ್ಮನ ವಿಚಾರವನ್ನೆಲ್ಲ ಪ್ರಸ್ತಾಪಿಸಲು ಶುರು ಮಾಡಿದ್ದಾರೆ. ಇದರಿಂದಾಗಿ ಗೌತಮಿ ಅವರಿಗೆ ಸಖತ್ ಕೋಪ ಬಂದಿದೆ. ಡಿಸೆಂಬರ್​ 16ರ ಸಂಚಿಕೆಯಲ್ಲಿ ಗೌತಮಿ ಜಾದವ್ ಮತ್ತು ರಜತ್ ಅವರು ಸಿಕ್ಕಾಪಟ್ಟೆ ಜಗಳ ಮಾಡಿಕೊಂಡಿದ್ದಾರೆ. ರಜತ್ ಅವರ ಮಾತುಗಳನ್ನು ಉಗ್ರಂ ಮಂಜು ಖಂಡಿಸಿದ್ದಾರೆ.

ಇಡೀ ಮನೆಯಲ್ಲಿ ಕ್ಲೀನ್ ಮಾಡುವ ಟಾಸ್ಕ್​ ನೀಡಲಾಗಿತ್ತು. ಈ ಟಾಸ್ಕ್ ನಿಭಾಯಿಸುವ ವೇಳೆ ಗೌತಮಿ ಜಾದವ್ ಮತ್ತು ರಜತ್ ನಡುವೆ ಜಗಳ ಆರಂಭ ಆಯಿತು. ಕೆಲಸದ ವಿಚಾರ ಬಂದಾಗ ರಜತ್ ಯಾವಾಗಲೂ ಸೋಮಾರಿತನ ಪ್ರದರ್ಶಿಸುತ್ತಾರೆ. ಕೆಲಸ ಮಾಡಲು ಹಿಂದೇಟು ಹಾಕಿದ ಅವರಿಗೆ ‘ಸುಮ್ಮನೆ ಕುಳಿತುಕೊಂಡು ಹಣ್ಣು ತಿನ್ನಿ’ ಎಂದು ಗೌತಮಿ ಜಾದವ್ ತಿರುಗೇಟು ನೀಡಿದರು. ಅಲ್ಲಿಂದ ಮಾತಿನ ಚಕಮಕಿ ಆರಂಭ ಆಯಿತು.

ತಾವು ಹಣ್ಣು ತಿನ್ನುವುದನ್ನು ಗೌತಮಿ ಜಾದವ್ ಟೀಕಿಸಿದ್ದಕ್ಕೆ ರಜತ್ ಅವರಿಗೆ ವಿಪರೀತ ಕೋಪ ಬಂತು. ಆಗ ಅವರಿಬ್ಬರ ನಡುವೆ ಮಾತಿಗೆ ಮಾತು ಬೆಳೆಯಿತು. ಇಷ್ಟು ದಿನ ಪಾಸಿಟಿವ್ ಮಂತ್ರ ಜಪಿಸುತ್ತಿದ್ದ ಗೌತಮಿ ಜಾದವ್ ಅವರು ರಜತ್​ಗೆ ಏಕವಚನದಲ್ಲಿ ಬೈಯ್ಯುವ ಮಟ್ಟಕ್ಕೆ ಬದಲಾದರು. ‘ಇವರ ಅಪ್ಪನ ಮನೆಯಿಂದ ತಂದವಳ ರೀತಿ ಹೇಳುತ್ತಾಳೆ’ ಎಂದು ರಜತ್ ಅವರು ಬಾಯಿಗೆ ಬಂದಂತೆ ಮಾತನಾಡಿ ಗದ್ದಲ ಎಬ್ಬಿಸಿದರು.

ಇದನ್ನೂ ಓದಿ: ‘ಗೋಲ್ಡ್ ಸುರೇಶ್​ ಸೋತಿಲ್ಲ’: ಮುಖ್ಯವಾದ ಸಂದೇಶ ನೀಡಿದ ಕಿಚ್ಚ ಸುದೀಪ್

ಮನೆ ಕ್ಲೀನ್ ಮಾಡುವ ಟಾಸ್ಕ್​ ಮುಗಿದ ಬಳಿಕ ಬಿಗ್ ಬಾಸ್ ಕಡೆಯಿಂದ ದಿನಸಿ ವಸ್ತುಗಳು ಬಂದವು. ಅದನ್ನು ನೋಡುತ್ತ ಇರುವಾಗ ‘ಇದು ಬಿಗ್ ಬಾಸ್ ಕಳಿಸಿದ್ದು ತಾನೆ? ಯಾರಾದರೂ ಅಪ್ಪನ ಮನೆಯಿಂದ ತಂದಿದ್ದೀರಾ’ ಎಂದು ರಜತ್ ಮತ್ತೊಮ್ಮೆ ಗೌತಮಿಯನ್ನು ಕೆಣಕಿದರು. ‘ಅಮ್ಮ ಅಮ್ಮನ ವಿಷಯಕ್ಕೆ ಬಂದರೆ ಸರಿ ಇರುವುದಿಲ್ಲ’ ಎಂದು ಗೌತಮಿ ಅವರು ರಜತ್​ಗೆ ವಾರ್ನಿಂಗ್ ನೀಡಿದ್ದಾರೆ. ಈ ವಿಚಾರದ ಬಗ್ಗೆ ವೀಕೆಂಡ್​ ಎಪಿಸೋಡ್​ನಲ್ಲಿ ಕಿಚ್ಚ ಸುದೀಪ್ ಅವರು ರಜತ್​ಗೆ ಕ್ಲಾಸ್​ ತೆಗೆದುಕೊಳ್ಳುವ ಸಾಧ್ಯತೆ ಜಾಸ್ತಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ
ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್
ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್
‘ದರ್ಶನ’ ಸಿನಿಮಾ ಮುಹೂರ್ತ: ತಬಲಾ ನಾಣಿ ಮಾತಿಗೆ ನಕ್ಕು ಸುಸ್ತಾದ ಜನ
‘ದರ್ಶನ’ ಸಿನಿಮಾ ಮುಹೂರ್ತ: ತಬಲಾ ನಾಣಿ ಮಾತಿಗೆ ನಕ್ಕು ಸುಸ್ತಾದ ಜನ