AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರೇಂದ್ರ ಮೋದಿ, ಅಕ್ಷಯ್, ರಜನಿಕಾಂತ್ ಸಾಲಿನಲ್ಲಿ ಅಜಯ್ ದೇವಗನ್, ವಿಕ್ಕಿ ಕೌಶಲ್; ಏನಿದು ಸಮಾಚಾರ?

Vicky Kaushal and Ajay Devgan: ಭಾರತದ ಪ್ರಧಾನಿ ನರೇಂದ್ರ ಮೋದಿ, ಬಾಲಿವುಡ್ ನಟ ಅಕ್ಷಯ್ ಕುಮಾರ್ ಹಾಗೂ ಸೂಪರ್​ಸ್ಟಾರ್ ರಜನಿಕಾಂತ್ ಸಾಲಿಗೆ ಮತ್ತಿಬ್ಬರು ಬಾಲಿವುಡ್ ಸೆಲೆಬ್ರಿಟಿಗಳು ಸೇರ್ಪಡೆಯಾಗಿದ್ದಾರೆ. ಏನಿದು ಸಮಾಚಾರ? ಇದರ ಕುತೂಹಲಕರ ಮಾಹಿತಿ ಇಲ್ಲಿದೆ.

ನರೇಂದ್ರ ಮೋದಿ, ಅಕ್ಷಯ್, ರಜನಿಕಾಂತ್ ಸಾಲಿನಲ್ಲಿ ಅಜಯ್ ದೇವಗನ್, ವಿಕ್ಕಿ ಕೌಶಲ್; ಏನಿದು ಸಮಾಚಾರ?
ವಿಕ್ಕಿ ಕೌಶಲ್, ಬೇರ್ ಗ್ರಿಲ್ಸ್ ಹಾಗೂ ಅಜಯ್ ದೇವಗನ್
TV9 Web
| Updated By: shivaprasad.hs|

Updated on:Sep 16, 2021 | 11:04 AM

Share

ಡಿಸ್ಕವರಿ ವಾಹಿನಿಯಲ್ಲಿ ಪ್ರಸಾರವಾಗುವ ‘ಇನ್​ ಟು ದಿ ವೈಲ್ಡ್ ವಿತ್ ಬೇರ್ ಗ್ರಿಲ್ಸ್’ ಕಾರ್ಯಕ್ರಮವು ಹಲವಾರು ಕಾರಣಗಳಿಂದ ಜನಪ್ರಿಯವಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸುವವರು ಸೆಲೆಬ್ರಿಟಿಗಳು ಎಂಬುದು ನೋಡುಗರ ಕುತೂಹಲಕ್ಕೆ ಒಂದು ಮುಖ್ಯ ಕಾರಣವಾದರೆ, ಅದರ ವಿಷಯ ವಸ್ತು ವೀಕ್ಷಕರಿಗೆ ಬಹಳ ಆಸಕ್ತಿಯ ವಿಷಯ ಎಂಬುದು ಶೋನ ಖ್ಯಾತಿಗೆ ಮತ್ತೊಂದು ಕಾರಣ. ಈಗಾಗಲೇ ಈ ಕಾರ್ಯಕ್ರಮದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ, ಬಾಲಿವುಡ್​ನ ಖ್ಯಾತ ನಟ ಅಕ್ಷಯ್ ಕುಮಾರ್ ಹಾಗೂ ಸೂಪರ್​ಸ್ಟಾರ್ ರಜನಿಕಾಂತ್ ಕಾಣಿಸಿಕೊಂಡಿದ್ದಾರೆ. ಮುಂದಿನ ಸಂಚಿಕೆಗಳಲ್ಲಿ ಬಾಲಿವುಡ್​ನಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಟರಾದ ಅಜಯ್ ದೇವಗನ್ ಹಾಗೂ ವಿಕ್ಕಿ ಕೌಶಲ್ ಕಾಣಿಸಿಕೊಳ್ಳಲಿದ್ದಾರೆ.

ಈ‌ ಕುರಿತು ಮೂಲಗಳಿಂದ ಮಾಹಿತಿ ಲಭ್ಯವಾಗಿದ್ದು, ಮಾಲ್ಡೀವ್ಸ್​ನಲ್ಲಿ ನಡೆಯುತ್ತಿರುವ ಚಿತ್ರೀಕರಣದಲ್ಲಿ ಅಜಯ್ ಈಗಾಗಲೇ ಭಾಗಿಯಾಗಿದ್ದಾರೆ. ಈ ಹಿಂದೆ ತಮ್ಮ‌ಇನ್ಸ್ಟಾಗ್ರಾಂ ಖಾತೆಯಲ್ಲಿ ಕಾರ್ಯಕ್ರಮವನ್ನು‌ ನಡೆಸಿಕೊಡುವ ಬ್ರಿಟಿಷ್ ಮೂಲದ ನಿರೂಪಕ‌ ಬೇರ್ ಗ್ರಿಲ್ಸ್, ಬಾಲಿವುಡ್​ನ ಇಬ್ಬರು ಖ್ಯಾತ ತಾರೆಯರು ಭಾಗವಹಿಸುವುದನ್ನು ಖಚಿತಪಡಿಸಿದ್ದರು. ಇದೀಗ ಆ ಪಟ್ಟಿಯಲ್ಲಿ ಅಜಯ್ ಹಾಗೂ ವಿಕ್ಕಿ ಹೆಸರು ಕಾಣಿಸಿಕೊಂಡಿದೆ. ವಿಕ್ಕಿ ಹಾಗೂ ಬೇರ್ ಗ್ರಿಲ್ಸ್, ಸಮುದ್ರ ತೀರದ ಪ್ರದೇಶವೊಂದರಲ್ಲಿ ಚಿತ್ರೀಕರಣ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

‘ಇನ್​ಟು ದಿ ವೈಲ್ಡ್ ವಿತ್ ಬೇರ್ ಗ್ರಿಲ್ಸ್’ ಖ್ಯಾತ ಕಾರ್ಯಕ್ರಮವಾಗಿದ್ದು, ಕಾಡಿನಲ್ಲಿ ಅತ್ಯಂತ ಕಷ್ಟದ ಸಂದರ್ಭದಲ್ಲಿ ಬಚಾವಾಗುವುದು ಹೇಗೆ ಎಂಬ ಪರಿಕಲ್ಪನೆಯಲ್ಲಿ ಮೂಡಿಬರುತ್ತದೆ. ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ, ಅಮೇರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮ, ಖ್ಯಾತ ಟೆನ್ನಿಸ್ ತಾರೆ ರೋಜರ್ ಫೆಡರರ್ ಸೇರಿದಂತೆ ಅನೇಕರು ಬ್ರಿಟನ್ ಮೂಲದ ಬೇರ್ ಗ್ರಿಲ್ಸ್ ನಡೆಸಿಕೊಡುವ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

ಇದನ್ನೂ ಓದಿ:

KBC 13: ಫುಡ್ ಡೆಲಿವರಿ ಬಾಯ್ ಆದ ಅಮಿತಾಭ್ ಬಚ್ಚನ್; ಭಾವುಕ ಸನ್ನಿವೇಶಕ್ಕೆ ಸಾಕ್ಷಿಯಾಯ್ತು ಕೆಬಿಸಿ ವೇದಿಕೆ

ಪದೇ ಪದೇ ಮದ್ದೂರಿಗೆ ಭೇಟಿ: ಅಭಿಷೇಕ್ ಅಂಬರೀಶ್ ಮದ್ದೂರಿನಲ್ಲಿ ಚುನಾವಣೆಗೆ ನಿಲ್ತಾರಾ?

(Vicky Koushal joins with Ajay Devgan for Into the wild with Bear Gyllys show in Maldives)

Published On - 11:01 am, Thu, 16 September 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ