AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸರಿಗಮಪ’ ವೇದಿಕೆ ಮೇಲೆ ಸುದೀಪ್​ಗಾಗಿ ಕವನ ಹೇಳಿದ ವಿಜಯ್ ಪ್ರಕಾಶ್; ಆ ಸಾಲುಗಳು ನಿಮಗೂ ಇಷ್ಟ ಆಗುತ್ತವೆ

ಸರಿಗಮಪ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ಅವರು ಅತಿಥಿಯಾಗಿ ಆಗಮಿಸಿ, ತಮ್ಮ ಚಿತ್ರ 'ಮ್ಯಾಕ್ಸ್' ನ ಯಶಸ್ಸನ್ನು ಆಚರಿಸಿದರು. ಅರ್ಜುನ್ ಜನ್ಯ ಮತ್ತು ವಿಜಯ್ ಪ್ರಕಾಶ್ ಅವರೊಂದಿಗೆ ಅವರು ತಮ್ಮ ಹಿಟ್ ಚಿತ್ರ 'ಕೆಂಪೇಗೌಡ'ದ ನೆನಪುಗಳನ್ನು ಹಂಚಿಕೊಂಡರು. ವಿಜಯ್ ಪ್ರಕಾಶ್ ಅವರು ಸುದೀಪ್ ಅವರಿಗಾಗಿ ವಿಶೇಷವಾಗಿ ಪ್ರಾಸಬದ್ಧ ಸಾಲುಗಳನ್ನು ಬರೆದು ಹೇಳಿದರು.

‘ಸರಿಗಮಪ’ ವೇದಿಕೆ ಮೇಲೆ ಸುದೀಪ್​ಗಾಗಿ ಕವನ ಹೇಳಿದ ವಿಜಯ್ ಪ್ರಕಾಶ್; ಆ ಸಾಲುಗಳು ನಿಮಗೂ ಇಷ್ಟ ಆಗುತ್ತವೆ
ಸುದೀಪ್-ವಿಜಯ್ ಪ್ರಕಾಶ್
ರಾಜೇಶ್ ದುಗ್ಗುಮನೆ
|

Updated on: Jan 02, 2025 | 8:56 AM

Share

ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ಶೋ ನಡೆಸಿಕೊಡುತ್ತಿರುವಾಗಲೇ ‘ಮ್ಯಾಕ್ಸ್’ ಸಕ್ಸಸ್​ನ ಎಂಜಾಯ್ ಮಾಡಲು ಬೇರೆ ಬೇರೆ ವೇದಿಕೆ ಏರುತ್ತಿದ್ದಾರೆ. ಅವರು ಈಗ ‘ಸರಿಗಮಪ’ ವೇದಿಕೆಗೆ ಬಂದಿದ್ದಾರೆ. ಅರ್ಜುನ್ ಜನ್ಯ, ವಿಜಯ್ ಪ್ರಕಾಶ್, ರಾಜೇಶ್ ಕೃಷ್ಣನ್ ಈ ಕಾರ್ಯಕ್ರಮದ ಮುಖ್ಯ ಜಡ್ಜ್ ಆಗಿದ್ದಾರೆ. ಈ ವೇದಿಕೆ ಮೇಲೆ ಸುದೀಪ್ ಅವರು ಮನ ಬಿಚ್ಚಿ ಮಾತನಾಡಿದ್ದಾರೆ. ಶನಿವಾರ (ಡಿಸೆಂಬರ್ 4) ಈ ಎಪಿಸೋಡ್ ಪ್ರಸಾರ ಕಾಣಲಿದೆ.

2011ರಲ್ಲಿ ಬಂದ ‘ಕೆಂಪೇಗೌಡ’ ಚಿತ್ರ ಸುದೀಪ್ ನಟನೆಯ ಸೂಪರ್ ಹಿಟ್ ಚಿತ್ರಗಳಲ್ಲಿ ಒಂದು. ಈ ಸಿನಿಮಾಗೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ. ವಿಜಯ್ ಪ್ರಕಾಶ್ ಅವರು ಈ ಚಿತ್ರದ ಹಾಡನ್ನು ಹಾಡಿದ್ದರು. ಸಿನಿಮಾ ಹಿಟ್ ಆಗಲು ಇದೂ ಕಾರಣ ಎಂದು ಸುದೀಪ್ ಅವರು ಬಲವಾಗಿ ನಂಬಿದ್ದಾರೆ. ಈ ಕಾರಣಕ್ಕೆ ‘ಸರಿಗಮಪ’ ವೇದಿಕೆ ಮೇಲೆ ಅವರನ್ನು ಸುದೀಪ್ ಹೊಗಳಿದ್ದಾರೆ.

‘ಕೆಂಪೆಗೌಡ’ ಚಿತ್ರದ ಎರಡು ರತ್ನಗಳು. ಅವರು ಧ್ವನಿ ಆದ್ರು, ನಾನು ದೇಹ ಆಗಿದ್ದೇನೆ’ ಎಂದರು ಸುದೀಪ್. ಕಿಚ್ಚನ ಅಭಿಮಾನಿಗಳಲ್ಲಿ ವಿಜಯ್ ಪ್ರಕಾಶ್ ಕೂಡ ಒಬ್ಬರು. ಅವರು ಸುದೀಪ್​ನ ಹಾಡಿ ಹೊಗಳಿದ್ದಾರೆ. ಅವರಿಗಾಗಿ ಸಾಲುಗಳನ್ನು ಕೂಡ ಬರೆದು ಹೇಳಿದ್ದಾರೆ.

ಕಿಚ್ಚ ಸುದೀಪ, ಫ್ಯಾನ್ಸ್​ಗೆ ಎಂದೆಂದಿಗೂ ಸಮೀಪ..

ನನ್ನಂತ ಅದೆಷ್ಟೋ ಕಲಾವಿದರಿಗೆ ಆಗಿದ್ದಾರೆ ದಾರೀ ದೀಪ..

ವೆಲ್​ಕಮ್​ ಟು ಸರೆಗಮಪ.. ಎಂದರು ವಿಜಯ್ ಪ್ರಕಾಶ್.

ವಿಜಯ್ ಅವರು ಬರೆದ ಪ್ರಾಸಬದ್ಧ ಸಾಲುಗಳು ಅಲ್ಲಿ ಕುಳಿತಿದ್ದವರಿಗೆ ಇಷ್ಟ ಆಯಿತು. ಈ ಕಾರಣಕ್ಕೆ ಎಲ್ಲರೂ ಖುಷಿಯಿಂದ ಚಪ್ಪಾಳೆ ತಟ್ಟಿದರು. ಈಗಾಗಲೇ ಸರಿಗಮಪ ಒಳ್ಳೆಯ ಟಿಆರ್​ಪಿ ಪಡೆಯುತ್ತಿದೆ. ಈ ವಾರ ಸುದೀಪ್ ಹಾಗೂ ಅವರ ಕುಟುಂಬ ಬಂದಿರುವುದರಿಂದ ಟಿಆರ್​ಪಿ ಮತ್ತಷ್ಟು ಹೆಚ್ಚುವ ನಿರೀಕ್ಷೆ ಇದೆ ಎಂದು ಹೇಳಲಾಗುತ್ತಿದೆ.

View this post on Instagram

A post shared by Zee Kannada (@zeekannada)

ಇದನ್ನೂ ಓದಿ: ಸುದೀಪ್ ನಿರ್ಮಾಣದ ಧಾರಾವಾಹಿಯಲ್ಲಿ ನಟಿಸಿದ್ದ ಕಾಫಿನಾಡು ಚಂದು; ಇಲ್ಲಿದೆ ವಿಡಿಯೋ

ಸುದೀಪ್ ಅವರು ಜೀ ಕನ್ನಡದ ರಿಯಾಲಿಟಿ ಶೋಗಳಲ್ಲಿ ಅತಿಥಿಯಾಗಿ ಕಾಣಿಸಿಕೊಂಡಿದ್ದು ಕಡಿಮೆ. ಈ ಬಾರಿ ಅವರು ‘ಸರಿಗಮಪ’ ವೇದಿಕೆ ಏರುತ್ತಿರುವುದರಿಂದ ಸಹಜವಾಗಿಯೇ ನಿರೀಕ್ಷೆ ಹೆಚ್ಚಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ