Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸರಿಗಮಪ’ ವೇದಿಕೆ ಮೇಲೆ ಸುದೀಪ್​ಗಾಗಿ ಕವನ ಹೇಳಿದ ವಿಜಯ್ ಪ್ರಕಾಶ್; ಆ ಸಾಲುಗಳು ನಿಮಗೂ ಇಷ್ಟ ಆಗುತ್ತವೆ

ಸರಿಗಮಪ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ಅವರು ಅತಿಥಿಯಾಗಿ ಆಗಮಿಸಿ, ತಮ್ಮ ಚಿತ್ರ 'ಮ್ಯಾಕ್ಸ್' ನ ಯಶಸ್ಸನ್ನು ಆಚರಿಸಿದರು. ಅರ್ಜುನ್ ಜನ್ಯ ಮತ್ತು ವಿಜಯ್ ಪ್ರಕಾಶ್ ಅವರೊಂದಿಗೆ ಅವರು ತಮ್ಮ ಹಿಟ್ ಚಿತ್ರ 'ಕೆಂಪೇಗೌಡ'ದ ನೆನಪುಗಳನ್ನು ಹಂಚಿಕೊಂಡರು. ವಿಜಯ್ ಪ್ರಕಾಶ್ ಅವರು ಸುದೀಪ್ ಅವರಿಗಾಗಿ ವಿಶೇಷವಾಗಿ ಪ್ರಾಸಬದ್ಧ ಸಾಲುಗಳನ್ನು ಬರೆದು ಹೇಳಿದರು.

‘ಸರಿಗಮಪ’ ವೇದಿಕೆ ಮೇಲೆ ಸುದೀಪ್​ಗಾಗಿ ಕವನ ಹೇಳಿದ ವಿಜಯ್ ಪ್ರಕಾಶ್; ಆ ಸಾಲುಗಳು ನಿಮಗೂ ಇಷ್ಟ ಆಗುತ್ತವೆ
ಸುದೀಪ್-ವಿಜಯ್ ಪ್ರಕಾಶ್
Follow us
ರಾಜೇಶ್ ದುಗ್ಗುಮನೆ
|

Updated on: Jan 02, 2025 | 8:56 AM

ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ಶೋ ನಡೆಸಿಕೊಡುತ್ತಿರುವಾಗಲೇ ‘ಮ್ಯಾಕ್ಸ್’ ಸಕ್ಸಸ್​ನ ಎಂಜಾಯ್ ಮಾಡಲು ಬೇರೆ ಬೇರೆ ವೇದಿಕೆ ಏರುತ್ತಿದ್ದಾರೆ. ಅವರು ಈಗ ‘ಸರಿಗಮಪ’ ವೇದಿಕೆಗೆ ಬಂದಿದ್ದಾರೆ. ಅರ್ಜುನ್ ಜನ್ಯ, ವಿಜಯ್ ಪ್ರಕಾಶ್, ರಾಜೇಶ್ ಕೃಷ್ಣನ್ ಈ ಕಾರ್ಯಕ್ರಮದ ಮುಖ್ಯ ಜಡ್ಜ್ ಆಗಿದ್ದಾರೆ. ಈ ವೇದಿಕೆ ಮೇಲೆ ಸುದೀಪ್ ಅವರು ಮನ ಬಿಚ್ಚಿ ಮಾತನಾಡಿದ್ದಾರೆ. ಶನಿವಾರ (ಡಿಸೆಂಬರ್ 4) ಈ ಎಪಿಸೋಡ್ ಪ್ರಸಾರ ಕಾಣಲಿದೆ.

2011ರಲ್ಲಿ ಬಂದ ‘ಕೆಂಪೇಗೌಡ’ ಚಿತ್ರ ಸುದೀಪ್ ನಟನೆಯ ಸೂಪರ್ ಹಿಟ್ ಚಿತ್ರಗಳಲ್ಲಿ ಒಂದು. ಈ ಸಿನಿಮಾಗೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ. ವಿಜಯ್ ಪ್ರಕಾಶ್ ಅವರು ಈ ಚಿತ್ರದ ಹಾಡನ್ನು ಹಾಡಿದ್ದರು. ಸಿನಿಮಾ ಹಿಟ್ ಆಗಲು ಇದೂ ಕಾರಣ ಎಂದು ಸುದೀಪ್ ಅವರು ಬಲವಾಗಿ ನಂಬಿದ್ದಾರೆ. ಈ ಕಾರಣಕ್ಕೆ ‘ಸರಿಗಮಪ’ ವೇದಿಕೆ ಮೇಲೆ ಅವರನ್ನು ಸುದೀಪ್ ಹೊಗಳಿದ್ದಾರೆ.

‘ಕೆಂಪೆಗೌಡ’ ಚಿತ್ರದ ಎರಡು ರತ್ನಗಳು. ಅವರು ಧ್ವನಿ ಆದ್ರು, ನಾನು ದೇಹ ಆಗಿದ್ದೇನೆ’ ಎಂದರು ಸುದೀಪ್. ಕಿಚ್ಚನ ಅಭಿಮಾನಿಗಳಲ್ಲಿ ವಿಜಯ್ ಪ್ರಕಾಶ್ ಕೂಡ ಒಬ್ಬರು. ಅವರು ಸುದೀಪ್​ನ ಹಾಡಿ ಹೊಗಳಿದ್ದಾರೆ. ಅವರಿಗಾಗಿ ಸಾಲುಗಳನ್ನು ಕೂಡ ಬರೆದು ಹೇಳಿದ್ದಾರೆ.

ಕಿಚ್ಚ ಸುದೀಪ, ಫ್ಯಾನ್ಸ್​ಗೆ ಎಂದೆಂದಿಗೂ ಸಮೀಪ..

ನನ್ನಂತ ಅದೆಷ್ಟೋ ಕಲಾವಿದರಿಗೆ ಆಗಿದ್ದಾರೆ ದಾರೀ ದೀಪ..

ವೆಲ್​ಕಮ್​ ಟು ಸರೆಗಮಪ.. ಎಂದರು ವಿಜಯ್ ಪ್ರಕಾಶ್.

ವಿಜಯ್ ಅವರು ಬರೆದ ಪ್ರಾಸಬದ್ಧ ಸಾಲುಗಳು ಅಲ್ಲಿ ಕುಳಿತಿದ್ದವರಿಗೆ ಇಷ್ಟ ಆಯಿತು. ಈ ಕಾರಣಕ್ಕೆ ಎಲ್ಲರೂ ಖುಷಿಯಿಂದ ಚಪ್ಪಾಳೆ ತಟ್ಟಿದರು. ಈಗಾಗಲೇ ಸರಿಗಮಪ ಒಳ್ಳೆಯ ಟಿಆರ್​ಪಿ ಪಡೆಯುತ್ತಿದೆ. ಈ ವಾರ ಸುದೀಪ್ ಹಾಗೂ ಅವರ ಕುಟುಂಬ ಬಂದಿರುವುದರಿಂದ ಟಿಆರ್​ಪಿ ಮತ್ತಷ್ಟು ಹೆಚ್ಚುವ ನಿರೀಕ್ಷೆ ಇದೆ ಎಂದು ಹೇಳಲಾಗುತ್ತಿದೆ.

View this post on Instagram

A post shared by Zee Kannada (@zeekannada)

ಇದನ್ನೂ ಓದಿ: ಸುದೀಪ್ ನಿರ್ಮಾಣದ ಧಾರಾವಾಹಿಯಲ್ಲಿ ನಟಿಸಿದ್ದ ಕಾಫಿನಾಡು ಚಂದು; ಇಲ್ಲಿದೆ ವಿಡಿಯೋ

ಸುದೀಪ್ ಅವರು ಜೀ ಕನ್ನಡದ ರಿಯಾಲಿಟಿ ಶೋಗಳಲ್ಲಿ ಅತಿಥಿಯಾಗಿ ಕಾಣಿಸಿಕೊಂಡಿದ್ದು ಕಡಿಮೆ. ಈ ಬಾರಿ ಅವರು ‘ಸರಿಗಮಪ’ ವೇದಿಕೆ ಏರುತ್ತಿರುವುದರಿಂದ ಸಹಜವಾಗಿಯೇ ನಿರೀಕ್ಷೆ ಹೆಚ್ಚಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಂಗಳೂರಿನಲ್ಲೊಂದು ಎದೆ ಝಲ್ ಎನಿಸುವ ಭೀಕರ ಅಪಘಾತ
ಮಂಗಳೂರಿನಲ್ಲೊಂದು ಎದೆ ಝಲ್ ಎನಿಸುವ ಭೀಕರ ಅಪಘಾತ
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ