AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡಿಕೆಡಿ’ ಜಡ್ಜ್​ ಸ್ಥಾನದಲ್ಲಿ ವಿಜಯ್ ರಾಘವೇಂದ್ರ; ‘ನಿಮ್ಮ ಜೀವನೋತ್ಸಾಹ ನಮಗೆಲ್ಲ ಸ್ಫೂರ್ತಿ’ ಎಂದ ವೀಕ್ಷಕರು

ವಿಜಯ್​ಗೆ ಸ್ಪಂದನಾ ಸಾವು ಆಘಾತಕಾರಿ ಆಗಿತ್ತು. ಅವರು ಹಲವು ದಿನಗಳಕಾಲ ಚಿತ್ರರಂಗದಿಂದ ದೂರವೇ ಇದ್ದರು. ‘ಡಿಕೆಡಿ’ ಶೋಗೂ ಅವರು ಬರುತ್ತಿರಲಿಲ್ಲ. ಈಗ ಅವರು ಎಲ್ಲವನ್ನೂ ಮರೆತು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಲು ನಿರ್ಧರಿಸಿದ್ದಾರೆ. ಡಿಕೆಡಿ ಶೋಗೂ ಬರುತ್ತಿದ್ದಾರೆ.

‘ಡಿಕೆಡಿ’ ಜಡ್ಜ್​ ಸ್ಥಾನದಲ್ಲಿ ವಿಜಯ್ ರಾಘವೇಂದ್ರ; ‘ನಿಮ್ಮ ಜೀವನೋತ್ಸಾಹ ನಮಗೆಲ್ಲ ಸ್ಫೂರ್ತಿ’ ಎಂದ ವೀಕ್ಷಕರು
ವಿಜಯ್ ರಾಘವೇಂದ್ರ
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 01, 2023 | 1:08 PM

Share

ವಿಜಯ್ ರಾಘವೇಂದ್ರ (Vijay Raghavendra) ಅವರ ಬಾಳಲ್ಲಿ ದೊಡ್ಡ ಕಹಿ ಘಟನೆ ನಡೆಯಿತು. ಅವರ ಪತ್ನಿ ಸ್ಪಂದನಾ ಅವರು ಕಳೆದ ತಿಂಗಳು ಹೃದಯಾಘಾತದಿಂದ ಮೃತಪಟ್ಟರು. ಈ ನೋವು ಎಂದಿಗೂ ಮರೆಯಾಗುವಂಥದ್ದಲ್ಲ. ಅವರನ್ನು ನೆನಪಿಸಿಕೊಂಡಾಗಲೆಲ್ಲ ವಿಜಯ್​ಗೆ ಅಳು ಬರುತ್ತದೆ. ಆದರೆ, ಈ ನೋವನ್ನು ನುಂಗಿ ಮುಂದೆ ಸಾಗಲೇಬೇಕಿದೆ. ಈಗ ವಿಜಯ್ ರಾಘವೇಂದ್ರ ಅವರು ಸಿನಿಮಾ ಕೆಲಸಕ್ಕೆ ಮರಳಿದ್ದಾರೆ. ಜೊತೆಗೆ ಕಿರುತೆರೆಯಲ್ಲೂ ತೊಡಗಿಕೊಂಡಿದ್ದಾರೆ. ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೀಸನ್ 7’ ಜಡ್ಜ್​ ಸ್ಥಾನದಲ್ಲಿ ಅವರು ಮತ್ತೆ ಕಾಣಿಸಿಕೊಂಡಿದ್ದಾರೆ. ಅವರನ್ನು ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ವಿಜಯ್ ಅವರ ಜೀವನೋತ್ಸಾಹ ಕಂಡು ಅನೇಕರು ಭೇಷ್ ಎಂದಿದ್ದಾರೆ.

ವಿಜಯ್ ಹಾಗೂ ಸ್ಪಂದನಾ ಪ್ರೀತಿಸಿ ಮದುವೆ ಆದವರು. ಇಬ್ಬರೂ ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ. ಏಕಾಏಕಿ ಅವರು ಮೃತಪಟ್ಟರೆ ಯಾರಿಗಾದರೂ ಶಾಕ್ ಆಗುತ್ತದೆ. ವಿಜಯ್​ಗೂ ಸ್ಪಂದನಾ ಸಾವು ಆಘಾತಕಾರಿ ಆಗಿತ್ತು. ಅವರು ಹಲವು ದಿನಗಳಕಾಲ ಚಿತ್ರರಂಗದಿಂದ ದೂರವೇ ಇದ್ದರು. ‘ಡಿಕೆಡಿ’ ಶೋಗೂ ಅವರು ಬರುತ್ತಿರಲಿಲ್ಲ. ಈಗ ಅವರು ಎಲ್ಲವನ್ನೂ ಮರೆತು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಲು ನಿರ್ಧರಿಸಿದ್ದಾರೆ.

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೀಸನ್ 7’ ಈ ವಾರದ ಪ್ರೋಮೋನ ಜೀ ಕನ್ನಡ ವಾಹಿನಿ ಹಂಚಿಕೊಂಡಿದೆ. ಜಡ್ಜ್​​ ಸ್ಥಾನದಲ್ಲಿ ವಿಜಯ್ ರಾಘವೇಂದ್ರ ಅವರನ್ನು ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಈ ಪ್ರೋಮೋಗೆ ಬಗೆಬಗೆಯ ಕಮೆಂಟ್​ಗಳು ಬಂದಿವೆ. ‘ರಾಘು ಸರ್ ನೀವು ಬಂದಿದ್ದು ಖುಷಿ ಆಯ್ತು. ನೋವುಗಳ ಜೊತೆ ಜವಾಬ್ದಾರಿಗಳನ್ನು ನಿಭಾಯಿಸಿಕೊಂಡು ಹೋಗುವುದು ಮುಖ್ಯ ಅನ್ನೋದನ್ನು ಸಮಾಜಕ್ಕೆ ಕಲಿಸುವ ನಿಮ್ಮ ನಡವಳಿಕೆ ನಮಗೆಲ್ಲ ಮಾದರಿ’ ಎಂದು ಕೆಲವರು ಬರೆದುಕೊಂಡಿದ್ದಾರೆ. ‘ನಿಮ್ಮ ಜೀವನೋತ್ಸಾಹ ನಮಗೆಲ್ಲ ಮಾದರಿ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಪೂರ್ತಿ ಎಪಿಸೋಡ್ ಶನಿವಾರ (ಸೆಪ್ಟೆಂಬರ್ 2) ಹಾಗೂ ಭಾನುವಾರ (ಸೆಪ್ಟೆಂಬರ್ 3) ರಾತ್ರಿ 7:30ಕ್ಕೆ ಪ್ರಸಾರ ಆಗಲಿದೆ.

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಈಗಾಗಲೇ ಆರು ಸೀಸನ್​ಗಳನ್ನು ಯಶಸ್ವಿಯಾಗಿ ಪೂರೈಸಿದೆ. ಏಳನೇ ಸೀಸನ್ ಪ್ರಸಾರ ಕಾಣುತ್ತಿದೆ. ಅನೇಕ ಪ್ರತಿಭೆಗಳಿಗೆ ‘ಡಿಕೆಡಿ’ ವೇದಿಕೆ ಆಗಿದೆ. ಶಿವರಾಜ್​ಕುಮಾರ್, ರಕ್ಷಿತಾ ಪ್ರೇಮ್, ಚಿನ್ನಿ ಮಾಸ್ಟರ್​, ವಿಜಯ್ ರಾಘವೇಂದ್ರ ಜಡ್ಜ್ ಸ್ಥಾನದಲ್ಲಿದ್ದಾರೆ.

View this post on Instagram

A post shared by Zee Kannada (@zeekannada)

ಇದನ್ನೂ ಓದಿ: ವಿಜಯ್ ರಾಘವೇಂದ್ರ ‘ಕದ್ದ ಚಿತ್ರ’ದ ರಿಲೀಸ್ ದಿನಾಂಕ ಘೋಷಣೆ; ನೋವಿನಲ್ಲೂ ಮರೆತಿಲ್ಲ ಕರ್ತವ್ಯ

ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಅವರು ಆಗಸ್ಟ್ 6ರಂದು ಮಾಲ್ಡೀವ್ಸ್​ನಲ್ಲಿ ಹೃದಯಾಘಾತದಿಂದ ಮೃತಪಟ್ಟರು. ಅವರ ಪಾರ್ಥಿವ ಶರೀರವನ್ನು ಭಾರತಕ್ಕೆ ತರಲು ಸಾಕಷ್ಟು ಸಮಯ ಹಿಡಿಯಿತು. ಅಲ್ಲಿನ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ವಿಮಾನದ ಮೂಲಕ ಸ್ಪಂದನಾ ಶವವನ್ನು ಭಾರತಕ್ಕೆ ತರಲಾಯಿತು. ಬಳಿಕ ಬೆಂಗಳೂರಿನಲ್ಲಿ ಅಂತ್ಯಕ್ರಿಯೆ ಮಾಡಲಾಯಿತು. ವಿಜಯ್ ಅವರು ‘ಕದ್ದ ಚಿತ್ರ’ದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಸೆಪ್ಟೆಂಬರ್ 8ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಪ್ರಚಾರ ಕಾರ್ಯದಲ್ಲೂ ಅವರು ಭಾಗಿ ಆಗುತ್ತಿದ್ದಾರೆ. ಈ ಚಿತ್ರವನ್ನು ಸುಹಾಸ್ ಕೃಷ್ಣ ಅವರು ನಿರ್ದೇಶನ ಮಾಡಿದ್ದಾರೆ. ವಿಜಯ್ ರಾಘವೇಂದ್ರ, ನಮ್ರತಾ ಸುರೇಂದ್ರನಾಥ್, ರಾಘು ಶಿವಮೊಗ್ಗ ಚಿತ್ರದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ