AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೃಷ್ಟಿ ಬೊಟ್ಟು’ ಧಾರಾವಾಹಿಯಿಂದ ಎಕ್ಸಿಟ್ ಆದ ವಿಜಯ್ ಸೂರ್ಯ? ಬಿಗ್ ಬಾಸ್ ಅನುಮಾನ

ಕಲರ್ಸ್ ಕನ್ನಡದ ‘ದೃಷ್ಟಿ ಬೊಟ್ಟು’ ಧಾರಾವಾಹಿಯಿಂದ ನಟ ವಿಜಯ್ ಸೂರ್ಯ ಅವರು ಹೊರ ನಡೆದಿರುವ ಬಗ್ಗೆ ವರದಿಗಳು ಹರಿದಾಡುತ್ತಿವೆ. ಬಿಗ್ ಬಾಸ್ ಕಾರ್ಯಕ್ರಮಕ್ಕೆ ಅವರು ಹೋಗುತ್ತಿದ್ದಾರೆ ಎಂಬ ಊಹಾಪೋಹಗಳು ಹಬ್ಬುತ್ತಿವೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಇನ್ನೂ ಆಗಿಲ್ಲ. ವಿಜಯ್ ಸೂರ್ಯ ಅವರು ಈ ಹಿಂದೆ "ಅಗ್ನಿಸಾಕ್ಷಿ" ಧಾರಾವಾಹಿಯಲ್ಲೂ ನಟಿಸಿದ್ದರು.

‘ದೃಷ್ಟಿ ಬೊಟ್ಟು’ ಧಾರಾವಾಹಿಯಿಂದ ಎಕ್ಸಿಟ್ ಆದ ವಿಜಯ್ ಸೂರ್ಯ? ಬಿಗ್ ಬಾಸ್ ಅನುಮಾನ
ವಿಜಯ್ ಸೂರ್ಯ
ರಾಜೇಶ್ ದುಗ್ಗುಮನೆ
|

Updated on: Sep 08, 2025 | 2:56 PM

Share

‘ದೃಷ್ಟಿ ಬೊಟ್ಟು’ ಧಾರಾವಾಹಿ ಕಲರ್ಸ್​ ಕನ್ನಡದಲ್ಲಿ ಪ್ರಸಾರ ಕಾಣುತ್ತಾ ಬರುತ್ತಿದೆ. ಈಗ ಧಾರಾವಾಹಿಯಲ್ಲಿ ವಿಜಯ್ ಸೂರ್ಯ (Vijay Surya) ಹೀರೋ ಆಗಿ ನಟಿಸಿದ್ದರು. ಈ ಧಾರಾವಾಹಿಯಿಂದ ಅವರು ಹೊರ ನಡೆದಿದ್ದಾರೆ ಎನ್ನುವ ಬಗ್ಗೆ ವರದಿ ಆಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಶಾಕ್ ಆಗಿದ್ದಾರೆ. ಅವರು ‘ಬಿಗ್ ಬಾಸ್​’ಗೆ ತೆರಳಲು ಈ ರೀತಿ ನಿರ್ಧಾರ ಮಾಡಿದರೇ ಎನ್ನುವ ಪ್ರಶ್ನೆ ಮೂಡಿದೆ. ಈ ಬಗ್ಗೆ ವಾಹಿನಿ ಕಡೆಯಿಂದಾಗಲಿ ಅಥವಾ ಅವರ ಕಡೆಯಿಂದಾಗಲಿ ಅಧಿಕೃತ ಮಾಹಿತಿ ಸಿಕ್ಕಿಲ್ಲ.

ವಿಜಯ್ ಸೂರ್ಯ ಅವರು ಈ ಮೊದಲು ‘ಅಗ್ನಿಸಾಕ್ಷಿ’ ಧಾರಾವಾಹಿಯಲ್ಲಿ ನಟಿಸಿದ್ದರು. ಈ ಧಾರಾವಾಹಿ ಕಲರ್ಸ್ ಕನ್ನಡದಲ್ಲಿ ಆರು ವರ್ಷಗಳ ಕಾಲ ಪ್ರಸಾರ ಕಂಡಿತು. ಈ ಧಾರಾವಾಹಿಯಲ್ಲಿ ವಿಜಯ್ ಹಾಗೂ ವೈಷ್ಣವಿ ಗೌಡ ಒಟ್ಟಾಗಿ ನಟಿಸಿದರು. ಈ ಧಾರಾವಾಹಿ ಒಳ್ಳೆಯ ಟಿಆರ್​ಪಿ ಪಡೆಯಿತು. ಆ ಬಳಿಕ ವಿಜಯ್ ಸೂರ್ಯ ಅವರು ಕಿರುತೆರೆ ಲೋಕ ತೊರೆದು ಹಿರಿತೆರೆಯಲ್ಲಿ ಬ್ಯುಸಿ ಆದರು. ಅವರು ಸಿನಿಮಾಗಳನ್ನು ಮಾಡಿದರು.

ಒಂದು ಗ್ಯಾಪ್ ಬಳಿಕ ವಿಜಯ್ ಅವರು ಕಿರುತೆರೆಗೆ ಮರಳಿದ್ದಾರೆ. ‘ದೃಷ್ಟಿ ಬೊಟ್ಟು’ ಧಾರಾವಾಹಿಯಲ್ಲಿ ದತ್ತ ಶ್ರೀರಾಮ್ ಪಾಟೀಲ್ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಈ ಪಾತ್ರ ಉತ್ತರ ಕರ್ನಾಟಕ ಶೈಲಿಯಲ್ಲಿ ಇತ್ತು. ಖಡಕ್ ಆದ ಪಾತ್ರ ಅವರದ್ದಾಗಿತ್ತು. ಅವರು ಧಾರಾವಾಹಿಯಿಂದ ಹೊರ ನಡೆದಿದ್ದಾರಂತೆ.

ಇದನ್ನೂ ಓದಿ
Image
ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡರಾ ರಶ್ಮಿಕಾ ಮಂದಣ್ಣ? ಗಮನ ಸೆಳೆದ ಉಂಗುರ
Image
‘ಹಳ್ಳಿ ಪವರ್​​’ನಲ್ಲಿ ಮೊದಲ ವಾರವೇ ಇಬ್ಬರು ಎಲಿಮಿನೇಟ್
Image
‘ಸು ಫ್ರಮ್ ಸೋ’ ಒಟಿಟಿ ದಿನಾಂಕ ರಿವೀಲ್; 45ನೇ ದಿನವೂ ಅಬ್ಬರದ ಕಲೆಕ್ಷನ್
Image
ಸೂರ್ಯವಂಶಿ ನಟ ನಿಧನ; ವಾಯು ಪಡೆಯಲ್ಲಿ ಸೇವೆ ಸಲ್ಲಿಸಿ ಚಿತ್ರರಂಗಕ್ಕೆ ಎಂಟ್ರಿ

ಸುಂದರಿಯರು ಮೋಸ ಮಾಡುತ್ತಾರೆ ಎಂಬ ನಂಬಿಕೆ ದತ್ತನದ್ದು. ಸೌಂದರ್ಯ ತನಗೆ ಮುಳುವು ಎಂದು ದೃಷ್ಟಿ ನಂಬಿದ್ದಳು. ಈ ಕಾರಣದಿಂದ ಕಪ್ಪು ಬಣ್ಣವನ್ನು ಅವಳು ಮುಖಕ್ಕೆ ಬಳಿದುಕೊಳ್ಳುತ್ತಿದ್ದಳು. ಇಬ್ಬರ ಮದುವೆಯೂ ನಡೆದಿದೆ. ಈಗ ದೃಷ್ಟಿಯ ನಿಜವಾದ ಬಣ್ಣ ದತ್ತಾಗೆ ಗೊತ್ತಾಗಿದೆ. ಹೀಗಾಗಿ, ಆತ ಸಾಕಷ್ಟು ಬೇಸರಗೊಂಡಿದ್ದಾನೆ.

ಇದನ್ನೂ ಓದಿ: ’ವೀರಪುತ್ರ’ನಾಗಿ ಅಗ್ನಿಸಾಕ್ಷಿ ಸಿದ್ದಾರ್ಥ್: ಖಡಕ್ ಲುಕ್​ನಲ್ಲಿ ಚಾಕಲೇಟ್ ಹೀರೋ ವಿಜಯ್ ಸೂರ್ಯ

ವಿಜಯ್ ಸೂರ್ಯ ಧಾರಾವಾಹಿಯಿಂದ ಹೊರ ನಡೆದಿದ್ದು ಏಕೆ ಎಂಬ ವಿಚಾರ ಇನ್ನೂ ರಿವೀಲ್ ಆಗಿಲ್ಲ. ಅವರು ಬಿಗ್ ಬಾಸ್​ಗೆ ಬರುತ್ತಿರಬಹುದು, ಹೀಗಾಗಿ ಧಾರಾವಾಹಿ ಬಿಟ್ಟಿದ್ದಾರೆ ಎನ್ನುವ ಮಾತುಗಳು ಕೂಡ ಕೇಳಿ ಬಂದಿವೆ. ಕಲರ್ಸ್​​ನಲ್ಲಿ ‘ದೃಷ್ಟಿ ಬೊಟ್ಟು’ ಧಾರಾವಾಹಿ ಪ್ರತಿ ದಿನ ಸಂಜೆ 6 ಗಂಟೆಗೆ ಪ್ರಸಾರ ಕಾಣುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್