‘ವಿಜಯೀಭವ ಸಂಗೀತಾ ಶೃಂಗೇರಿ’ ಟ್ರೆಂಡ್​​ನಲ್ಲಿ ಎಲ್ಲಾ ದಾಖಲೆಗಳು ಉಡೀಸ್; ಏಳು ಲಕ್ಷ ಟ್ವೀಟ್​

ಸಂಗೀತಾ ಶೃಂಗೇರಿ ಅವರು ಬಿಗ್ ಬಾಸ್ ಜರ್ನಿಯಲ್ಲಿ ಸಾಕಷ್ಟು ಏರಿಳಿತ ಕಂಡರು. ಅವರು ಇತ್ತೀಚೆಗೆ ಸಾಕಷ್ಟು ಸ್ಟ್ರಾಂಗ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರು ತಮ್ಮ ಮಾತಿಗೆ ಸ್ಟ್ಯಾಂಡ್ ಆಗುತ್ತಾರೆ. ಇದು ಸಾಕಷ್ಟು ಜನರಿಗೆ ಇಷ್ಟ ಆಗಿದೆ.

‘ವಿಜಯೀಭವ ಸಂಗೀತಾ ಶೃಂಗೇರಿ’ ಟ್ರೆಂಡ್​​ನಲ್ಲಿ ಎಲ್ಲಾ ದಾಖಲೆಗಳು ಉಡೀಸ್; ಏಳು ಲಕ್ಷ ಟ್ವೀಟ್​
ಸಂಗೀತಾ
Follow us
| Updated By: ರಾಜೇಶ್ ದುಗ್ಗುಮನೆ

Updated on:Jan 22, 2024 | 9:41 AM

ಸಂಗೀತಾ ಶೃಂಗೇರಿ (Sangeetha Sringeri) ಅವರು ಈ ಬಾರಿ ಕಪ್ ಗೆಲ್ಲಬೇಕು ಎಂಬುದು ಅನೇಕರ ಕೋರಿಕೆ. ಈ ಕೋರಿಕೆ ಈಡೇರುವ ಲಕ್ಷಣ ಗೋಚರವಾಗಿದೆ. ಟ್ವಿಟರ್​ನಲ್ಲಿ ಸಂಗೀತಾ ಶೃಂಗೇರಿ ಬಗ್ಗೆ ಆದ ಟ್ವೀಟ್​ಗಳೇ ಇದಕ್ಕೆ ಸಾಕ್ಷಿ. ‘ವಿಜಯೀಭವ ಸಂಗೀತಾ ಶೃಂಗೇರಿ’ ಅನ್ನೋದು ಒಂದಲ್ಲ, ಎರಡಲ್ಲ ಬರೋಬ್ಬರಿ 7 ಲಕ್ಷ ಬಾರಿ ಟ್ವೀಟ್ ಆಗಿದೆ. ಕನ್ನಡ ಬಿಗ್ ಬಾಸ್ ಸ್ಪರ್ಧಿಗಳ ಪೈಕಿ ಈ ಮಟ್ಟಿಗೆ ಟ್ವೀಟ್ ಆಗಿದ್ದು ಸಂಗೀತಾ ಹೆಸರಲ್ಲಿ ಮಾತ್ರ. ಇದನ್ನು ಸಹಿಸದ ಕೆಲವರು ‘ಹಣ ಕೊಟ್ಟು ಮಾಡಿಸಲಾಗಿದೆ’ ಎಂಬ ಆರೋಪವನ್ನು ಮಾಡುತ್ತಿದ್ದಾರೆ.

ಭಾನುವಾರ (ಜನವರಿ 21) ಬೆಳಿಗ್ಗೆ 9 ಗಂಟೆಗೆ ‘VIJAYIBHAVA SANGEETHA SRINGERI’ ಎಂದು ಟ್ವೀಟ್ ಮಾಡೋಕೆ ಆರಂಭಿಸಿದರು. ಈ ಟ್ರೆಂಡ್ ಜೋರಾಯಿತು. ರಾತ್ರಿ ವೇಳೆಗೆ 4 ಲಕ್ಷ ಟ್ವೀಟ್ ಆಗಿತ್ತು. ಮಧ್ಯರಾತ್ರಿ ವೇಳೆಗೆ ಈ ಸಂಖ್ಯೆ 6.68 ಲಕ್ಷ ತಲುಪಿತ್ತು. ಈ ಮೂಲಕ ಅವರು ಎಲ್ಲಾ ದಾಖಲೆ ಉಡೀಸ್ ಮಾಡಿದ್ದಾರೆ.

ಕಳೆದ ಸೀಸನ್ ವಿನ್ನರ್ ರೂಪೇಶ್ ಶೆಟ್ಟಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿತ್ತು. ಅವರು 4+ ಲಕ್ಷ ಟ್ವೀಟ್ ಪಡೆದು ಮೊದಲಿದ್ದರು. ಎರಡನೇ ಸ್ಥಾನದಲ್ಲಿ ಡ್ರೋನ್ ಪ್ರತಾಪ್ ಇದ್ದರು. ಮೂರನೇ ಸ್ಥಾನದಲ್ಲಿ ರಾಕೇಶ್ ಅಡಿಗ ಇದ್ದರು. ಈಗ ಇವರೆಲ್ಲ ದಾಖಲೆಯನ್ನು ಮುರಿದು ಸಂಗೀತಾ ಮುಂದೆ ಸಾಗಿದ್ದಾರೆ. ಅವರಿಗೆ ಎಷ್ಟು ದೊಡ್ಡ ಅಭಿಮಾನ ಬಳಗ ಸೃಷ್ಟಿ ಆಗಿದೆ ಎಂಬುದಕ್ಕೆ ಇದೊಂದು ಉತ್ತಮ ಉದಾಹರಣೆ. ಸಂಗೀತಾ ಕಪ್ ಗೆಲ್ಲಲಿ ಎಂದು ಎಲ್ಲರೂ ಬಯಸುತ್ತಿದ್ದಾರೆ.

ಸಂಗೀತಾ ಶೃಂಗೇರಿ ಅವರು ಈಗಾಗಲೇ ಬಿಗ್ ಬಾಸ್ ಫಿನಾಲೆ ಟಿಕೆಟ್ ಪಡೆದು ಫಿನಾಲೆ ವೀಕ್ ತಲುಪಿದ್ದಾರೆ. ಟಾಪ್ ಆರರಲ್ಲಿ ಅವರ ಹೆಸರು ನೋಂದಣಿ ಆಗಿದೆ. ತುಕಾಲಿ ಸಂತೋಷ್, ವರ್ತೂರು ಸಂತೋಷ್, ವಿನಯ್ ಗೌಡ, ಕಾರ್ತಿಕ್ ಮಹೇಶ್, ಡ್ರೋನ್ ಪ್ರತಾಪ್ ಹಾಗೂ ಸಂಗೀತಾ ಟಾಪ್ ಐದರ ಸ್ಥಾನಕ್ಕೆ ಸ್ಪರ್ಧೆ ಮಾಡುತ್ತಿದ್ದಾರೆ. ಈ ವಾರದ ಮಧ್ಯದಲ್ಲಿ ಒಬ್ಬರು ಎಲಿಮಿನೇಟ್ ಆಗಲಿದ್ದಾರೆ.

ಇದನ್ನೂ ಓದಿ: ‘ವಿಜಯೀ ಭವ ಸಂಗೀತಾ ಶೃಂಗೇರಿ’; ಭಾರತದ ಟ್ರೆಂಡ್​ನಲ್ಲಿ ಬಂತು ಹೆಸರು

ಸಂಗೀತಾ ಶೃಂಗೇರಿ ಅವರು ಬಿಗ್ ಬಾಸ್ ಜರ್ನಿಯಲ್ಲಿ ಸಾಕಷ್ಟು ಏರಿಳಿತ ಕಂಡರು. ಅವರು ಇತ್ತೀಚೆಗೆ ಸಾಕಷ್ಟು ಸ್ಟ್ರಾಂಗ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರು ತಮ್ಮ ಮಾತಿಗೆ ಸ್ಟ್ಯಾಂಡ್ ಆಗುತ್ತಾರೆ. ಇದು ಸಾಕಷ್ಟು ಜನರಿಗೆ ಇಷ್ಟ ಆಗಿದೆ. ಸಂಗೀತಾ ಶೃಂಗೇರಿ ಕಣ್ಣಿಗೆ ಹಾನಿ ಆಗಿತ್ತು. ಇದರಿಂದ ಅವರು ಸಾಕಷ್ಟು ಜನಪ್ರಿಯತೆ ಪಡೆದರು. ಕಲರ್ಸ್ ಕನ್ನಡ ವಾಹಿನಿಯಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ 24 ಗಂಟೆ ಲೈವ್ ಕೂಡ ವಿಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:24 am, Mon, 22 January 24

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ