AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಜಯೀ ಭವ ಸಂಗೀತಾ ಶೃಂಗೇರಿ’; ಭಾರತದ ಟ್ರೆಂಡ್​ನಲ್ಲಿ ಬಂತು ಹೆಸರು

VIJAYIBHAVA SANGEETHA SRINGERI: ಸಂಗಿತಾ ಫಿನಾಲೆ ತಲುಪಿದ್ದಾರೆ. ಈ ಸಂದರ್ಭದಲ್ಲಿ ಸಂಗೀತಾ ಅವರು ಹೆಚ್ಚು ಗಮನ ಸೆಳೆಯುತ್ತಿದ್ದಾರೆ. ಅವರು ಬ್ಯಾಕ್ ಟು ಬ್ಯಾಕ್ ಎರಡು ಬಾರಿ ಕ್ಯಾಪ್ಟನ್ ಆಗಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಅವರಿಗೆ ಫ್ಯಾನ್ಸ್​ನಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ

‘ವಿಜಯೀ ಭವ ಸಂಗೀತಾ ಶೃಂಗೇರಿ’; ಭಾರತದ ಟ್ರೆಂಡ್​ನಲ್ಲಿ ಬಂತು ಹೆಸರು
ಸಂಗೀತಾ
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on:Jan 22, 2024 | 5:44 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ಫಿನಾಲೆ ಟಿಕೆಟ್ ಪಡೆದಿರೋ ಸಂಗೀತಾ ಶೃಂಗೇರಿ (Sangeetha Sringeri) ಅವರು ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಇದು ಪದೇ ಪದೇ ಸಾಬೀತಾಗುತ್ತಿದೆ. ಸಂಗೀತಾ ಶೃಂಗೇರಿ ಅವರು ದೊಡ್ಮನೆಯಲ್ಲಿ ಸಾಕಷ್ಟು ಏಳುಬೀಳುಗಳನ್ನು ಕಂಡಿದ್ದಾರೆ. ಆರಂಭದಲ್ಲಿ ಕಾರ್ತಿಕ್ ಅವರಿಂದ ದೂರ ಆದರು. ನಂತರ ವಿನಯ್ ಜೊತೆ ಸೇರಿ ಟ್ರೋಲ್ ಆದರು. ಎಲ್ಲಕ್ಕಿಂತ ಮುಖ್ಯವಾಗಿ ಟಾಸ್ಕ್ ಆಡುವಾಗ ಅವರ ಕಣ್ಣಿಗೆ ಹಾನಿ ಉಂಟಾಯಿತು. ಇದರಿಂದ ಅವರು ಹಿಂಜರಿಯಲಿಲ್ಲ. ಈಗ ಅವರ ಹೆಸರು ಟ್ವಿಟರ್​ನಲ್ಲಿ ಟ್ರೆಂಡ್ ಆಗಿದೆ.

ಸಂಗಿತಾ ಫಿನಾಲೆ ತಲುಪಿದ್ದಾರೆ. ಈ ಸಂದರ್ಭದಲ್ಲಿ ಸಂಗೀತಾ ಅವರು ಹೆಚ್ಚು ಗಮನ ಸೆಳೆಯುತ್ತಿದ್ದಾರೆ. ಅವರು ಬ್ಯಾಕ್ ಟು ಬ್ಯಾಕ್ ಎರಡು ಬಾರಿ ಕ್ಯಾಪ್ಟನ್ ಆಗಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಅವರಿಗೆ ಫ್ಯಾನ್ಸ್​ನಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಇಡೀ ಜರ್ನಿಯನ್ನು ಗಮನಿಸಿ ಸುದೀಪ್ ಅವರು ಸಂಗೀತಾ ಹಾಗೂ ವಿನಯ್​ಗೆ ಕಿಚ್ಚನ ಚಪ್ಪಾಳೆ ನೀಡಿದ್ದಾರೆ. ‘ನೀವಿಬ್ಬರು ಇಲ್ಲದೆ ಇದ್ದರೆ ಬಿಗ್ ಬಾಸ್​ನ ಈ ಜರ್ನಿ ಅಪೂರ್ಣ ಆಗುತ್ತಿತ್ತು’ ಎಂದು ಸುದೀಪ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇದು ಸಂಗೀತಾ ಜರ್ನಿಗೆ ಮತ್ತಷ್ಟು ಬೂಸ್ಟ್ ನೀಡಿದೆ.

ಇದನ್ನೂ ಓದಿ: ಫಿನಾಲೆ ವಾರ ತಲುಪಿದ ವರ್ತೂರು ಸಂತೋಷ್​; ಟ್ರೋಫಿಗಾಗಿ ಸಂಗೀತಾ, ತುಕಾಲಿ ಜತೆ ಪೈಪೋಟಿ

ಹೊರಗಿನಿಂದ ಸಂಗೀತಾ ಅವರನ್ನು ಬೆಂಬಲಿಸೋ ಕಾರ್ಯ ನಡೆಯುತ್ತಿದೆ. ಎಲ್ಲರೂ ಸಂಗೀತಾ ಪರ ಟ್ವಿಟರ್​ನಲ್ಲಿ ಟ್ವೀಟ್ ಮಾಡುತ್ತಿದ್ದಾರೆ. ‘VIJAYIBHAVA SANGEETHA SRINGERI’ ಎಂದು ಟ್ವೀಟ್ ಮಾಡಲಾಗುತ್ತಿದೆ. ಕೆಲವೇ ಗಂಟೆಗಳಲ್ಲಿ ಬರೋಬ್ಬರಿ 2 ಲಕ್ಷ ಟ್ವೀಟ್ ಆಗಿದೆ. ಭಾರತದ ಟ್ರೆಂಡ್​​ನಲ್ಲಿ ಅವರ ಹೆಸರು ಐದನೇ ಸ್ಥಾನದಲ್ಲಿದೆ. ಈ ಮೊದಲು ರೂಪೇಶ್ ಶೆಟ್ಟಿ (ಬಿಗ್ ಬಾಸ್ ಸೀಸನ್ 9ರ ವಿಜೇತ), ಕಾರ್ತಿಕ್ ಮಹೇಶ್ ಹಾಗೂ ಡ್ರೋನ್ ಪ್ರತಾಪ್ ಹೆಸರು ಟಾಪ್ ಸ್ಥಾನದಲ್ಲಿ ಇವೆ. ಈ ಮೂಲಕ ಅವರು ದಾಖಲೆ ಮಾಡಿದ್ದಾರೆ. ಅವರ ಹೆಸರನ್ನು ಸಂಗೀತಾ ಮುರಿಯುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಸಂಗೀತಾ ಶೃಂಗೇರಿ ಪ್ಲಸ್ ಪಾಯಿಂಟ್ಸ್

  1. ಸಂಗೀತಾ ಶೃಂಗೇರಿ ಗ್ರಾಫ್ ಮೊದಲಿನಿಂದಲೂ ಏರುತ್ತಲೇ ಬರುತ್ತಿದೆ. ಇದು ಅನೇಕರಿಗೆ ಇಷ್ಟವಾಗಿದೆ. ಈ ಕಾರಣದಿಂದಲೇ ಅವರ ಅಭಿಮಾನಿ ಬಳಗ ಹಿರಿದಾಗಿದೆ.
  2. ಸಂಗೀತಾ ಶೃಂಗೇರಿ ಅವರು ಎಲ್ಲಿ ಯಾವುದೇ ಮಾತನ್ನು ಹೇಳಿದರೆ ಆ ಮಾತಿಗೆ ಬದ್ಧವಾಗುತ್ತಾರೆ. ಈ ಮೊದಲು ಕಾರ್ತಿಕ್ ಅವರಿಗೆ ಬಕೆಟ್ ಶಬ್ದ ಬಳಕೆ ಮಾಡಿದ್ದರು. ಇದನ್ನು ಅವರು ಖಂಡಿಸಿದ್ದರು. ಆದಾಗ್ಯೂ ಅದಕ್ಕೆ ಸ್ಪಷ್ಟನೆ ನೀಡಿ ತಮ್ಮ ಮಾತಿಗೆ ಸ್ಟ್ಯಾಂಡ್ ಆದರು.
  3. ಸಂಗೀತಾ ಶೃಂಗೇರಿ ಅವರು ವೈಯಕ್ತಿಕ ಆಟ ತೋರಿಸುತ್ತಿದ್ದಾರೆ. ಈ ಕಾರಣಕ್ಕೆ ಅವರು ಅನೇಕರಿಗೆ ಇಷ್ಟ ಆಗುತ್ತಿದ್ದಾರೆ. ಅವರು ಯಾರದ್ದೋ ನೆರಳಾಗಿ ಕಾಣಿಸಿಕೊಳ್ಳಲಿಲ್ಲ.
  4. ಟಾಸ್ಕ್​ ವಿಚಾರ ಬಂದಾಗ ಅನೇಕ ಟಾಸ್ಕ್​ಗಳನ್ನು ಅವರು ಗೆದ್ದಿದ್ದಾರೆ. ಈ ಕಾರಣಕ್ಕೆ ಅವರ ಅಭಿಮಾನಿ ಬಳಗ ಹಿರಿದಾಗುತ್ತಿದೆ.
  5. ಸಂಗೀತಾ ಯಾರಿಗೂ ಅಂಜಿದವರಲ್ಲ. ಎದುರಾಳಿ ಎಷ್ಟೇ ಸ್ಟ್ರಾಂಗ್ ಆಗಿದ್ದರೂ ಅವರನ್ನು ಹೆದರಿಸೋ ಕೆಲಸ ಮಾಡುತ್ತಾರೆ.ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:48 pm, Sun, 21 January 24

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?