ಕಲರ್ಸ್ ಕನ್ನಡ ಧಾರಾವಾಹಿಗೆ ಎಂಟ್ರಿಕೊಟ್ಟ ವಿನಯ್ ಗೌಡ; ಇಲ್ಲಿದೆ ವಿವರ

ಬಿಗ್ ಬಾಸ್​​ಗೆ ಬಂದ ಬಳಿಕ ವಿನಯ್ ಗೌಡ ಅವರು ಮತ್ತಷ್ಟು ಅಭಿಮಾನಿಗಳನ್ನು ಸಂಪಾದಿಸಿದರು. ಅವರ ರೋಷ, ಸಿಟ್ಟು ಅನೇಕರಿಗೆ ಇಷ್ಟ ಆಯಿತು. ಈಗ ಅವರು ‘ಚುಕ್ಕಿತಾರೆ’ ಧಾರಾವಾಹಿಯಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ. ಅವರ ಜೊತೆ ಪತ್ನಿ ಅಕ್ಷತಾ ಗೌಡ ಕೂಡ ಆಗಮಿಸಿದ್ದಾರೆ.  

ಕಲರ್ಸ್ ಕನ್ನಡ ಧಾರಾವಾಹಿಗೆ ಎಂಟ್ರಿಕೊಟ್ಟ ವಿನಯ್ ಗೌಡ; ಇಲ್ಲಿದೆ ವಿವರ
ಅಕ್ಷತಾ-ವಿನಯ್
Follow us
| Updated By: ರಾಜೇಶ್ ದುಗ್ಗುಮನೆ

Updated on:Apr 12, 2024 | 11:45 AM

ವಿನಯ್ ಗೌಡ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ರ (BBK 10) ಮೂಲಕ ದೊಡ್ಡ ಮಟ್ಟದ ಜನಪ್ರಿಯತೆ ಪಡೆದರು. ಅವರು ‘ಆನೆ’ ಎಂದೇ ಫೇಮಸ್ ಆದರು. ಬಿಗ್ ಬಾಸ್ ಮನೆಯಿಂದ ಹೊರ ಬಂದ ಬಳಿಕ ಹಲವು ಆಫರ್​ಗಳು ಅವರಿಗೆ ಬರುತ್ತಿವೆ. ವಿಶೇಷ ಎಂದರೆ ಈಗ ಅವರು ಕಲರ್ಸ್ ಕನ್ನಡ ಧಾರಾವಾಹಿಯಲ್ಲಿ ನಟಿಸಿದ್ದಾರೆ. ಈ ವಿಚಾರ ಅವರ ಅಭಿಮಾನಿಗಳಿಗೆ ಖುಷಿ ನಿಡಿದೆ. ಹಾಗಂತ ವಿನಯ್ ಅವರು ಹೀರೋ ಆಗಿ ಧಾರಾವಾಹಿಯಲ್ಲಿ ನಟಿಸುತ್ತಿಲ್ಲ. ಬದಲಿಗೆ ಅವರದ್ದು ಅತಿಥಿ ಪಾತ್ರ.

ವಿನಯ್ ಗೌಡ ಅವರು ಈ ಮೊದಲು ಧಾರಾವಾಹಿಗಳಲ್ಲಿ ನಟಿಸಿದ್ದರು. ‘ಹರ ಹರ ಮಹದೇವ’ ಧಾರಾವಾಹಿಯಲ್ಲಿ ಈಶ್ವರನ ಪಾತ್ರ ಮಾಡಿ ಅವರು ಗಮನ ಸೆಳೆದಿದ್ದಾರೆ. ಬಿಗ್ ಬಾಸ್​​ಗೆ ಬಂದ ಬಳಿಕ ಅವರು ಮತ್ತಷ್ಟು ಅಭಿಮಾನಿಗಳನ್ನು ಸಂಪಾದಿಸಿದರು. ಅವರ ರೋಷ, ಸಿಟ್ಟು ಅನೇಕರಿಗೆ ಇಷ್ಟ ಆಯಿತು. ಈಗ ಅವರು ‘ಚುಕ್ಕಿತಾರೆ’ ಧಾರಾವಾಹಿಯಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ. ಅವರ ಜೊತೆ ಪತ್ನಿ ಅಕ್ಷತಾ ಗೌಡ ಕೂಡ ಆಗಮಿಸಿದ್ದಾರೆ.

ಶ್ರೀಮಂತ ಹಾಗೂ ಬಡ ಕುಟುಂಬದಲ್ಲಿ ಹುಟ್ಟಿ ಬೆಳೆದ ಎರಡು ಮಕ್ಕಳ ಕಥೆ ‘ಚುಕ್ಕಿ ತಾರೆ’ ಧಾರಾವಾಹಿ. ಬಡ ಕುಟುಂಬದ ಹುಡುಗಿ ಚುಕ್ಕಿಗೆ ಕಾಲಿಲ್ಲ. ಆದರೆ, ಸುಖ ಇದೆ. ತಂದೆ ಅವಳನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಾನೆ. ಶ್ರೀಮಂತ ಕುಟುಂಬದ ಇಬ್ಬನಿ ಮನೆಯಲ್ಲಿ ಸಾಕಷ್ಟು ಐಶ್ವರ್ಯ ಹಾಗೂ ಹಣ ಇದೆ. ಆದರೆ, ಸಂತೋಷ ಇಲ್ಲ. ಈ ಕಥೆಯನ್ನು ತೋರಿಸಲಾಗುತ್ತಿದೆ. ಕಥಾ ನಾಯಕನ ಗೆಳೆಯನ ಪಾತ್ರದಲ್ಲಿ ವಿನಯ್ ಹಾಗೂ ಅವರ ಪತ್ನಿ ಅಕ್ಷತಾ ಎಂಟ್ರಿ ಕೊಟ್ಟಿದ್ದಾರೆ.

ಯುಗಾದಿ ಸಂದರ್ಭದಲ್ಲಿ ಧಾರಾವಾಹಿಗಳಲ್ಲಿ ವಿಶೇಷ ಪಾತ್ರಗಳ ಎಂಟ್ರಿ ಆಗುತ್ತದೆ. ಅದೇ ರೀತಿ ‘ಚುಕ್ಕಿ ತಾರೆ’ ಧಾರಾವಾಹಿಯಲ್ಲಿ ವಿನಯ್ ಗೌಡ ಅವರು ಆಗಮಿಸಿದ್ದಾರೆ. ಅವರು ಬಂದು ಯುಗಾದಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಿದ್ದಾರೆ. ಈ ಎಪಿಸೋಡ್​ಗಳು ಗಮನ ಸೆಳೆಯುತ್ತಿವೆ.

ಇದನ್ನೂ ಓದಿ: ವಿನಯ್ ಗೌಡ ಬರ್ತ್​ಡೇ ಸೆಲೆಬ್ರೇಷನ್​ನಲ್ಲಿ ಆನೆಯೇ ಹೈಲೈಟ್; ಸಂಗೀತಾ ಗೈರು ಹಾಜರಿ

ವಿನಯ್ ಗೌಡ ಅವರು ಬಿಗ್ ಬಾಸ್​ಗೆ ಬಂದಾಗ ಸಖತ್ ಅಗ್ರೆಸ್​ ಆಗಿ ಕಾಣಿಸಿಕೊಂಡಿದ್ದರು. ಅವರು ಮಾಡಿದ ಪದ ಬಳಕೆ ಸಾಕಷ್ಟು ಟೀಕೆಗಳನ್ನು ಎದುರಿಸಿತ್ತು. ಅವರು ಫಿನಾಲೆಗೆ ಬಂದು ಕಪ್ ಗೆಲ್ಲುತ್ತಾರೆ ಎಂದು ಎಲ್ಲರೂ ಭಾವಿಸಿದ್ದರು. ಅವರು ಫಿನಾಲೆಗೆ ಏನೋ ಬಂದರು. ಆದರೆ, ಕಪ್ ಗೆಲ್ಲೋಕೆ ಅವರ ಬಳಿ ಸಾಧ್ಯವಾಗಿಲ್ಲ. ಇದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿತ್ತು. ಸದ್ಯ ಅವರು ಸೋಶಿಯಲ್ ಮೀಡಿಯಾದಲ್ಲಿ ಹಲವು ಸ್ಟೋರ್​ಗಳ ಪ್ರಚಾರ ಮಾಡವುದರಲ್ಲಿ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:44 am, Fri, 12 April 24

ತಾಜಾ ಸುದ್ದಿ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
ಯುವತಿಯರ ಮುಂದೆ ಬಾಡಿ ಪ್ರದರ್ಶಿಸುತ್ತಿದ್ದ ಯುವಕನಿಗೆ ಪಾಠ ಕಲಿಸಿದ  ಪೊಲೀಸರು
ಯುವತಿಯರ ಮುಂದೆ ಬಾಡಿ ಪ್ರದರ್ಶಿಸುತ್ತಿದ್ದ ಯುವಕನಿಗೆ ಪಾಠ ಕಲಿಸಿದ  ಪೊಲೀಸರು
ಕೇರಳದ ಕಲಾವಿದನ ಕೈಯಲ್ಲಿ ಅರಳಿದ ಪ್ರಧಾನಿ ಮೋದಿ ಭವ್ಯ ಪ್ರತಿಮೆ
ಕೇರಳದ ಕಲಾವಿದನ ಕೈಯಲ್ಲಿ ಅರಳಿದ ಪ್ರಧಾನಿ ಮೋದಿ ಭವ್ಯ ಪ್ರತಿಮೆ
ದೇವಸ್ಥಾನದಲ್ಲಿ ಶಟಗೋಪ ತಲೆ ಮೇಲೆ ಇಡುವುದರ ಮಹತ್ವ ಏನು? ಈ ವಿಡಿಯೋ ನೋಡಿ
ದೇವಸ್ಥಾನದಲ್ಲಿ ಶಟಗೋಪ ತಲೆ ಮೇಲೆ ಇಡುವುದರ ಮಹತ್ವ ಏನು? ಈ ವಿಡಿಯೋ ನೋಡಿ
ಈ ರಾಶಿಯವರು ಇಂದು ಪುಣ್ಯಸ್ಥಳದ ದರ್ಶ‌ನಕ್ಕೆಂದು ಪ್ರಯಾಣ ಮಾಡುವರು
ಈ ರಾಶಿಯವರು ಇಂದು ಪುಣ್ಯಸ್ಥಳದ ದರ್ಶ‌ನಕ್ಕೆಂದು ಪ್ರಯಾಣ ಮಾಡುವರು
ಸೋನಲ್​-ತರುಣ್​ ಸುಧೀರ್​ ಮದುವೆ? ಮೊದಲ ಬಾರಿ ಮಾತನಾಡಿದ ಮಾಲತಿ ಸುಧೀರ್​
ಸೋನಲ್​-ತರುಣ್​ ಸುಧೀರ್​ ಮದುವೆ? ಮೊದಲ ಬಾರಿ ಮಾತನಾಡಿದ ಮಾಲತಿ ಸುಧೀರ್​
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ