AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲರ್ಸ್ ಕನ್ನಡ ಧಾರಾವಾಹಿಗೆ ಎಂಟ್ರಿಕೊಟ್ಟ ವಿನಯ್ ಗೌಡ; ಇಲ್ಲಿದೆ ವಿವರ

ಬಿಗ್ ಬಾಸ್​​ಗೆ ಬಂದ ಬಳಿಕ ವಿನಯ್ ಗೌಡ ಅವರು ಮತ್ತಷ್ಟು ಅಭಿಮಾನಿಗಳನ್ನು ಸಂಪಾದಿಸಿದರು. ಅವರ ರೋಷ, ಸಿಟ್ಟು ಅನೇಕರಿಗೆ ಇಷ್ಟ ಆಯಿತು. ಈಗ ಅವರು ‘ಚುಕ್ಕಿತಾರೆ’ ಧಾರಾವಾಹಿಯಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ. ಅವರ ಜೊತೆ ಪತ್ನಿ ಅಕ್ಷತಾ ಗೌಡ ಕೂಡ ಆಗಮಿಸಿದ್ದಾರೆ.  

ಕಲರ್ಸ್ ಕನ್ನಡ ಧಾರಾವಾಹಿಗೆ ಎಂಟ್ರಿಕೊಟ್ಟ ವಿನಯ್ ಗೌಡ; ಇಲ್ಲಿದೆ ವಿವರ
ಅಕ್ಷತಾ-ವಿನಯ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Apr 12, 2024 | 11:45 AM

Share

ವಿನಯ್ ಗೌಡ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ರ (BBK 10) ಮೂಲಕ ದೊಡ್ಡ ಮಟ್ಟದ ಜನಪ್ರಿಯತೆ ಪಡೆದರು. ಅವರು ‘ಆನೆ’ ಎಂದೇ ಫೇಮಸ್ ಆದರು. ಬಿಗ್ ಬಾಸ್ ಮನೆಯಿಂದ ಹೊರ ಬಂದ ಬಳಿಕ ಹಲವು ಆಫರ್​ಗಳು ಅವರಿಗೆ ಬರುತ್ತಿವೆ. ವಿಶೇಷ ಎಂದರೆ ಈಗ ಅವರು ಕಲರ್ಸ್ ಕನ್ನಡ ಧಾರಾವಾಹಿಯಲ್ಲಿ ನಟಿಸಿದ್ದಾರೆ. ಈ ವಿಚಾರ ಅವರ ಅಭಿಮಾನಿಗಳಿಗೆ ಖುಷಿ ನಿಡಿದೆ. ಹಾಗಂತ ವಿನಯ್ ಅವರು ಹೀರೋ ಆಗಿ ಧಾರಾವಾಹಿಯಲ್ಲಿ ನಟಿಸುತ್ತಿಲ್ಲ. ಬದಲಿಗೆ ಅವರದ್ದು ಅತಿಥಿ ಪಾತ್ರ.

ವಿನಯ್ ಗೌಡ ಅವರು ಈ ಮೊದಲು ಧಾರಾವಾಹಿಗಳಲ್ಲಿ ನಟಿಸಿದ್ದರು. ‘ಹರ ಹರ ಮಹದೇವ’ ಧಾರಾವಾಹಿಯಲ್ಲಿ ಈಶ್ವರನ ಪಾತ್ರ ಮಾಡಿ ಅವರು ಗಮನ ಸೆಳೆದಿದ್ದಾರೆ. ಬಿಗ್ ಬಾಸ್​​ಗೆ ಬಂದ ಬಳಿಕ ಅವರು ಮತ್ತಷ್ಟು ಅಭಿಮಾನಿಗಳನ್ನು ಸಂಪಾದಿಸಿದರು. ಅವರ ರೋಷ, ಸಿಟ್ಟು ಅನೇಕರಿಗೆ ಇಷ್ಟ ಆಯಿತು. ಈಗ ಅವರು ‘ಚುಕ್ಕಿತಾರೆ’ ಧಾರಾವಾಹಿಯಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ. ಅವರ ಜೊತೆ ಪತ್ನಿ ಅಕ್ಷತಾ ಗೌಡ ಕೂಡ ಆಗಮಿಸಿದ್ದಾರೆ.

ಶ್ರೀಮಂತ ಹಾಗೂ ಬಡ ಕುಟುಂಬದಲ್ಲಿ ಹುಟ್ಟಿ ಬೆಳೆದ ಎರಡು ಮಕ್ಕಳ ಕಥೆ ‘ಚುಕ್ಕಿ ತಾರೆ’ ಧಾರಾವಾಹಿ. ಬಡ ಕುಟುಂಬದ ಹುಡುಗಿ ಚುಕ್ಕಿಗೆ ಕಾಲಿಲ್ಲ. ಆದರೆ, ಸುಖ ಇದೆ. ತಂದೆ ಅವಳನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಾನೆ. ಶ್ರೀಮಂತ ಕುಟುಂಬದ ಇಬ್ಬನಿ ಮನೆಯಲ್ಲಿ ಸಾಕಷ್ಟು ಐಶ್ವರ್ಯ ಹಾಗೂ ಹಣ ಇದೆ. ಆದರೆ, ಸಂತೋಷ ಇಲ್ಲ. ಈ ಕಥೆಯನ್ನು ತೋರಿಸಲಾಗುತ್ತಿದೆ. ಕಥಾ ನಾಯಕನ ಗೆಳೆಯನ ಪಾತ್ರದಲ್ಲಿ ವಿನಯ್ ಹಾಗೂ ಅವರ ಪತ್ನಿ ಅಕ್ಷತಾ ಎಂಟ್ರಿ ಕೊಟ್ಟಿದ್ದಾರೆ.

ಯುಗಾದಿ ಸಂದರ್ಭದಲ್ಲಿ ಧಾರಾವಾಹಿಗಳಲ್ಲಿ ವಿಶೇಷ ಪಾತ್ರಗಳ ಎಂಟ್ರಿ ಆಗುತ್ತದೆ. ಅದೇ ರೀತಿ ‘ಚುಕ್ಕಿ ತಾರೆ’ ಧಾರಾವಾಹಿಯಲ್ಲಿ ವಿನಯ್ ಗೌಡ ಅವರು ಆಗಮಿಸಿದ್ದಾರೆ. ಅವರು ಬಂದು ಯುಗಾದಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಿದ್ದಾರೆ. ಈ ಎಪಿಸೋಡ್​ಗಳು ಗಮನ ಸೆಳೆಯುತ್ತಿವೆ.

ಇದನ್ನೂ ಓದಿ: ವಿನಯ್ ಗೌಡ ಬರ್ತ್​ಡೇ ಸೆಲೆಬ್ರೇಷನ್​ನಲ್ಲಿ ಆನೆಯೇ ಹೈಲೈಟ್; ಸಂಗೀತಾ ಗೈರು ಹಾಜರಿ

ವಿನಯ್ ಗೌಡ ಅವರು ಬಿಗ್ ಬಾಸ್​ಗೆ ಬಂದಾಗ ಸಖತ್ ಅಗ್ರೆಸ್​ ಆಗಿ ಕಾಣಿಸಿಕೊಂಡಿದ್ದರು. ಅವರು ಮಾಡಿದ ಪದ ಬಳಕೆ ಸಾಕಷ್ಟು ಟೀಕೆಗಳನ್ನು ಎದುರಿಸಿತ್ತು. ಅವರು ಫಿನಾಲೆಗೆ ಬಂದು ಕಪ್ ಗೆಲ್ಲುತ್ತಾರೆ ಎಂದು ಎಲ್ಲರೂ ಭಾವಿಸಿದ್ದರು. ಅವರು ಫಿನಾಲೆಗೆ ಏನೋ ಬಂದರು. ಆದರೆ, ಕಪ್ ಗೆಲ್ಲೋಕೆ ಅವರ ಬಳಿ ಸಾಧ್ಯವಾಗಿಲ್ಲ. ಇದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿತ್ತು. ಸದ್ಯ ಅವರು ಸೋಶಿಯಲ್ ಮೀಡಿಯಾದಲ್ಲಿ ಹಲವು ಸ್ಟೋರ್​ಗಳ ಪ್ರಚಾರ ಮಾಡವುದರಲ್ಲಿ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:44 am, Fri, 12 April 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್