AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಾಲ ಹಿಡ್ಕೊಂಡು ಓಡಾಡೋದಲ್ಲ’; ಹಳೆಯ ಚಾಳಿ ಮುಂದುವರಿಸಿದ ವಿನಯ್ ಆ್ಯಂಡ್ ಗ್ಯಾಂಗ್​ಗೆ ತನಿಷಾ ಎಚ್ಚರಿಕೆ

ನಮ್ರತಾಗೆ ಅತಿ ಹೆಚ್ಚು ಹಾಗೂ ಸಂಗೀತಾ-ತನಿಷಾಗೆ ಅತಿ ಕಡಿಮೆ ರೇಟಿಂಗ್ ನೀಡಿದ್ದಾರೆ ಸ್ನೇಹಿತ್. ಇದನ್ನು ತನಿಷಾ ಹಾಗೂ ಸಂಗೀತಾ ಪ್ರಶ್ನಿಸಿದ್ದಾರೆ. ‘ನಾವು ಫ್ಲರ್ಟ್ ಮಾಡೋಕೆ ಅವಕಾಶ ನೀಡಿಲ್ಲ, ಅದಕ್ಕೆ ನಿಮ್ಮ ಪ್ರೀತಿ ಪಾತ್ರರಾಗಿಲ್ಲ’ ಎಂದು ಸಂಗೀತಾ ಓಪನ್ ಆಗಿಯೇ ಹೇಳಿದರು. ‘

‘ಬಾಲ ಹಿಡ್ಕೊಂಡು ಓಡಾಡೋದಲ್ಲ’; ಹಳೆಯ ಚಾಳಿ ಮುಂದುವರಿಸಿದ ವಿನಯ್ ಆ್ಯಂಡ್ ಗ್ಯಾಂಗ್​ಗೆ ತನಿಷಾ ಎಚ್ಚರಿಕೆ
ವಿನಯ್-ತನಿಷಾ
ರಾಜೇಶ್ ದುಗ್ಗುಮನೆ
|

Updated on:Nov 07, 2023 | 8:18 AM

Share

ಕಳೆದ ವಾರ ವಿನಯ್ ಅವರು ಒಂದು ಗ್ಯಾಂಗ್ ಮಾಡಿಕೊಂಡಿದ್ದರು. ಈ ಗ್ಯಾಂಗ್​ನಲ್ಲಿ ನಮ್ರತಾ (Namratha Gowda), ಸಂತೋಷ್ ಸೇರಿ ಅನೇಕರು ಇದ್ದರು. ‘ಇದೊಂದು ಹೊಲಸು ಗುಂಪುಗಾರಿಕೆ’ ಎಂದು ಸುದೀಪ್ ಹೇಳಿದ್ದರು. ಇವರು ಎಲ್ಲರೂ ಬದಲಾಗಬಹುದು ಎಂದು ಭಾವಿಸಿದ್ದರು. ಆದರೆ, ಆ ರೀತಿ ಆಗೋ ರೀತಿ ಕಾಣುತ್ತಿಲ್ಲ. ವಿನಯ್ ಗುಂಪುಗಾರಿಕೆ ಮುಂದುವರಿಸಿದ್ದಾರೆ. ಈ ವಿಚಾರವನ್ನು ತನಿಷಾ ತೆಗೆದುಕೊಂಡಿದ್ದಾರೆ. ವಿನಯ್ ಆ್ಯಂಡ್ ಗ್ಯಾಂಗ್​ಗೆ ಎಚ್ಚರಿಕೆ ಕೊಟ್ಟಿದ್ದಾರೆ.

ಬಿಗ್ ಬಾಸ್​ನಲ್ಲಿ ಈ ವಾರ ಒಂದು ಚಟುವಟಿಕೆ ನೀಡಲಾಗಿತ್ತು. ಬೋರ್ಡ್ ಮೇಲೆ ಒಂದೊಂದು ಹೆಸರು ಇರುತ್ತದೆ. ಆ ಹೆಸರು ಲಕೋಟೆಯಲ್ಲಿ ಬರೆದಿರುತ್ತದೆ. ಪ್ರತಿ ಸ್ಪರ್ಧಿ ಬಂದು ಲಕೋಟೆ ಎತ್ತಬೇಕು. ಅಲ್ಲಿ ಬಂದಿರುವ ಹೆಸರನ್ನು ಓದಿಕೊಂಡು ಅತಿ ಹೆಚ್ಚು ಹಾಗೂ ಅತೀ ಕಡಿಮೆ ಎಂದು ಸ್ಪರ್ಧಿಗಳನ್ನು ನಿಲ್ಲಿಸಬೇಕು. ಸ್ನೇಹಿತ್​ಗೆ ಪ್ರೀತಿ ಪಾತ್ರರು ಎನ್ನುವ ಲಕೋಟೆ ಬಂದಿತ್ತು.

ನಮ್ರತಾಗೆ ಅತಿ ಹೆಚ್ಚು ಹಾಗೂ ಸಂಗೀತಾ-ತನಿಷಾಗೆ ಅತಿ ಕಡಿಮೆ ರೇಟಿಂಗ್ ನೀಡಿದ್ದಾರೆ ಸ್ನೇಹಿತ್. ಇದನ್ನು ತನಿಷಾ ಹಾಗೂ ಸಂಗೀತಾ ಪ್ರಶ್ನಿಸಿದ್ದಾರೆ. ‘ನಾವು ಫ್ಲರ್ಟ್ ಮಾಡೋಕೆ ಅವಕಾಶ ನೀಡಿಲ್ಲ, ಅದಕ್ಕೆ ನಿಮ್ಮ ಪ್ರೀತಿ ಪಾತ್ರರಾಗಿಲ್ಲ’ ಎಂದು ಸಂಗೀತಾ ಓಪನ್ ಆಗಿಯೇ ಹೇಳಿದರು. ‘ನೀವು ಕ್ಲಾಸ್ ಮಾನಿಟರ್ ತರ ಆಡ್ತೀರಾ’ ಎಂದು ಸ್ನೇಹಿತ್ ಹೇಳಿದರು. ಆದರೆ, ಇದನ್ನು ತನಿಷಾ ಹಾಗೂ ಸಂಗೀತಾ ಒಪ್ಪಲಿಲ್ಲ.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಪ್ರತಾಪ್​ಗಿಲ್ಲ ಧೈರ್ಯ? ಎಲ್ಲರದ್ದೂ ಇದೇ ಅಭಿಪ್ರಾಯ

ಇಲ್ಲಿ ಉದಾಹರಣೆ ಕೊಡುವಾಗ ತನಿಷಾ ವಿನಯ್ ಹೆಸರು ತೆಗೆದುಕೊಂಡರು. ಆಗ ವಿನಯ್ ‘ಶ್​​.. ಶ್​’ ಎಂದು ಬಾಯಮೇಲೆ ಬೆರಳಿಟ್ಟರು. ‘ಏನು’ ಎಂದು ತನಿಷಾ ಜೋರಾಗಿಯೇ ಕೇಳಿದರು. ಇದಕ್ಕೆ ವಿನಯ್, ‘ನಾನು ಹುಳದ ಜೊತೆ ಮಾತಾಡ್ತಾ ಇದೀನಿ’ ಎಂದರು. ಆಗ ವಿನಯ್ ಆ್ಯಂಡ್ ಗ್ಯಾಂಗ್ ಜೋರಾಗಿ ನಕ್ಕಿತು. ‘ಅತಿಯಾಗಿ ಆಟ ಆಡಿದ್ರೆ ಏನಾಗುತ್ತದೆ ಅಂತ ಎಲ್ಲರಿಗೂ ಗೊತ್ತು. ಎಕ್ಸ್​ಪ್ರೆಷನ್ ಕೊಡೋರು ಒಂದಿನ ಹಳ್ಳಕ್ಕೆ ಬೀಳ್ತೀರಲ್ಲ ಆಗ ಗೊತ್ತಾಗುತ್ತದೆ. ಆನೆ ಬಾಲ ಹಿಡ್ಕೊಂಡು ಓಡಾಡೋದಲ್ಲ. ಮಾತಾಡೋಕು ತಾಕತ್ ಬೇಕು’ ಎಂದು ತನಿಷಾ ಹೇಳಿದ್ದಾರೆ.

ಕಲರ್ಸ್ ಕನ್ನಡ ವಾಹಿನಿಯಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣುತ್ತದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ 24 ಗಂಟೆ ಲೈವ್ ಕೂಡ ವಿಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:15 am, Tue, 7 November 23

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!