Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಾಲ ಹಿಡ್ಕೊಂಡು ಓಡಾಡೋದಲ್ಲ’; ಹಳೆಯ ಚಾಳಿ ಮುಂದುವರಿಸಿದ ವಿನಯ್ ಆ್ಯಂಡ್ ಗ್ಯಾಂಗ್​ಗೆ ತನಿಷಾ ಎಚ್ಚರಿಕೆ

ನಮ್ರತಾಗೆ ಅತಿ ಹೆಚ್ಚು ಹಾಗೂ ಸಂಗೀತಾ-ತನಿಷಾಗೆ ಅತಿ ಕಡಿಮೆ ರೇಟಿಂಗ್ ನೀಡಿದ್ದಾರೆ ಸ್ನೇಹಿತ್. ಇದನ್ನು ತನಿಷಾ ಹಾಗೂ ಸಂಗೀತಾ ಪ್ರಶ್ನಿಸಿದ್ದಾರೆ. ‘ನಾವು ಫ್ಲರ್ಟ್ ಮಾಡೋಕೆ ಅವಕಾಶ ನೀಡಿಲ್ಲ, ಅದಕ್ಕೆ ನಿಮ್ಮ ಪ್ರೀತಿ ಪಾತ್ರರಾಗಿಲ್ಲ’ ಎಂದು ಸಂಗೀತಾ ಓಪನ್ ಆಗಿಯೇ ಹೇಳಿದರು. ‘

‘ಬಾಲ ಹಿಡ್ಕೊಂಡು ಓಡಾಡೋದಲ್ಲ’; ಹಳೆಯ ಚಾಳಿ ಮುಂದುವರಿಸಿದ ವಿನಯ್ ಆ್ಯಂಡ್ ಗ್ಯಾಂಗ್​ಗೆ ತನಿಷಾ ಎಚ್ಚರಿಕೆ
ವಿನಯ್-ತನಿಷಾ
Follow us
ರಾಜೇಶ್ ದುಗ್ಗುಮನೆ
|

Updated on:Nov 07, 2023 | 8:18 AM

ಕಳೆದ ವಾರ ವಿನಯ್ ಅವರು ಒಂದು ಗ್ಯಾಂಗ್ ಮಾಡಿಕೊಂಡಿದ್ದರು. ಈ ಗ್ಯಾಂಗ್​ನಲ್ಲಿ ನಮ್ರತಾ (Namratha Gowda), ಸಂತೋಷ್ ಸೇರಿ ಅನೇಕರು ಇದ್ದರು. ‘ಇದೊಂದು ಹೊಲಸು ಗುಂಪುಗಾರಿಕೆ’ ಎಂದು ಸುದೀಪ್ ಹೇಳಿದ್ದರು. ಇವರು ಎಲ್ಲರೂ ಬದಲಾಗಬಹುದು ಎಂದು ಭಾವಿಸಿದ್ದರು. ಆದರೆ, ಆ ರೀತಿ ಆಗೋ ರೀತಿ ಕಾಣುತ್ತಿಲ್ಲ. ವಿನಯ್ ಗುಂಪುಗಾರಿಕೆ ಮುಂದುವರಿಸಿದ್ದಾರೆ. ಈ ವಿಚಾರವನ್ನು ತನಿಷಾ ತೆಗೆದುಕೊಂಡಿದ್ದಾರೆ. ವಿನಯ್ ಆ್ಯಂಡ್ ಗ್ಯಾಂಗ್​ಗೆ ಎಚ್ಚರಿಕೆ ಕೊಟ್ಟಿದ್ದಾರೆ.

ಬಿಗ್ ಬಾಸ್​ನಲ್ಲಿ ಈ ವಾರ ಒಂದು ಚಟುವಟಿಕೆ ನೀಡಲಾಗಿತ್ತು. ಬೋರ್ಡ್ ಮೇಲೆ ಒಂದೊಂದು ಹೆಸರು ಇರುತ್ತದೆ. ಆ ಹೆಸರು ಲಕೋಟೆಯಲ್ಲಿ ಬರೆದಿರುತ್ತದೆ. ಪ್ರತಿ ಸ್ಪರ್ಧಿ ಬಂದು ಲಕೋಟೆ ಎತ್ತಬೇಕು. ಅಲ್ಲಿ ಬಂದಿರುವ ಹೆಸರನ್ನು ಓದಿಕೊಂಡು ಅತಿ ಹೆಚ್ಚು ಹಾಗೂ ಅತೀ ಕಡಿಮೆ ಎಂದು ಸ್ಪರ್ಧಿಗಳನ್ನು ನಿಲ್ಲಿಸಬೇಕು. ಸ್ನೇಹಿತ್​ಗೆ ಪ್ರೀತಿ ಪಾತ್ರರು ಎನ್ನುವ ಲಕೋಟೆ ಬಂದಿತ್ತು.

ನಮ್ರತಾಗೆ ಅತಿ ಹೆಚ್ಚು ಹಾಗೂ ಸಂಗೀತಾ-ತನಿಷಾಗೆ ಅತಿ ಕಡಿಮೆ ರೇಟಿಂಗ್ ನೀಡಿದ್ದಾರೆ ಸ್ನೇಹಿತ್. ಇದನ್ನು ತನಿಷಾ ಹಾಗೂ ಸಂಗೀತಾ ಪ್ರಶ್ನಿಸಿದ್ದಾರೆ. ‘ನಾವು ಫ್ಲರ್ಟ್ ಮಾಡೋಕೆ ಅವಕಾಶ ನೀಡಿಲ್ಲ, ಅದಕ್ಕೆ ನಿಮ್ಮ ಪ್ರೀತಿ ಪಾತ್ರರಾಗಿಲ್ಲ’ ಎಂದು ಸಂಗೀತಾ ಓಪನ್ ಆಗಿಯೇ ಹೇಳಿದರು. ‘ನೀವು ಕ್ಲಾಸ್ ಮಾನಿಟರ್ ತರ ಆಡ್ತೀರಾ’ ಎಂದು ಸ್ನೇಹಿತ್ ಹೇಳಿದರು. ಆದರೆ, ಇದನ್ನು ತನಿಷಾ ಹಾಗೂ ಸಂಗೀತಾ ಒಪ್ಪಲಿಲ್ಲ.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಪ್ರತಾಪ್​ಗಿಲ್ಲ ಧೈರ್ಯ? ಎಲ್ಲರದ್ದೂ ಇದೇ ಅಭಿಪ್ರಾಯ

ಇಲ್ಲಿ ಉದಾಹರಣೆ ಕೊಡುವಾಗ ತನಿಷಾ ವಿನಯ್ ಹೆಸರು ತೆಗೆದುಕೊಂಡರು. ಆಗ ವಿನಯ್ ‘ಶ್​​.. ಶ್​’ ಎಂದು ಬಾಯಮೇಲೆ ಬೆರಳಿಟ್ಟರು. ‘ಏನು’ ಎಂದು ತನಿಷಾ ಜೋರಾಗಿಯೇ ಕೇಳಿದರು. ಇದಕ್ಕೆ ವಿನಯ್, ‘ನಾನು ಹುಳದ ಜೊತೆ ಮಾತಾಡ್ತಾ ಇದೀನಿ’ ಎಂದರು. ಆಗ ವಿನಯ್ ಆ್ಯಂಡ್ ಗ್ಯಾಂಗ್ ಜೋರಾಗಿ ನಕ್ಕಿತು. ‘ಅತಿಯಾಗಿ ಆಟ ಆಡಿದ್ರೆ ಏನಾಗುತ್ತದೆ ಅಂತ ಎಲ್ಲರಿಗೂ ಗೊತ್ತು. ಎಕ್ಸ್​ಪ್ರೆಷನ್ ಕೊಡೋರು ಒಂದಿನ ಹಳ್ಳಕ್ಕೆ ಬೀಳ್ತೀರಲ್ಲ ಆಗ ಗೊತ್ತಾಗುತ್ತದೆ. ಆನೆ ಬಾಲ ಹಿಡ್ಕೊಂಡು ಓಡಾಡೋದಲ್ಲ. ಮಾತಾಡೋಕು ತಾಕತ್ ಬೇಕು’ ಎಂದು ತನಿಷಾ ಹೇಳಿದ್ದಾರೆ.

ಕಲರ್ಸ್ ಕನ್ನಡ ವಾಹಿನಿಯಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣುತ್ತದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ 24 ಗಂಟೆ ಲೈವ್ ಕೂಡ ವಿಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:15 am, Tue, 7 November 23

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..