AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವೈದ್ಯರ ಸಲಹೆ ಮೇರೆಗೆ ವಿನಯ್ ಆಡುವಂತಿಲ್ಲ’; ಗಾಯಗೊಂಡಿತು ಆನೆ

ಟಾಸ್ಕ್​ನಲ್ಲಿ ವಿನಯ್ ಅವರು ಗಾಯಗೊಂಡಿದ್ದಾರೆ. ಅವರ ಬೆರಳಿಗೆ ತೀವ್ರವಾಗಿ ಗಾಯ ಆಗಿದೆ. ಕಾರ್ತಿಕ್ ಕೂಡ ಗಾಯಗೊಂಡಿದ್ದಾರೆ. ಅವರಿಗೆ ಬೆನ್ನು ನೋವು ಕಾಣಿಸಿಕೊಂಡಿದೆ. ಹೀಗಾಗಿ ಮಲಗಿ ಅವರು ರೆಸ್ಟ್ ಮಾಡುತ್ತಿದ್ದಾರೆ.

‘ವೈದ್ಯರ ಸಲಹೆ ಮೇರೆಗೆ ವಿನಯ್ ಆಡುವಂತಿಲ್ಲ’; ಗಾಯಗೊಂಡಿತು ಆನೆ
ವಿನಯ್
ರಾಜೇಶ್ ದುಗ್ಗುಮನೆ
|

Updated on:Dec 21, 2023 | 8:08 AM

Share

ಬಿಗ್​ ಬಾಸ್​ನಲ್ಲಿ (Bigg Boss) ಗಾಯಗಳು ಆಗೋದು ಸಾಮಾನ್ಯ. ಈ ಮೊದಲು ಗಾಯಗೊಂಡು ಮನೆಯಿಂದ ಸ್ಪರ್ಧಿಗಳು ಹೊರಗೆ ಹೋದ ಉದಾಹರಣೆಯೂ ಇದೆ. ಈ ಬಾರಿಯೂ ಹಾಗೆಯೇ ಆಗಿದೆ. ವಿನಯ್ ಗೌಡ (Vinay Gowda) ಬೆರಳಿಗೆ ಏಟಾಗಿದೆ. ಕಾರ್ತಿಕ್ ಗೌಡ ಅವರಿಗೆ ಬೆನ್ನು ನೋವು ಕಾಣಿಸಿಕೊಂಡಿದೆ. ಇದರಿಂದ ಇಬ್ಬರೂ ಆಟ ಆಡುವ ಪರಿಸ್ಥಿತಿಯಲ್ಲಿ ಇಲ್ಲ. ಹೀಗಾಗಿ ವಿನಯ್, ಕಾರ್ತಿಕ್ ಅವರು ಒಂದು ಗೇಮ್​ನಿಂದಲೇ ಹೊರಗೆ ಇರೋ ಪರಿಸ್ಥಿತಿ ಬಂದೊದಗಿದೆ.

ವಿನಯ್ ಗೌಡ ಅವರು ಸದಾ ಅಗ್ರೆಸ್ಸಿವ್ ಆಗಿ ಆಡಲು ಆದ್ಯತೆ ನೀಡುತ್ತಾರೆ. ಈ ಬಾರಿಯೂ ಹಾಗೆಯೇ ಆಗಿದೆ. ‘ಕಲೆ ಒಳ್ಳೆಯದಲ್ಲ’ ಎನ್ನುವ ಟಾಸ್ಕ್ ನೀಡಲಾಗಿತ್ತು. ಒಂದಷ್ಟು ಬಟ್ಟೆ ನೀಡಲಾಗುತ್ತದೆ. ಜೊತೆಗೆ ಕಲರ್ ಕೂಡ ನೀಡಲಾಗುತ್ತದೆ. ಎದುರಾಳಿಗಳು ಬಟ್ಟೆಯನ್ನು ಕಲರ್ ಮಾಡದಂತೆ ನೋಡಿಕೊಳ್ಳಬೇಕು. ಈ ಟಾಸ್ಕ್​ನಲ್ಲಿ ವಿನಯ್ ಅವರು ಗಾಯಗೊಂಡಿದ್ದಾರೆ. ಅವರ ಬೆರಳಿಗೆ ತೀವ್ರವಾಗಿ ಗಾಯ ಆಗಿದೆ. ಈ ಕಾರಣದಿಂದ ಅವರು ಗೇಮ್​ನಿಂದ ಹೊರಗೆ ಇರುವ ಪರಿಸ್ಥಿತಿ ಬಂದೊದಗಿದೆ. ‘ವೈದ್ಯರ ಸಲಹೆಯಂತೆ ವಿನಯ್ ಗೇಮ್ ಆಡುವಂತಿಲ್ಲ’ ಎಂದು ಬಿಗ್ ಬಾಸ್ ಅನೌನ್ಸ್ ಮಾಡಿದ್ದಾರೆ.

ಕಾರ್ತಿಕ್ ಕೂಡ ಗಾಯಗೊಂಡಿದ್ದಾರೆ. ಅವರಿಗೆ ಬೆನ್ನು ನೋವು ಕಾಣಿಸಿಕೊಂಡಿದೆ. ಹೀಗಾಗಿ ಮಲಗಿ ಅವರು ರೆಸ್ಟ್ ಮಾಡುತ್ತಿದ್ದಾರೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಡಿಸೆಂಬರ್ 20ರಂದು ಈ ಎಪಿಸೋಡ್​ ಪ್ರಸಾರ ಕಂಡಿದೆ. ವಿನಯ್ ಹಾಗೂ ಕಾರ್ತಿಕ್ ಬೇಗ ಗುಣಮುಖರಾಗಲಿ ಎಂದು ಫ್ಯಾನ್ಸ್ ಕೋರಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ‘ಜಿಂಕೆ ರೊಚ್ಚಿಗೆದ್ದರೆ ಆಗೋದು ಸಿಂಹನೇ’; ವಿನಯ್, ಅವಿನಾಶ್​ನಿಂದ ರಣರಂಗವಾಯಿತು ಬಣ್ಣದಾಟ

ವಿನಯ್ ಅಗ್ರೆಸ್ ಆಗಿದ್ದರಿಂದ ಗೇಮ್ ರದ್ದಾದ ಉದಾಹರಣೆ ಇತ್ತು. ಹೀಗಾಗಿ ತುಕಾಲಿ ಸಂತೋಷ್ ಅವರು ವಿನಯ್​ಗೆ ಈ ವಿಚಾರದಲ್ಲಿ ಮೊದಲೇ ಎಚ್ಚರಿಕೆ ನೀಡಿದ್ದರು. ‘ದಯವಿಟ್ಟು ಅಗ್ರೆಸ್ ಆಗಿ ಆಡಿ ಗೇಮ್​ನ ಹಾಳು ಮಾಡಬೇಡಿ’ ಎಂದು ಮೊದಲೇ ಕೋರಿದ್ದರು. ಆದಾಗ್ಯೂ ವಿನಯ್ ಅಗ್ರೆಸ್ಸಿವ್ ಆಗಿ ನಡೆದುಕೊಂಡಿದ್ದಾರೆ. ಇದರಿಂದ ಗಾಯ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:07 am, Thu, 21 December 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ