AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವೈದ್ಯರ ಸಲಹೆ ಮೇರೆಗೆ ವಿನಯ್ ಆಡುವಂತಿಲ್ಲ’; ಗಾಯಗೊಂಡಿತು ಆನೆ

ಟಾಸ್ಕ್​ನಲ್ಲಿ ವಿನಯ್ ಅವರು ಗಾಯಗೊಂಡಿದ್ದಾರೆ. ಅವರ ಬೆರಳಿಗೆ ತೀವ್ರವಾಗಿ ಗಾಯ ಆಗಿದೆ. ಕಾರ್ತಿಕ್ ಕೂಡ ಗಾಯಗೊಂಡಿದ್ದಾರೆ. ಅವರಿಗೆ ಬೆನ್ನು ನೋವು ಕಾಣಿಸಿಕೊಂಡಿದೆ. ಹೀಗಾಗಿ ಮಲಗಿ ಅವರು ರೆಸ್ಟ್ ಮಾಡುತ್ತಿದ್ದಾರೆ.

‘ವೈದ್ಯರ ಸಲಹೆ ಮೇರೆಗೆ ವಿನಯ್ ಆಡುವಂತಿಲ್ಲ’; ಗಾಯಗೊಂಡಿತು ಆನೆ
ವಿನಯ್
ರಾಜೇಶ್ ದುಗ್ಗುಮನೆ
|

Updated on:Dec 21, 2023 | 8:08 AM

Share

ಬಿಗ್​ ಬಾಸ್​ನಲ್ಲಿ (Bigg Boss) ಗಾಯಗಳು ಆಗೋದು ಸಾಮಾನ್ಯ. ಈ ಮೊದಲು ಗಾಯಗೊಂಡು ಮನೆಯಿಂದ ಸ್ಪರ್ಧಿಗಳು ಹೊರಗೆ ಹೋದ ಉದಾಹರಣೆಯೂ ಇದೆ. ಈ ಬಾರಿಯೂ ಹಾಗೆಯೇ ಆಗಿದೆ. ವಿನಯ್ ಗೌಡ (Vinay Gowda) ಬೆರಳಿಗೆ ಏಟಾಗಿದೆ. ಕಾರ್ತಿಕ್ ಗೌಡ ಅವರಿಗೆ ಬೆನ್ನು ನೋವು ಕಾಣಿಸಿಕೊಂಡಿದೆ. ಇದರಿಂದ ಇಬ್ಬರೂ ಆಟ ಆಡುವ ಪರಿಸ್ಥಿತಿಯಲ್ಲಿ ಇಲ್ಲ. ಹೀಗಾಗಿ ವಿನಯ್, ಕಾರ್ತಿಕ್ ಅವರು ಒಂದು ಗೇಮ್​ನಿಂದಲೇ ಹೊರಗೆ ಇರೋ ಪರಿಸ್ಥಿತಿ ಬಂದೊದಗಿದೆ.

ವಿನಯ್ ಗೌಡ ಅವರು ಸದಾ ಅಗ್ರೆಸ್ಸಿವ್ ಆಗಿ ಆಡಲು ಆದ್ಯತೆ ನೀಡುತ್ತಾರೆ. ಈ ಬಾರಿಯೂ ಹಾಗೆಯೇ ಆಗಿದೆ. ‘ಕಲೆ ಒಳ್ಳೆಯದಲ್ಲ’ ಎನ್ನುವ ಟಾಸ್ಕ್ ನೀಡಲಾಗಿತ್ತು. ಒಂದಷ್ಟು ಬಟ್ಟೆ ನೀಡಲಾಗುತ್ತದೆ. ಜೊತೆಗೆ ಕಲರ್ ಕೂಡ ನೀಡಲಾಗುತ್ತದೆ. ಎದುರಾಳಿಗಳು ಬಟ್ಟೆಯನ್ನು ಕಲರ್ ಮಾಡದಂತೆ ನೋಡಿಕೊಳ್ಳಬೇಕು. ಈ ಟಾಸ್ಕ್​ನಲ್ಲಿ ವಿನಯ್ ಅವರು ಗಾಯಗೊಂಡಿದ್ದಾರೆ. ಅವರ ಬೆರಳಿಗೆ ತೀವ್ರವಾಗಿ ಗಾಯ ಆಗಿದೆ. ಈ ಕಾರಣದಿಂದ ಅವರು ಗೇಮ್​ನಿಂದ ಹೊರಗೆ ಇರುವ ಪರಿಸ್ಥಿತಿ ಬಂದೊದಗಿದೆ. ‘ವೈದ್ಯರ ಸಲಹೆಯಂತೆ ವಿನಯ್ ಗೇಮ್ ಆಡುವಂತಿಲ್ಲ’ ಎಂದು ಬಿಗ್ ಬಾಸ್ ಅನೌನ್ಸ್ ಮಾಡಿದ್ದಾರೆ.

ಕಾರ್ತಿಕ್ ಕೂಡ ಗಾಯಗೊಂಡಿದ್ದಾರೆ. ಅವರಿಗೆ ಬೆನ್ನು ನೋವು ಕಾಣಿಸಿಕೊಂಡಿದೆ. ಹೀಗಾಗಿ ಮಲಗಿ ಅವರು ರೆಸ್ಟ್ ಮಾಡುತ್ತಿದ್ದಾರೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಡಿಸೆಂಬರ್ 20ರಂದು ಈ ಎಪಿಸೋಡ್​ ಪ್ರಸಾರ ಕಂಡಿದೆ. ವಿನಯ್ ಹಾಗೂ ಕಾರ್ತಿಕ್ ಬೇಗ ಗುಣಮುಖರಾಗಲಿ ಎಂದು ಫ್ಯಾನ್ಸ್ ಕೋರಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ‘ಜಿಂಕೆ ರೊಚ್ಚಿಗೆದ್ದರೆ ಆಗೋದು ಸಿಂಹನೇ’; ವಿನಯ್, ಅವಿನಾಶ್​ನಿಂದ ರಣರಂಗವಾಯಿತು ಬಣ್ಣದಾಟ

ವಿನಯ್ ಅಗ್ರೆಸ್ ಆಗಿದ್ದರಿಂದ ಗೇಮ್ ರದ್ದಾದ ಉದಾಹರಣೆ ಇತ್ತು. ಹೀಗಾಗಿ ತುಕಾಲಿ ಸಂತೋಷ್ ಅವರು ವಿನಯ್​ಗೆ ಈ ವಿಚಾರದಲ್ಲಿ ಮೊದಲೇ ಎಚ್ಚರಿಕೆ ನೀಡಿದ್ದರು. ‘ದಯವಿಟ್ಟು ಅಗ್ರೆಸ್ ಆಗಿ ಆಡಿ ಗೇಮ್​ನ ಹಾಳು ಮಾಡಬೇಡಿ’ ಎಂದು ಮೊದಲೇ ಕೋರಿದ್ದರು. ಆದಾಗ್ಯೂ ವಿನಯ್ ಅಗ್ರೆಸ್ಸಿವ್ ಆಗಿ ನಡೆದುಕೊಂಡಿದ್ದಾರೆ. ಇದರಿಂದ ಗಾಯ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:07 am, Thu, 21 December 23

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್