AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಾನವೀಯ ಕೃತ್ಯ; ವೀಕ್ಷಕರ ಈ ಪ್ರಶ್ನೆಗೆ ವಿನಯ್, ಮೈಕಲ್ ಬಳಿ ಉತ್ತರವಿದೆಯೇ?

ನಂತರ ಸಂಗೀತಾ, ಪ್ರತಾಪ್ ಚೇರ್​ನಲ್ಲಿ ಕುಳಿತಾಗ ಮೈಕಲ್, ವಿನಯ್ ಸೋಪಿನ ನೀರು, ಬಟ್ಟೆ ತೊಳೆಯಲು ಬಳಕೆ ಮಾಡುವ ಪೌಡರ್, ಶೇವ್ ಮಾಡಲು ಬಳಕೆ ಮಾಡುವ ಕ್ರೀಮ್ ಮತ್ತಿತ್ಯಾದಿ ಕೆಮಿಕಲ್​ನ ಬಳಕೆ ಮಾಡಿದ್ದಾರೆ.

ಅಮಾನವೀಯ ಕೃತ್ಯ; ವೀಕ್ಷಕರ ಈ ಪ್ರಶ್ನೆಗೆ ವಿನಯ್, ಮೈಕಲ್ ಬಳಿ ಉತ್ತರವಿದೆಯೇ?
ವಿನಯ್-ಪ್ರತಾಪ್
ರಾಜೇಶ್ ದುಗ್ಗುಮನೆ
|

Updated on:Dec 09, 2023 | 8:48 AM

Share

ಈ ವಾರ ರಾಕ್ಷಸರು ಹಾಗೂ ಗಂಧರ್ವರು ಟಾಸ್ಕ್​ನಲ್ಲಿ ಎರಡು ತಂಡದ ಮಧ್ಯೆ ಟಫ್ ಕಾಂಪಿಟೇಷನ್ ನಡೆಯಿತು. ಸ್ಪರ್ಧಿಗಳು ನಡೆದುಕೊಂಡ ರೀತಿ ಅನೇಕರಿಗೆ ಇಷ್ಟವೇ ಆಗಲಿಲ್ಲ. ವಿನಯ್ (Vinay Gowda), ಮೈಕಲ್ ತೋರಿದ ಅಮಾನವೀಯ ಆಟಕ್ಕೆ ಸಂಗೀತಾ ಹಾಗೂ ಪ್ರತಾಪ್ ಆಸ್ಪತ್ರೆ ಸೇರಿದ್ದಾರೆ. ‘ಅವರು ಮಾಡಿದ್ದನ್ನೇ ನಾವು ಮಾಡಿದ್ದು’ ಎಂದು ವಿನಯ್ ಸಮಜಾಯಿಶಿ ನೀಡುವ ಕೆಲಸ ಮಾಡಿದ್ದಾರೆ. ಆದರೆ, ವೀಕ್ಷಕರು ಕೇಳುತ್ತಿರುವ ಈ ಪ್ರಶ್ನೆಗೆ ಅವರಲ್ಲಿ ಉತ್ತರ ಇದೆಯೇ?

ಪ್ರತಾಪ್, ಅವಿನಾಶ್ ಮೊದಲಾದವರು ಸಂಗೀತಾ ತಂಡದಲ್ಲಿ ಇದ್ದರು. ವಿನಯ್, ನಮ್ರತಾ, ಮೈಕಲ್, ಮೊದಲಾದವರು ವರ್ತೂರು ಸಂತೋಷ್ ತಂಡದಲ್ಲಿ ಇದ್ದರು. ಚೇರ್ ಟಾಸ್ಕ್​ನ ಬಿಗ್ ಬಾಸ್ ನೀಡಿದ್ದರು. ಇದರ ಪ್ರಕಾರ ನಾಲ್ಕು ಜನ ಚೇರ್​ನಲ್ಲಿ ಕೂರಬೇಕು. ಅವರಿಗೆ ನೀರು ಹೊಡೆದು ಅವರನ್ನು ಎಬ್ಬಿಸಬೇಕು. ಮೊದಲು ವಿನಯ್ ತಂಡದವರು ಚೇರ್ ಮೇಲೆ ಕುಳಿತರು. ಸಂಗೀತಾ ತಂಡದವರು ನೀರು ಎರಚಿದರು. ಅವರು ಒಮ್ಮೆ ಸೋಪಿನ ನೀರನ್ನು ಬಳಸಿದ್ದರು. ಇದನ್ನು ವಿನಯ್ ಆ್ಯಂಡ್ ಟೀಂನ ಮನಸ್ಸಿನಲ್ಲಿ ಇಟ್ಟುಕೊಂಡಿದೆ.

ನಂತರ ಸಂಗೀತಾ, ಪ್ರತಾಪ್ ಚೇರ್​ನಲ್ಲಿ ಕುಳಿತಾಗ ಮೈಕಲ್, ವಿನಯ್ ಸೋಪಿನ ನೀರು, ಬಟ್ಟೆ ತೊಳೆಯಲು ಬಳಕೆ ಮಾಡುವ ಪೌಡರ್, ಶೇವ್ ಮಾಡಲು ಬಳಕೆ ಮಾಡುವ ಕ್ರೀಮ್ ಮತ್ತಿತ್ಯಾದಿ ಕೆಮಿಕಲ್​ನ ಬಳಕೆ ಮಾಡಿದ್ದಾರೆ. ಇದರಿಂದ ಪ್ರತಾಪ್ ಹಾಗೂ ಸಂಗೀತಾ ಕಣ್ಣಿಗೆ ಸಾಕಷ್ಟು ಹಾನಿ ಆಗಿದೆ. ಅವರು ಆಸ್ಪತ್ರೆ ಸೇರಿದ್ದಾರೆ.

ಇದನ್ನೂ ಓದಿ: ಸಿಡಿದೆದ್ದ ನಮ್ರತಾ ಗೌಡ; ಕಣ್ಣೀರು ಹಾಕಿದ ಸಂಗೀತಾ ಶೃಂಗೇರಿ; ಬಿಗ್​ ಬಾಸ್​ ಮನೆಯಲ್ಲಿ ಎಲ್ಲರಿಗೂ ಶಾಕ್​

‘ಅವರು ಮಾಡಿದ್ದನ್ನೇ ನಾವು ಮಾಡಿದ್ದು’ ಎಂದು ವಿನಯ್ ಹೇಳಿಕೊಂಡಿದ್ದಾರೆ. ಹಾಗಾದರೆ, ಚೇರ್​ನಲ್ಲಿ ಕುಳಿತ ಅವರ ತಂಡದ ಪವಿಗಾಗಲಿ, ವರ್ತೂರು ಸಂತೋಷ್​ಗಾಗಲಿ ಈ ರೀತಿಯ ತೊಂದರೆ ಏಕಾಗಿಲ್ಲ ಎಂಬುದು ಅನೇಕರ ಪ್ರಶ್ನೆ. ವೀಕೆಂಡ್​ನಲ್ಲಿ ಈ ವಿಚಾರವನ್ನು ಸುದೀಪ್ ಮುಖ್ಯವಾಗಿ ಪ್ರಶ್ನೆ ಮಾಡಲಿದ್ದಾರೆ. ಅಸಮರ್ಥವಾಗಿ ಕ್ಯಾಪ್ಟನ್ಸಿ ನಡೆಸಿದ ಸ್ನೇಹಿತ್ ಅವರ ನಡೆಯ ಬಗ್ಗೆಯೂ ಸುದೀಪ್ ಪ್ರಶ್ನೆ ಮಾಡುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:41 am, Sat, 9 December 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ