AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಾತು ಹಿಂಪಡೆಯುತ್ತೇನೆ’; ಕೊನೆಗೂ ದ್ವೇಷ ಮರೆತು ಒಂದಾದ ವಿನಯ್-ಸಂಗೀತಾ

‘ಬಿಗ್ ಬಾಸ್’ಗೆ ಬರುವುದಕ್ಕೂ ಮೊದಲೇ ಸಂಗೀತಾ ಹಾಗೂ ವಿನಯ್ ಮಧ್ಯೆ ಪರಿಚಯ ಇತ್ತು. ಬಿಗ್ ಬಾಸ್ ಮನೆಗೆ ಬಂದ ನಂತರದಲ್ಲಿ ಇವರ ಮಧ್ಯೆ ಕಿರಿಕ್ ಆಯಿತು. ಬದ್ಧ ವೈರಿಗಳಂತೆ ಇವರು ವರ್ತಿಸೋಕೆ ಆರಂಭಿಸಿದರು. ಈ ಬೆಳವಣಿಗೆ ಎಲ್ಲರಿಗೂ ಶಾಕ್ ತಂದಿತ್ತು. ಈಗ ಇಬ್ಬರೂ ರಾಜಿ ಆಗಿದ್ದಾರೆ.

‘ಮಾತು ಹಿಂಪಡೆಯುತ್ತೇನೆ’; ಕೊನೆಗೂ ದ್ವೇಷ ಮರೆತು ಒಂದಾದ ವಿನಯ್-ಸಂಗೀತಾ
ವಿನಯ್-ಸಂಗೀತಾ
ರಾಜೇಶ್ ದುಗ್ಗುಮನೆ
|

Updated on: Oct 20, 2023 | 7:38 AM

Share

ಕಳೆದ ವಾರ ಸಂಗೀತಾ ಹೆಸರನ್ನು ವಿನಯ್ ಅವರು ನಾಮಿನೇಷನ್​ಗೆ ತೆಗೆದುಕೊಂಡಿದ್ದರು. ಈ ಆಯ್ಕೆಗೆ ಅವರು ರೂಲ್ಸ್ ಬ್ರೇಕ್ ಮಾಡಿರುವ ಕಾರಣ ನೀಡಿದ್ದರು. ಇದು ಸಂಗೀತಾಗೆ (Sangeetha Sringeri) ಸರಿ ಎನಿಸಿರಲಿಲ್ಲ. ಈ ಕಾರಣದಿಂದಲೇ ಇಬ್ಬರ ಮಧ್ಯೆ ಕಿರಿಕ್ ಉಂಟಾಗಿತ್ತು. ಸಣ್ಣ ಸಣ್ಣ ವಿಚಾರಕ್ಕೂ ಇಬ್ಬರೂ ಕಿತ್ತಾಡಿಕೊಳ್ಳುತ್ತಿದ್ದರು. ಈಗ ಇಬ್ಬರೂ ದ್ವೇಷ ಮರೆತು ರಾಜಿ ಆಗಿದ್ದಾರೆ. ಈ ವಿಚಾರ ಇಬ್ಬರ ಅಭಿಮಾನಿಗಳಿಗೆ ಖುಷಿ ನಿಡಿದೆ. ಮುಂದಿನ ದಿನಗಳಲ್ಲಿ ಇವರು ಮೊದಲಿನಂತೆ ಒಳ್ಳೆಯ ಗೆಳೆಯರಾಗಿ ಇರುತ್ತಾರಾ ಎಂಬ ಪ್ರಶ್ನೆ ಮೂಡಿದೆ.

‘ಬಿಗ್ ಬಾಸ್’ಗೆ ಬರುವುದಕ್ಕೂ ಮೊದಲೇ ಸಂಗೀತಾ ಹಾಗೂ ವಿನಯ್ ಮಧ್ಯೆ ಪರಿಚಯ ಇತ್ತು. ಒಂದೇ ಧಾರಾವಾಹಿಯಲ್ಲಿ ಇವರು ನಟಿಸಿದ್ದರು. ಬಿಗ್ ಬಾಸ್ ಮನೆಗೆ ಬಂದ ನಂತರದಲ್ಲಿ ಇವರ ಮಧ್ಯೆ ಕಿರಿಕ್ ಆಯಿತು. ಬದ್ಧ ವೈರಿಗಳಂತೆ ಇವರು ವರ್ತಿಸೋಕೆ ಆರಂಭಿಸಿದರು. ಈ ಬೆಳವಣಿಗೆ ಎಲ್ಲರಿಗೂ ಶಾಕ್ ತಂದಿತ್ತು. ಈಗ ಇಬ್ಬರೂ ರಾಜಿ ಆಗಿದ್ದಾರೆ.

ಇತ್ತೀಚೆಗೆ ಟಾಸ್ಕ್ ಆಡುವಾಗ ಸಂಗೀತಾ ಅವರು ವಿನಯ್ ವಿರುದ್ಧ ಕೂಗಾಡಿದ್ದರು. ನಿಮ್ಮ ಧ್ವನಿ ನನಗೆ ಭಯ ತರಿಸುವ ರೀತಿಯಲ್ಲಿ ಇದೆ ಎಂದು ಹೇಳಿದ್ದರು. ಇದು ವಿನಯ್ ಅಸಮಾಧಾನಕ್ಕೆ ಕಾರಣ ಆಗಿತ್ತು. ವಿನಯ್ ಅವರ ವರ್ತನೆಯಿಂದ ಸಂಗೀತಾ ಅವರು ಖಿನ್ನೆತೆಗೆ ಒಳಗಾಗುತ್ತಿದ್ದಾರೆ ಎಂದೆಲ್ಲ ಭಾಗ್ಯಶ್ರೀ ಸುದ್ದಿ ಹಬ್ಬಿಸಿದ್ದರು. ಈ ಎಲ್ಲಾ ಬೆಳವಣಿಗೆಯಿಂದ ಸಂಗೀತಾ ಹಾಗೂ ವಿನಯ್ ಮತ್ತಷ್ಟು ಕುಪಿತಗೊಂಡರು.

ಇದನ್ನೂ ಓದಿ: ಬಿಗ್ ಬಾಸ್​ನಲ್ಲಿ ಬಿಸಿ ಗಾಳಿ​: ಕೋಪದಲ್ಲಿ ಬಾಯಿಗೆ ಬಂದಂತೆ ಬೈದ ವಿನಯ್ ಗೌಡ

ಅಕ್ಟೋಬರ್ 19 ಎಪಿಸೋಡ್​ನಲ್ಲಿ ಇಬ್ಬರೂ ಕುಳಿತು ಮಾತನಾಡಿದ್ದಾರೆ. ‘ನಡೆದಿರುವ ಘಟನೆ ಬಗ್ಗೆ ಕ್ಷಮೆ ಕೇಳುತ್ತೇನೆ. ಜಗಳ ಆಡುವಾಗ ನಿಮ್ಮ ಮಾತು ಬೆದರಿಕೆ ಹಾಕುವಂತಿದೆ ಎಂದಿದ್ದೆ. ಅದು ಸಿಟ್ಟಲ್ಲಿ ಹೇಳಿದ್ದು ಅಷ್ಟೇ. ಆ ಮಾತನ್ನು ಹಿಂಪಡೆಯುತ್ತೇನೆ’ ಎಂದರು ಸಂಗೀತಾ. ‘ನಾವು ಮೊದಲಿನಂತೆ ಇದ್ದುಬಿಡೋಣ. ಈಗಾದ ಘಟನೆಯನ್ನು ಮರೆಯೋಣ’ ಎಂದರು ವಿನಯ್.

ಕಲರ್ಸ್ ಕನ್ನಡದಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಆಗುತ್ತಿದೆ. ಜಿಯೋದಲ್ಲಿ 24 ಗಂಟೆ ಲೈವ್ ನೋಡಲು ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ