AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಾತು ಹಿಂಪಡೆಯುತ್ತೇನೆ’; ಕೊನೆಗೂ ದ್ವೇಷ ಮರೆತು ಒಂದಾದ ವಿನಯ್-ಸಂಗೀತಾ

‘ಬಿಗ್ ಬಾಸ್’ಗೆ ಬರುವುದಕ್ಕೂ ಮೊದಲೇ ಸಂಗೀತಾ ಹಾಗೂ ವಿನಯ್ ಮಧ್ಯೆ ಪರಿಚಯ ಇತ್ತು. ಬಿಗ್ ಬಾಸ್ ಮನೆಗೆ ಬಂದ ನಂತರದಲ್ಲಿ ಇವರ ಮಧ್ಯೆ ಕಿರಿಕ್ ಆಯಿತು. ಬದ್ಧ ವೈರಿಗಳಂತೆ ಇವರು ವರ್ತಿಸೋಕೆ ಆರಂಭಿಸಿದರು. ಈ ಬೆಳವಣಿಗೆ ಎಲ್ಲರಿಗೂ ಶಾಕ್ ತಂದಿತ್ತು. ಈಗ ಇಬ್ಬರೂ ರಾಜಿ ಆಗಿದ್ದಾರೆ.

‘ಮಾತು ಹಿಂಪಡೆಯುತ್ತೇನೆ’; ಕೊನೆಗೂ ದ್ವೇಷ ಮರೆತು ಒಂದಾದ ವಿನಯ್-ಸಂಗೀತಾ
ವಿನಯ್-ಸಂಗೀತಾ
ರಾಜೇಶ್ ದುಗ್ಗುಮನೆ
|

Updated on: Oct 20, 2023 | 7:38 AM

Share

ಕಳೆದ ವಾರ ಸಂಗೀತಾ ಹೆಸರನ್ನು ವಿನಯ್ ಅವರು ನಾಮಿನೇಷನ್​ಗೆ ತೆಗೆದುಕೊಂಡಿದ್ದರು. ಈ ಆಯ್ಕೆಗೆ ಅವರು ರೂಲ್ಸ್ ಬ್ರೇಕ್ ಮಾಡಿರುವ ಕಾರಣ ನೀಡಿದ್ದರು. ಇದು ಸಂಗೀತಾಗೆ (Sangeetha Sringeri) ಸರಿ ಎನಿಸಿರಲಿಲ್ಲ. ಈ ಕಾರಣದಿಂದಲೇ ಇಬ್ಬರ ಮಧ್ಯೆ ಕಿರಿಕ್ ಉಂಟಾಗಿತ್ತು. ಸಣ್ಣ ಸಣ್ಣ ವಿಚಾರಕ್ಕೂ ಇಬ್ಬರೂ ಕಿತ್ತಾಡಿಕೊಳ್ಳುತ್ತಿದ್ದರು. ಈಗ ಇಬ್ಬರೂ ದ್ವೇಷ ಮರೆತು ರಾಜಿ ಆಗಿದ್ದಾರೆ. ಈ ವಿಚಾರ ಇಬ್ಬರ ಅಭಿಮಾನಿಗಳಿಗೆ ಖುಷಿ ನಿಡಿದೆ. ಮುಂದಿನ ದಿನಗಳಲ್ಲಿ ಇವರು ಮೊದಲಿನಂತೆ ಒಳ್ಳೆಯ ಗೆಳೆಯರಾಗಿ ಇರುತ್ತಾರಾ ಎಂಬ ಪ್ರಶ್ನೆ ಮೂಡಿದೆ.

‘ಬಿಗ್ ಬಾಸ್’ಗೆ ಬರುವುದಕ್ಕೂ ಮೊದಲೇ ಸಂಗೀತಾ ಹಾಗೂ ವಿನಯ್ ಮಧ್ಯೆ ಪರಿಚಯ ಇತ್ತು. ಒಂದೇ ಧಾರಾವಾಹಿಯಲ್ಲಿ ಇವರು ನಟಿಸಿದ್ದರು. ಬಿಗ್ ಬಾಸ್ ಮನೆಗೆ ಬಂದ ನಂತರದಲ್ಲಿ ಇವರ ಮಧ್ಯೆ ಕಿರಿಕ್ ಆಯಿತು. ಬದ್ಧ ವೈರಿಗಳಂತೆ ಇವರು ವರ್ತಿಸೋಕೆ ಆರಂಭಿಸಿದರು. ಈ ಬೆಳವಣಿಗೆ ಎಲ್ಲರಿಗೂ ಶಾಕ್ ತಂದಿತ್ತು. ಈಗ ಇಬ್ಬರೂ ರಾಜಿ ಆಗಿದ್ದಾರೆ.

ಇತ್ತೀಚೆಗೆ ಟಾಸ್ಕ್ ಆಡುವಾಗ ಸಂಗೀತಾ ಅವರು ವಿನಯ್ ವಿರುದ್ಧ ಕೂಗಾಡಿದ್ದರು. ನಿಮ್ಮ ಧ್ವನಿ ನನಗೆ ಭಯ ತರಿಸುವ ರೀತಿಯಲ್ಲಿ ಇದೆ ಎಂದು ಹೇಳಿದ್ದರು. ಇದು ವಿನಯ್ ಅಸಮಾಧಾನಕ್ಕೆ ಕಾರಣ ಆಗಿತ್ತು. ವಿನಯ್ ಅವರ ವರ್ತನೆಯಿಂದ ಸಂಗೀತಾ ಅವರು ಖಿನ್ನೆತೆಗೆ ಒಳಗಾಗುತ್ತಿದ್ದಾರೆ ಎಂದೆಲ್ಲ ಭಾಗ್ಯಶ್ರೀ ಸುದ್ದಿ ಹಬ್ಬಿಸಿದ್ದರು. ಈ ಎಲ್ಲಾ ಬೆಳವಣಿಗೆಯಿಂದ ಸಂಗೀತಾ ಹಾಗೂ ವಿನಯ್ ಮತ್ತಷ್ಟು ಕುಪಿತಗೊಂಡರು.

ಇದನ್ನೂ ಓದಿ: ಬಿಗ್ ಬಾಸ್​ನಲ್ಲಿ ಬಿಸಿ ಗಾಳಿ​: ಕೋಪದಲ್ಲಿ ಬಾಯಿಗೆ ಬಂದಂತೆ ಬೈದ ವಿನಯ್ ಗೌಡ

ಅಕ್ಟೋಬರ್ 19 ಎಪಿಸೋಡ್​ನಲ್ಲಿ ಇಬ್ಬರೂ ಕುಳಿತು ಮಾತನಾಡಿದ್ದಾರೆ. ‘ನಡೆದಿರುವ ಘಟನೆ ಬಗ್ಗೆ ಕ್ಷಮೆ ಕೇಳುತ್ತೇನೆ. ಜಗಳ ಆಡುವಾಗ ನಿಮ್ಮ ಮಾತು ಬೆದರಿಕೆ ಹಾಕುವಂತಿದೆ ಎಂದಿದ್ದೆ. ಅದು ಸಿಟ್ಟಲ್ಲಿ ಹೇಳಿದ್ದು ಅಷ್ಟೇ. ಆ ಮಾತನ್ನು ಹಿಂಪಡೆಯುತ್ತೇನೆ’ ಎಂದರು ಸಂಗೀತಾ. ‘ನಾವು ಮೊದಲಿನಂತೆ ಇದ್ದುಬಿಡೋಣ. ಈಗಾದ ಘಟನೆಯನ್ನು ಮರೆಯೋಣ’ ಎಂದರು ವಿನಯ್.

ಕಲರ್ಸ್ ಕನ್ನಡದಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಆಗುತ್ತಿದೆ. ಜಿಯೋದಲ್ಲಿ 24 ಗಂಟೆ ಲೈವ್ ನೋಡಲು ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು