‘ಮಾತು ಹಿಂಪಡೆಯುತ್ತೇನೆ’; ಕೊನೆಗೂ ದ್ವೇಷ ಮರೆತು ಒಂದಾದ ವಿನಯ್-ಸಂಗೀತಾ

‘ಬಿಗ್ ಬಾಸ್’ಗೆ ಬರುವುದಕ್ಕೂ ಮೊದಲೇ ಸಂಗೀತಾ ಹಾಗೂ ವಿನಯ್ ಮಧ್ಯೆ ಪರಿಚಯ ಇತ್ತು. ಬಿಗ್ ಬಾಸ್ ಮನೆಗೆ ಬಂದ ನಂತರದಲ್ಲಿ ಇವರ ಮಧ್ಯೆ ಕಿರಿಕ್ ಆಯಿತು. ಬದ್ಧ ವೈರಿಗಳಂತೆ ಇವರು ವರ್ತಿಸೋಕೆ ಆರಂಭಿಸಿದರು. ಈ ಬೆಳವಣಿಗೆ ಎಲ್ಲರಿಗೂ ಶಾಕ್ ತಂದಿತ್ತು. ಈಗ ಇಬ್ಬರೂ ರಾಜಿ ಆಗಿದ್ದಾರೆ.

‘ಮಾತು ಹಿಂಪಡೆಯುತ್ತೇನೆ’; ಕೊನೆಗೂ ದ್ವೇಷ ಮರೆತು ಒಂದಾದ ವಿನಯ್-ಸಂಗೀತಾ
ವಿನಯ್-ಸಂಗೀತಾ
Follow us
|

Updated on: Oct 20, 2023 | 7:38 AM

ಕಳೆದ ವಾರ ಸಂಗೀತಾ ಹೆಸರನ್ನು ವಿನಯ್ ಅವರು ನಾಮಿನೇಷನ್​ಗೆ ತೆಗೆದುಕೊಂಡಿದ್ದರು. ಈ ಆಯ್ಕೆಗೆ ಅವರು ರೂಲ್ಸ್ ಬ್ರೇಕ್ ಮಾಡಿರುವ ಕಾರಣ ನೀಡಿದ್ದರು. ಇದು ಸಂಗೀತಾಗೆ (Sangeetha Sringeri) ಸರಿ ಎನಿಸಿರಲಿಲ್ಲ. ಈ ಕಾರಣದಿಂದಲೇ ಇಬ್ಬರ ಮಧ್ಯೆ ಕಿರಿಕ್ ಉಂಟಾಗಿತ್ತು. ಸಣ್ಣ ಸಣ್ಣ ವಿಚಾರಕ್ಕೂ ಇಬ್ಬರೂ ಕಿತ್ತಾಡಿಕೊಳ್ಳುತ್ತಿದ್ದರು. ಈಗ ಇಬ್ಬರೂ ದ್ವೇಷ ಮರೆತು ರಾಜಿ ಆಗಿದ್ದಾರೆ. ಈ ವಿಚಾರ ಇಬ್ಬರ ಅಭಿಮಾನಿಗಳಿಗೆ ಖುಷಿ ನಿಡಿದೆ. ಮುಂದಿನ ದಿನಗಳಲ್ಲಿ ಇವರು ಮೊದಲಿನಂತೆ ಒಳ್ಳೆಯ ಗೆಳೆಯರಾಗಿ ಇರುತ್ತಾರಾ ಎಂಬ ಪ್ರಶ್ನೆ ಮೂಡಿದೆ.

‘ಬಿಗ್ ಬಾಸ್’ಗೆ ಬರುವುದಕ್ಕೂ ಮೊದಲೇ ಸಂಗೀತಾ ಹಾಗೂ ವಿನಯ್ ಮಧ್ಯೆ ಪರಿಚಯ ಇತ್ತು. ಒಂದೇ ಧಾರಾವಾಹಿಯಲ್ಲಿ ಇವರು ನಟಿಸಿದ್ದರು. ಬಿಗ್ ಬಾಸ್ ಮನೆಗೆ ಬಂದ ನಂತರದಲ್ಲಿ ಇವರ ಮಧ್ಯೆ ಕಿರಿಕ್ ಆಯಿತು. ಬದ್ಧ ವೈರಿಗಳಂತೆ ಇವರು ವರ್ತಿಸೋಕೆ ಆರಂಭಿಸಿದರು. ಈ ಬೆಳವಣಿಗೆ ಎಲ್ಲರಿಗೂ ಶಾಕ್ ತಂದಿತ್ತು. ಈಗ ಇಬ್ಬರೂ ರಾಜಿ ಆಗಿದ್ದಾರೆ.

ಇತ್ತೀಚೆಗೆ ಟಾಸ್ಕ್ ಆಡುವಾಗ ಸಂಗೀತಾ ಅವರು ವಿನಯ್ ವಿರುದ್ಧ ಕೂಗಾಡಿದ್ದರು. ನಿಮ್ಮ ಧ್ವನಿ ನನಗೆ ಭಯ ತರಿಸುವ ರೀತಿಯಲ್ಲಿ ಇದೆ ಎಂದು ಹೇಳಿದ್ದರು. ಇದು ವಿನಯ್ ಅಸಮಾಧಾನಕ್ಕೆ ಕಾರಣ ಆಗಿತ್ತು. ವಿನಯ್ ಅವರ ವರ್ತನೆಯಿಂದ ಸಂಗೀತಾ ಅವರು ಖಿನ್ನೆತೆಗೆ ಒಳಗಾಗುತ್ತಿದ್ದಾರೆ ಎಂದೆಲ್ಲ ಭಾಗ್ಯಶ್ರೀ ಸುದ್ದಿ ಹಬ್ಬಿಸಿದ್ದರು. ಈ ಎಲ್ಲಾ ಬೆಳವಣಿಗೆಯಿಂದ ಸಂಗೀತಾ ಹಾಗೂ ವಿನಯ್ ಮತ್ತಷ್ಟು ಕುಪಿತಗೊಂಡರು.

ಇದನ್ನೂ ಓದಿ: ಬಿಗ್ ಬಾಸ್​ನಲ್ಲಿ ಬಿಸಿ ಗಾಳಿ​: ಕೋಪದಲ್ಲಿ ಬಾಯಿಗೆ ಬಂದಂತೆ ಬೈದ ವಿನಯ್ ಗೌಡ

ಅಕ್ಟೋಬರ್ 19 ಎಪಿಸೋಡ್​ನಲ್ಲಿ ಇಬ್ಬರೂ ಕುಳಿತು ಮಾತನಾಡಿದ್ದಾರೆ. ‘ನಡೆದಿರುವ ಘಟನೆ ಬಗ್ಗೆ ಕ್ಷಮೆ ಕೇಳುತ್ತೇನೆ. ಜಗಳ ಆಡುವಾಗ ನಿಮ್ಮ ಮಾತು ಬೆದರಿಕೆ ಹಾಕುವಂತಿದೆ ಎಂದಿದ್ದೆ. ಅದು ಸಿಟ್ಟಲ್ಲಿ ಹೇಳಿದ್ದು ಅಷ್ಟೇ. ಆ ಮಾತನ್ನು ಹಿಂಪಡೆಯುತ್ತೇನೆ’ ಎಂದರು ಸಂಗೀತಾ. ‘ನಾವು ಮೊದಲಿನಂತೆ ಇದ್ದುಬಿಡೋಣ. ಈಗಾದ ಘಟನೆಯನ್ನು ಮರೆಯೋಣ’ ಎಂದರು ವಿನಯ್.

ಕಲರ್ಸ್ ಕನ್ನಡದಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಆಗುತ್ತಿದೆ. ಜಿಯೋದಲ್ಲಿ 24 ಗಂಟೆ ಲೈವ್ ನೋಡಲು ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು