AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇಲ್ಲಿ ಬಂದಿರೋರು ಬಿಕಾರಿಗಳಾ?’; ರೌಡಿ ತರ ಆಡಿದ ವಿನಯ್​ಗೆ ತಿರುಗೇಟು ಕೊಟ್ಟ ತನಿಷಾ

ವಿನಯ್ ಗೌಡ ಅವರು ಮೊದಲು ಕಿತ್ತಾಟ ಮಾಡಿಕೊಂಡಿದ್ದು ಸಂಗೀತಾ ಶೃಂಗೇರಿ ಜೊತೆ. ಸಂಗೀತಾ ಹಾಗೂ ವಿನಯ್ ಒಂದೇ ಧಾರಾವಾಹಿಯಲ್ಲಿ ನಟಿಸಿದ ಹೊರತಾಗಿಯೂ ಇಬ್ಬರೂ ಜಗಳ ಮಾಡಿಕೊಂಡಿದ್ದರು. ಈಗ ಈ ದ್ವೇಷದ ಕಿಡಿ ಕಾಡ್ಗಿಚ್ಚಿನಂತಾಗಿದೆ.

‘ಇಲ್ಲಿ ಬಂದಿರೋರು ಬಿಕಾರಿಗಳಾ?’; ರೌಡಿ ತರ ಆಡಿದ ವಿನಯ್​ಗೆ ತಿರುಗೇಟು ಕೊಟ್ಟ ತನಿಷಾ
ತನಿಷಾ-ವಿನಯ್
ರಾಜೇಶ್ ದುಗ್ಗುಮನೆ
|

Updated on:Oct 18, 2023 | 10:05 AM

Share

ವಿನಯ್ ಗೌಡ (Vinay Gowda) ಅವರು ಬಿಗ್ ಬಾಸ್ ಮನೆಯಲ್ಲಿ ರೌಡಿ ತರ ಆಡುತ್ತಿದ್ದಾರೆ ಎಂಬುದು ಹಲವರ ಆರೋಪ. ಸೋಶಿಯಲ್ ಮೀಡಿಯಾದಲ್ಲೂ ಇದೇ ರೀತಿಯ ಅಭಿಪ್ರಾಯ ವ್ಯಕ್ತವಾಗಿದೆ. ಅವರ ಆ್ಯಟಿಟ್ಯೂಡ್ ಸರಿ ಇಲ್ಲ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಅಕ್ಟೋಬರ್ 17ರ ಎಪಿಸೋಡ್​ನಲ್ಲಿ ಮನೆಯಲ್ಲಿ ದೊಡ್ಡ ಜಗಳ ಆಗಿತ್ತು. ಇದರಲ್ಲಿ ವಿನಯ್ ಪಾಲೂ ಇದೆ. ಇಂದಿನ (ಅಕ್ಟೋಬರ್ 18) ಎಪಿಸೋಡ್​ನಲ್ಲಿ ಅವರು ತನಿಷಾಗೆ (Tanisha) ಅವಾಜ್ ಹಾಕಲು ಬಂದಿದ್ದಾರೆ. ಈ ವೇಳೆ ತನಿಷಾ ಸರಿಯಾಗಿ ತಿರುಗೇಟು ಕೊಟ್ಟಿದ್ದಾರೆ.

ವಿನಯ್ ಗೌಡ ಅವರು ಮೊದಲು ಕಿತ್ತಾಟ ಮಾಡಿಕೊಂಡಿದ್ದು ಸಂಗೀತಾ ಶೃಂಗೇರಿ ಜೊತೆ. ಸಂಗೀತಾ ಹಾಗೂ ವಿನಯ್ ಒಂದೇ ಧಾರಾವಾಹಿಯಲ್ಲಿ ನಟಿಸಿದ ಹೊರತಾಗಿಯೂ ಇಬ್ಬರೂ ಜಗಳ ಮಾಡಿಕೊಂಡಿದ್ದರು. ಈಗ ಈ ದ್ವೇಷದ ಕಿಡಿ ಕಾಡ್ಗಿಚ್ಚಿನಂತಾಗಿದೆ. ವಿನಯ್ ಹಾಗೂ ಸಂಗೀತಾ ಸಣ್ಣ ವಿಚಾರಕ್ಕೂ ಕಿತ್ತಾಡಿಕೊಳ್ಳುತ್ತಿದ್ದಾರೆ. ಈ ವಾರದ ಟಾಸ್ಕ್ ಆರಂಭ ಆಗಿದ್ದು, ಎರಡು ಟೀಂ ಮಾಡಲಾಗಿದೆ. ಒಂದಕ್ಕೆ ವಿನಯ್ ಕ್ಯಾಪ್ಟನ್ ಆದರೆ, ಮತ್ತೊಂದು ಟೀಂನ ಕಾರ್ತಿಕ್ ಅವರು ಮುನ್ನಡೆಸುತ್ತಿದ್ದಾರೆ. ಮಂಗಳವಾರದ (ಅಕ್ಟೋಬರ್ 18) ಟಾಸ್ಕ್​ನ ವಿನಯ್ ತಂಡ ಗೆದ್ದಿದೆ.

ಬುಧವಾರದ (ಅಕ್ಟೋಬರ್ 19) ಎಪಿಸೋಡ್​ನ ಪ್ರೋಮೋ ರಿಲೀಸ್ ಮಾಡಲಾಗಿದೆ. ಎರಡೂ ತಂಡದವರಿಗೆ ಹೊಸ ಟಾಸ್ಕ್ ನೀಡಲಾಗಿತ್ತು. ಆಗ ತನಿಷಾ ಅವರು ಮಾತನಾಡಲು ಹೋಗಿದ್ದಾರೆ. ‘ಬೇಡದೆ ಇಲ್ಲದವರ ಮಾತು ಕೇಳಬೇಡಿ’ ಎಂದು ವಿನಯ್ ಹೇಳಿದ ಮಾತು ತನಿಷಾಗೆ ಕೋಪ ತರಿಸಿದೆ. ‘ಬೇಡದೆ ಇದ್ದವರು ಯಾರೂ ಇಲ್ಲ. ನಾವೇನು ಬಿಕಾರಿಗಳಾ’ ಎಂದು ಪ್ರಶ್ನೆ ಮಾಡಿದ್ದಾರೆ ತನಿಷಾ. ಅವರ ಖಡಕ್ ಉತ್ತರವನ್ನು ಅನೇಕರು ಮೆಚ್ಚಿಕೊಂಡಿದ್ದಾರೆ.

ಇದನ್ನೂ ಓದಿ: ಹೊಸ ಫೋಟೋಶೂಟ್​​ನಲ್ಲಿ ಬಿಗ್ ಬಾಸ್ ವಿಜೇತೆ ತೇಜಸ್ವಿ ಪ್ರಕಾಶ್

‘ಬಿಗ್ ಬಾಸ್ ಕನ್ನಡ ಸೀಸನ್ 10’ ಎಪಿಸೋಡ್ ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡಲು ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:58 am, Wed, 18 October 23

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!