AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಳೋದೆಲ್ಲ ಹೇಳಿ ‘ತಪ್ಪು ಶಬ್ದ ಪ್ರಯೋಗ ಮಾಡಿದ್ದರೆ ಕ್ಷಮೆ ಇರಲಿ’ ಎಂದ ವಿನಯ್ ಗೌಡ

ಮೊದಲ ವಾರ ಸಂಗೀತಾ ಹಾಗೂ ವಿನಯ್ ನಡುವೆ ಕಿತ್ತಾಟ ನಡೆಯಿತು. ಇದು ಸಾಮಾನ್ಯ ರೀತಿಯಲ್ಲೇ ಇತ್ತು. ಕಳೆದ ವಾರ ಸುದೀಪ್ ಅವರು ವಿನಯ್ ಅವರನ್ನು ಆನೆ ಎಂದು ಹೊಗಳಿದ ಬಳಿಕ ಅವರು ನಡೆದುಕೊಳ್ಳುವ ರೀತಿ ಬದಲಾಯಿತು. ಈ ವಾರ ಅವರಿಗೆ ಮಿತಿಯೇ ಇಲ್ಲ ಎಂಬ ರೀತಿಯಲ್ಲಿ ನಡೆದುಕೊಂಡರು.

ಹೇಳೋದೆಲ್ಲ ಹೇಳಿ ‘ತಪ್ಪು ಶಬ್ದ ಪ್ರಯೋಗ ಮಾಡಿದ್ದರೆ ಕ್ಷಮೆ ಇರಲಿ’ ಎಂದ ವಿನಯ್ ಗೌಡ
ವಿನಯ್​ ಗೌಡ
ರಾಜೇಶ್ ದುಗ್ಗುಮನೆ
|

Updated on:Nov 03, 2023 | 9:44 AM

Share

ಬಿಗ್ ಬಾಸ್ (Bigg Boss) ಮನೆಯಲ್ಲಿರುವ ವಿನಯ್ ಗೌಡ (Vinay Gowda) ಅವರ ಬಗ್ಗೆ ನೆಗೆಟಿವ್ ಮಾತು ಶುರುವಾಗಿದೆ. ಅವರು ನಡೆದುಕೊಳ್ಳುತ್ತಿರುವುದು ಆ ರೀತಿಯಲ್ಲಿದೆ. ಎಲ್ಲರ ಮೇಲೆ ಏಕವಚನ ಪ್ರಯೋಗ ಮಾಡುತ್ತಾರೆ. ಆ ಬಳಿಕ ತಮಗೆ ಗೌರವ ಸಿಗಬೇಕು ಎಂದು ನಿರೀಕ್ಷೆ ಮಾಡುತ್ತಾರೆ. ಈ ಬಾರಿ ಮಹಿಳೆಯರ ಬಗ್ಗೆ ಅವರು ಬಳಕೆ ಮಾಡಿದ ಅವಾಚ್ಯ ಶಬ್ದಗಳು ಒಂದೆರಡಲ್ಲ. ಮಾಡುವುದನ್ನೆಲ್ಲ ಮಾಡಿ, ಹೇಳುವುದನ್ನೆಲ್ಲ ಹೇಳಿ ಕೊನೆಗೆ ಅವರು ಕ್ಷಮೆ ಕೇಳಿದ್ದಾರೆ. ಇದು ನಾಟಕದ ಕ್ಷಮೆ ಎಂದು ವೀಕ್ಷಕರು ಅಭಿಪ್ರಾಯಪಟ್ಟಿದ್ದಾರೆ.

ಮೊದಲ ವಾರ ಸಂಗೀತಾ ಹಾಗೂ ವಿನಯ್ ನಡುವೆ ಕಿತ್ತಾಟ ನಡೆಯಿತು. ಇದು ಸಾಮಾನ್ಯ ರೀತಿಯಲ್ಲೇ ಇತ್ತು. ಕಳೆದ ವಾರ ಸುದೀಪ್ ಅವರು ವಿನಯ್ ಅವರನ್ನು ಆನೆ ಎಂದು ಹೊಗಳಿದ ಬಳಿಕ ಅವರು ನಡೆದುಕೊಳ್ಳುವ ರೀತಿ ಬದಲಾಯಿತು. ಈ ವಾರ ಅವರಿಗೆ ಮಿತಿಯೇ ಇಲ್ಲ ಎಂಬ ರೀತಿಯಲ್ಲಿ ನಡೆದುಕೊಂಡರು. ಅನೇಕರ ಮನಸ್ಸನ್ನು ನೋಯಿಸಿದರು. ಅವಾಚ್ಯ ಶಬ್ದ ಬಳಕೆ ಮಾಡಿದರು.

ಕಳೆದ ವಾರ ಎಲಿಮಿನೇಟ್ ಆಗಿದ್ದರೂ ಭಾಗ್ಯಶ್ರೀ ಅವರು ಉಳಿದುಕೊಂಡರು. ಜನರ ಕೋರಿಕೆ ಮೇರೆಗೆ ಈ ವಾರ ಎಲಿಮಿನೇಷನ್ ಇರಲ್ಲ ಎಂದು ಸುದೀಪ್ ಘೋಷಿಸಿದರು. ಈ ವಿಚಾರ ಇಟ್ಟುಕೊಂಡು ಭಾಗ್ಯಶ್ರೀಗೆ ನೋಯಿಸಿದ್ದಾರೆ ವಿನಯ್. ‘ಅವರು ದಸರಾ ಹಬ್ಬದ ಕಾರಣಕ್ಕೆ ಉಳಿದುಕೊಂಡರು. ಇಲ್ಲದಿದ್ದರೆ ಎಲಿಮಿನೇಟ್ ಆಗುತ್ತಿದ್ದರು’ ಎಂದಿದ್ದರು. ಇದು ಭಾಗ್ಯಶ್ರೀಗೆ ನೋವು ತಂದಿತ್ತು. ಅವರು ಸಾಕಷ್ಟು ಕಣ್ಣೀರು ಹಾಕಿದರು.

ಇನ್ನು, ಸಂಗೀತಾ ಹಾಗೂ ತನಿಷಾ ವಿಚಾರದಲ್ಲಿ ಅವರು ಏಕವಚನ ಬಳಕೆ ಮಾಡಿದ್ದರು. ‘ಗಂಡಸರ ರೀತಿ ಆಡು, ಬಳೆ ಹಾಕಿಕೊಂಡವರ ರೀತಿ ಆಡಬೇಡ’ ಎಂದು ಮಹಿಳೆಯರಿಗೆ ಅವಮಾನ ಮಾಡಿದ್ದರು. ಈ ವಿಚಾರದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ಆಗಿತ್ತು.

ಇದನ್ನೂ ಓದಿ: ಬಿಗ್ ಬಾಸ್ ಎಫೆಕ್ಟ್: ‘ಸೀತಾ ರಾಮ’ ಧಾರಾವಾಹಿ ಟಿಆರ್​ಪಿಯಲ್ಲಿ ಇಳಿಕೆ; ಇಲ್ಲಿದೆ ವಿವರ

ಟಾಸ್ಕ್​ ಎಲ್ಲವೂ ಮುಗಿದ ಬಳಿಕ ವಿನಯ್ ಗೌಡ ಅವರು ಕ್ಷಮೆ ಕೇಳಿದರು. ‘ನನ್ನಿಂದ ತಪ್ಪಾಗಿದ್ದರೆ, ನಾನು ಕೆಟ್ಟ ಶಬ್ದ ಬಳಕೆ ಮಾಡಿದರೆ ನಮ್ಮ ಮನೆತನದವರಿಗೆ ಹಾಗೂ ಸಂಗೀತಾ ಮನೆತನದವರಿಗೆ ಕ್ಷಮೆ ಕೇಳುತ್ತೇನೆ’ ಎಂದಿದ್ದಾರೆ ವಿನಯ್.  ಈ ಕ್ಷಮೆಯನ್ನು ನಾವು ಒಪ್ಪಲ್ಲ ಎಂದಿದ್ದಾರೆ ಪ್ರೇಕ್ಷಕರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:41 am, Fri, 3 November 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?