AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vinay Gowda: ಬಿಗ್​ ಬಾಸ್​ ಮನೆಯಲ್ಲಿ ಕ್ಯಾಪ್ಟನ್​ ಆದ ವಿನಯ್​ ಗೌಡ; ಯಾರಿಗೆಲ್ಲ ಕಾದಿದೆ ಸಂಕಷ್ಟ?

Bigg Boss Kannada: ವಿನಯ್​ ಗೌಡ ಅವರು ಬಿಗ್​ ಬಾಸ್​ ಮನೆಯಲ್ಲಿ ಹಲವರ ಜೊತೆ ಕಿರಿಕ್​ ಮಾಡಿಕೊಂಡಿದ್ದಾರೆ. ಬಹುತೇಕರೊಂದಿಗೆ ಅವರು ಜಗಳ ಮಾಡಿಕೊಂಡು ಕೆಂಗಣ್ಣಿಗೆ ಗುರಿ ಆಗಿದ್ದಾರೆ. ಇದರ ಬೆನ್ನಲ್ಲೇ ಅವರಿಗೆ ಕ್ಯಾಪ್ಟನ್​ ಆಗುವ ಅವಕಾಶ ಸಿಕ್ಕಿದೆ. ಇದರಿಂದಾಗಿ ದೊಡ್ಮನೆಯಲ್ಲಿ ಅವರಿಗೆ ಒಂದಷ್ಟು ಅಧಿಕಾರ ಸಿಕ್ಕಂತಾಗಿದ್ದು, ಬೇರೆಯವರ ಮೇಲೆ ಇದು ಪರಿಣಾಮ ಬೀರಬಹುದು.

Vinay Gowda: ಬಿಗ್​ ಬಾಸ್​ ಮನೆಯಲ್ಲಿ ಕ್ಯಾಪ್ಟನ್​ ಆದ ವಿನಯ್​ ಗೌಡ; ಯಾರಿಗೆಲ್ಲ ಕಾದಿದೆ ಸಂಕಷ್ಟ?
ವಿನಯ್​ ಗೌಡ
ಮದನ್​ ಕುಮಾರ್​
|

Updated on: Nov 03, 2023 | 1:09 PM

Share

ಕಿರುತೆರೆ ನಟ ವಿನಯ್​ ಗೌಡ ಅವರು ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ (Bigg Boss Kannada Season 10) ಶೋನಲ್ಲಿ ಸ್ಪರ್ಧಿಸುತ್ತಿದ್ದಾರೆ. ರಫ್​ ಆ್ಯಂಡ್​ ಟಫ್​ ಸ್ವಭಾವದಿಂದ ಅವರು ಗುರುತಿಸಿಕೊಂಡಿದ್ದಾರೆ. ಸೀರಿಯಲ್​ಗಳಲ್ಲಿ ಕಾಣಿಸಿಕೊಂಡಾಗ ಅವರ ನಿಜವಾದ ವ್ಯಕ್ತಿತ್ವ ಹೇಗೆ ಎಂಬುದು ಗೊತ್ತಾಗುತ್ತಿರಲಿಲ್ಲ. ಆದರೆ ಬಿಗ್​ ಬಾಸ್​ (BBK 10) ಮನೆಯೊಳಗೆ ಅವರ ಅಸಲಿ ಸ್ವಭಾವ ಬಹಿರಂಗ ಆಗಿದೆ. ಎಲ್ಲರ ಮೇಲೂ ಅವರು ಕೂಗಾಡುತ್ತಾರೆ. ಜೋರು ಧ್ವನಿಯಲ್ಲಿ ಹೆದರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅಲ್ಲದೇ ವಿನಯ್​ ಗೌಡ (Vinay Gowda) ಅವರಿಗೆ ಮಾತಿನ ಮೇಲೆ ಹಿಡಿತ ಇಲ್ಲ ಎಂಬ ಆರೋಪ ಕೂಡ ಇದೆ. ಈ ಎಲ್ಲ ಕಾರಣಕ್ಕಾಗಿ ಅವರಿಗೆ ವಿರೋಧ ವ್ಯಕ್ತವಾಗುತ್ತಿದೆ. ಎಲ್ಲ ವಿರೋಧದ ನಡುವೆಯೂ ಅವರು ಕ್ಯಾಪ್ಟನ್​ ಆಗಿದ್ದಾರೆ. ಹಾಗಾಗಿ ಇನ್ನುಳಿದ ಸ್ಪರ್ಧಿಗಳ ಪೈಕಿ ಕೆಲವರಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

ವಿನಯ್​ ಅವರ ಜೊತೆ ಸಂಗೀತಾ ಶೃಂಗೇರಿ ಈಗಾಗಲೇ ಕಿರಿಕ್​ ಮಾಡಿಕೊಂಡಿದ್ದಾರೆ. ಮೊದಲಿನಿಂದಲೂ ಅವರಿಬ್ಬರ ನಡುವೆ ಜಗಳ ಆಗುತ್ತಲೇ ಇದೆ. ಟಾಸ್ಕ್ ವಿಚಾರದಲ್ಲಿ ಅವರಿಬ್ಬರು ಏಕವಚನದಲ್ಲಿ ಬೈಯ್ದುಕೊಂಡಿದ್ದಾರೆ. ಹಾಗಾಗಿ ಸಂಗೀತಾ ಶೃಂಗೇರಿ ಅವರನ್ನು ವಿನಯ್​ ಟಾರ್ಗೆಟ್​ ಮಾಡಬಹುದು. ಅಲ್ಲದೇ, ಇತ್ತೀಚೆಗಿನ ಹಳ್ಳಿ ಟಾಸ್ಕ್​ ವೇಳೆ ನಟಿ ತನಿಷಾ ಕುಪ್ಪಂಡ ಕೂಡ ವಿನಯ್​ ಜೊತೆ ಜಗಳ ಮಾಡಿದ್ದಾರೆ. ಆಗ ಅವರಿಬ್ಬರ ನಡುವೆ ಮಾತಿನ ಚಕಮಕಿ ಆಗಿದೆ. ಆದ್ದರಿಂದ ತನಿಶಾ ಕುಪ್ಪಂಡ ವಿಚಾರದಲ್ಲಿ ವಿನಯ್​ ಅವರು ಕಟ್ಟುನಿಟ್ಟಾಗಿ ನಡೆದುಕೊಳ್ಳುವ ಸಾಧ್ಯತೆ ಇದೆ.

ಡ್ರೋನ್​ ಪ್ರತಾಪ್​ ಅವರನ್ನು ವಿನಯ್​ ಗೌಡ ಅವರು ಈಗಾಗಲೇ ಟಾರ್ಗೆಟ್​ ಮಾಡಿದ್ದಾರೆ. ಪದೇ ಪದೇ ಪ್ರತಾಪ್​ ಅವರನ್ನು ವಿನಯ್​ ಹೀಯಾಳಿಸಿದ್ದಾರೆ. ಇತ್ತೀಚೆಗೆ ನಾಮಿನೇಷನ್​ ಪಾಸ್​ ಪಡೆದುಕೊಂಡಿದ್ದ ಪ್ರತಾಪ್​ ಅವರು ಬಹುತೇಕ ಮಹಿಳಾ ಸದಸ್ಯರನ್ನೇ ಸೇವ್​ ಮಾಡಿದರು. ಇದು ವಿನಯ್ ಅವರಿಗೆ ಹಿಡಿಸಲಿಲ್ಲ. ಹೀಗೆಯೇ ಆಗುತ್ತದೆ ಎಂದು ಅವರು ಮೊದಲೇ ಊಹಿಸಿದ್ದರು. ಪ್ರತಾಪ್​ ಅವರ ಬುದ್ಧಿಯನ್ನು ವಿನಯ್​ ಟೀಕಿಸುತ್ತಲೇ ಬಂದಿದ್ದಾರೆ. ಹಾಗಾಗಿ ಅವರ ಕ್ಯಾಪ್ಟೆನ್ಸಿಯಲ್ಲಿ ಪ್ರತಾಪ್​ಗೆ ಕಷ್ಟ ಆಗಬಹುದು.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ವಿನಯ್​ ಗೌಡ ಕಾಲು ಇಟ್ಟಲ್ಲೆಲ್ಲ ಬರೀ ಜಗಳ

ಮೊದಲೇ ಹೇಳಿದಂತೆ ಸಂಗೀತಾ ಶೃಂಗೇರಿ ಮತ್ತು ವಿನಯ್​ ಗೌಡ ನಡುವೆ ವೈರತ್ವ ಮೂಡಿದೆ. ಕಾರ್ತಿಕ್​ ಮಹೇಶ್​ ಅವರು ಸಂಗೀತಾ ಜೊತೆ ಚೆನ್ನಾಗಿದ್ದಾರೆ. ಹಲವು ಸಂದರ್ಭಗಳಲ್ಲಿ ಅವರು ಸಂಗೀತಾಗೆ ಬೆಂಬಲ ನೀಡುತ್ತಿದ್ದಾರೆ. ಈ ಕಾರಣದಿಂದಲೇ ಕಾರ್ತಿಕ್​ ಅವರನ್ನು ಕಂಡರೆ ವಿನಯ್​ಗೆ ಅಸಮಾಧಾನ ಇದೆ. ಅಲ್ಲದೇ ತಮ್ಮ ಎದುರಿಗೆ ಇರುವ ಟಫ್​ ಸ್ಪರ್ಧಿ ಎಂದು ಕಾರ್ತಿಕ್​ರನ್ನು ಅವರು ಪರಿಗಣಿಸುತ್ತಾರೆ. ಆದ್ದರಿಂದ ಕಾರ್ತಿಕ್​ ಅವರಿಗೂ ಈ ವಾರದ ಚಟುವಟಿಕೆಗಳು ಸ್ಪಲ್ಪ ಟಫ್​ ಆಗಬಹುದು. ಮೊದಲು ತಪ್ಪು ಮಾಡಿ, ಮನಬಂದಂತೆ ಮಾತನಾಡಿ, ನಂತರ ಕ್ಷಮೆ ಕೇಳುವುದನ್ನು ವಿನಯ್​ ರೂಢಿಸಿಕೊಂಡಿದ್ದಾರೆ. ಈಗ ಅವರ ಕೈಗೆ ಕ್ಯಾಪ್ಟೆನ್ಸಿ ಸಿಕ್ಕಿರುವುದರಿಂದ ಅವರ ಈ ವರ್ತನೆ ಇನ್ನಷ್ಟು ಹೆಚ್ಚಾದರೂ ಅಚ್ಚರಿ ಏನಿಲ್ಲ. ‘ಕಲರ್ಸ್​ ಕನ್ನಡ’ ವಾಹಿನಿಯಲ್ಲಿ ಈ ಶೋ ಪ್ರಸಾರ ಆಗುತ್ತಿದೆ. ಜಿಯೋ ಸಿನಿಮಾದಲ್ಲಿ ಉಚಿತವಾಗಿ ವೀಕ್ಷಿಸಬಹುದು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ