AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದವೇರಿದ ಆನೆಯಂತೆ ವರ್ತಿಸುತ್ತಿದ್ದಾರೆ ವಿನಯ್; ಸಿಟ್ಟಾದ ಮನೆಮಂದಿ

ವಿನಯ್ ಗೌಡ ಅವರು ಮೊದಲ ವಾರ ಸಂಗೀತಾ ಶೃಂಗೇರಿ ವಿರುದ್ಧ ತಿರುಗಿಬಿದ್ದರು. ಅವರನ್ನು ಹೀಯಾಳಿಸುತ್ತಲೇ ಬಂದರು. ಆ ಬಳಿಕ ಒಬ್ಬೊಬ್ಬರನ್ನೇ ಟಾರ್ಗೆಟ್ ಮಾಡುತ್ತಾ ಬಂದರು. ಈಗ ಅವರು ಡ್ರೋನ್ ಪ್ರತಾಪ್ ಹಾಗೂ ಭಾಗ್ಯಶ್ರೀ ಅವರನ್ನು ಟಾರ್ಗೆಟ್ ಮಾಡಿದಂತಿದೆ.

ಮದವೇರಿದ ಆನೆಯಂತೆ ವರ್ತಿಸುತ್ತಿದ್ದಾರೆ ವಿನಯ್; ಸಿಟ್ಟಾದ ಮನೆಮಂದಿ
ವಿನಯ್ ಗೌಡ
ರಾಜೇಶ್ ದುಗ್ಗುಮನೆ
|

Updated on:Nov 01, 2023 | 8:01 AM

Share

ಬಿಗ್ ಬಾಸ್ ಕನ್ನಡ ಸೀಸನ್​ 10’ರಲ್ಲಿ ವಿನಯ್​ ಗೌಡ (Vinay Gowda) ಅವರ ವರ್ತನೆ ಕೆಲವರಿಗೆ ಇಷ್ಟವಾಗುತ್ತಿಲ್ಲ. ವೀಕ್ಷಕರಿಂದ ಅವರಿಗೆ ಆನೆ ಎಂಬ ಬಿರುದು ಸಿಕ್ಕಿತ್ತು. ಅವರಿಗೆ ಯಾರೂ ಸರಿಸಾಟಿ ಇಲ್ಲ ಎನ್ನುವ ಅರ್ಥದಲ್ಲಿ ಇದನ್ನು ನೀಡಲಾಗಿತ್ತು. ಈಗ ಈ ಆನೆಗೆ ಮದವೇರಿದಂತಿದೆ. ಅವರು ಮನೆಯಲ್ಲಿ ಎಲ್ಲರ ಮೇಲೂ ಕೂಗಾಡುತ್ತಿದ್ದಾರೆ. ಕಳೆದವಾರದಂತೆ ಅದು ಈ ವಾರವೂ ಮುಂದುವರಿದಿದೆ. ಅವರಿಗೆ ‘ನಾನೇ ಎಲ್ಲವೂ’ ಎಂಬ ಅಹಂ ಬಂದಿದೆ ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ವಿನಯ್ ಗೌಡ ಅವರು ಮೊದಲ ವಾರ ಸಂಗೀತಾ ಶೃಂಗೇರಿ ವಿರುದ್ಧ ತಿರುಗಿಬಿದ್ದರು. ಅವರನ್ನು ಹೀಯಾಳಿಸುತ್ತಲೇ ಬಂದರು. ಆ ಬಳಿಕ ಒಬ್ಬೊಬ್ಬರನ್ನೇ ಟಾರ್ಗೆಟ್ ಮಾಡುತ್ತಾ ಬಂದರು. ಈಗ ಅವರು ಡ್ರೋನ್ ಪ್ರತಾಪ್ ಹಾಗೂ ಭಾಗ್ಯಶ್ರೀ ಅವರನ್ನು ಟಾರ್ಗೆಟ್ ಮಾಡಿದಂತಿದೆ. ಇಬ್ಬರ ಬಗ್ಗೆ ಅವರು ಸಾಕಷ್ಟು ಟೀಕೆ ಮಾಡುತ್ತಿದ್ದಾರೆ. ಇದು ವೀಕ್ಷಕರಿಗೆ ಇಷ್ಟವಾಗುತ್ತಿಲ್ಲ.

ಮನೆಯ ಎಲ್ಲಾ ಕಡೆಗಳಲ್ಲಿ ಬಲೂನ್ ಇಡಲಾಗಿತ್ತು. ಕೆಲವೇ ಕೆಲವು ಬಲೂನ್​​ಗಳಲ್ಲಿ ನಾಮಿನೇಷನ್ ಚೀಟಿ ಇತ್ತು. ಮೂರು ಚೀಟಿ ಸಿಕ್ಕಿದ್ದು ಡ್ರೋನ್ ಪ್ರತಾಪ್​ಗೆ. ಇದನ್ನು ನೋಡಿ ವಿನಯ್ ಹೊಟ್ಟೆ ಉರಿದುಕೊಂಡರು. ಇನ್ನು ನಾಮಿನೇಷನ್ ಮಾಡುವಾಗ ವಿನಯ್ ಹೆಸರನ್ನು ಆಯ್ಕೆ ಮಾಡಿಕೊಂಡರು ಪ್ರತಾಪ್. ಇದು ಕೂಡ ವಿನಯ್ ಸಿಟ್ಟಿಗೆ ಕಾರಣ ಆಯ್ತು.

ನಾಮಿನೇಷನ್ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ವಿನಯ್ ಅವರು ಭಾಗ್ಯಶ್ರೀ ವಿರುದ್ಧ ಮೊದಲು ಸಿಟ್ಟಾದರು. ಅವರು ಕಣ್ಣೀರನ್ನು ಡ್ರಾಮಾ ಎಂದು ಕರೆದರು. ಅವರ ಮಾತುಗಳನ್ನು ಸೀರಿಯಲ್ ಡೈಲಾಗ್ ಎಂದು ಕರೆದರು. ಇದು ಭಾಗ್ಯಶ್ರೀಗೆ ಬೇಸರ ಮೂಡಿಸಿತು. ‘ನಾವಿಬ್ಬರೂ ಧಾರಾವಾಹಿಯಿಂದಲೇ ಊಟ ಮಾಡಿದ್ದೀವಿ ಅನ್ನೋದು ನೆನಪಿರಲಿ’ ಎಂದರು ಭಾಗ್ಯಶ್ರೀ. ಇದನ್ನು ಕೇಳಿದ ವಿನಯ್ ‘ನಾನು ಬೇರೆ ಕಡೆಯಿಂದಲೂ ಊಟ ಮಾಡಿದ್ದೇನೆ’ ಎಂದರು. ‘ಕಳೆದ ವಾರ ದಸರಾ ಇತ್ತು ಅದಕ್ಕೆ ಅವರು ಉಳಿದುಕೊಂಡರು’ ಎಂದು ವಿನಯ್ ಹೇಳಿದ ಮಾತು ಭಾಗ್ಯಶ್ರೀಗೆ ಸಾಕಷ್ಟು ಬೇಸರ ಮೂಡಿಸಿತು.

ಇದನ್ನೂ ಓದಿ: ನಾಮಿನೇಷನ್ ನಿಂದ ಜಗಳ, ವಿನಯ್ ಅಬ್ಬರ, ತುಕಾಲಿ, ಭಾಗ್ಯಶ್ರೀ ಕಣ್ಣೀರು, ನಮ್ರತಾ ಜಗಳ

ವಿನಯ್ ಮನೆಯಲ್ಲಿ ಆಡುತ್ತಿರುವ ಈ ರೀತಿಯ ಮಾತುಗಳು ಪ್ರೇಕ್ಷಕರಿಗೆ ಇಷ್ಟವಾಗುತ್ತಿಲ್ಲ. ಕಳೆದ ವಾರ ಅವರು ಸಾಕಷ್ಟು ರೂಲ್ಸ್ ಬ್ರೇಕ್ ಮಾಡಿದ್ದರು. ಈ ವಿಚಾರದಲ್ಲಿ ವಿನಯ್ ಅವರನ್ನು ಸುದೀಪ್ ತರಾಟೆ ತೆಗೆದುಕೊಳ್ಳುತ್ತಾರೆ ಎಂದು ವೀಕ್ಷಕರು ಭಾವಿಸಿದ್ದರು. ಆದರೆ, ಆ ರೀತಿ ಆಗಲೇ ಇಲ್ಲ. ಈ ವಾರವಾದರೂ ವಿನಯ್​​ಗೆ ಕಿಚ್ಚ ಕ್ಲಾಸ್ ತೆಗೆದುಕೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:39 am, Wed, 1 November 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ