ವಿನಯ್ ಗೌಡ ಬರ್ತ್​ಡೇ ಸೆಲೆಬ್ರೇಷನ್​ನಲ್ಲಿ ಆನೆಯೇ ಹೈಲೈಟ್; ಸಂಗೀತಾ ಗೈರು ಹಾಜರಿ

ವಿನಯ್ ಗೌಡ ಅವರು ಪತ್ನಿ, ಮಗ ಜೊತೆಗೆ ಬಿಗ್ ಬಾಸ್ ಫ್ಯಾಮಿಲಿಯ ಕೆಲವರು ಆಗಮಿಸಿದ್ದರು. ‘ಬಿಗ್ ಬಾಸ್’ನಲ್ಲಿ ಆಪ್ತವಾಗಿದ್ದ ಕಾರ್ತಿಕ್ ಮಹೇಶ್, ಪವಿ ಪೂವಪ್ಪ, ಮೈಕಲ್ ಅಜಯ್, ನೀತು ವನಜಾಕ್ಷಿ, ಸ್ನೇಹಿತ್ ಗೌಡ, ನಮ್ರತಾ ಗೌಡ, ದಿವ್ಯಾ ಉರುಡುಗ ಮೊದಲಾದವರು ಭಾಗಿ ಆಗಿದ್ದರು.

ವಿನಯ್ ಗೌಡ ಬರ್ತ್​ಡೇ ಸೆಲೆಬ್ರೇಷನ್​ನಲ್ಲಿ ಆನೆಯೇ ಹೈಲೈಟ್; ಸಂಗೀತಾ ಗೈರು ಹಾಜರಿ
ವಿನಯ್ ಬರ್ತ್​ಡೇ
Follow us
| Updated By: ರಾಜೇಶ್ ದುಗ್ಗುಮನೆ

Updated on: Mar 13, 2024 | 10:48 AM

ವಿನಯ್ ಗೌಡ (Vinay Gowda) ಅವರು ‘ಬಿಗ್ ಬಾಸ್’ ಮನೆಯಲ್ಲಿ ಇದ್ದಾಗ ಆನೆ ಎಂದೇ ಫೇಮಸ್ ಆಗಿದ್ದರು. ಮೊದಲ ಕೆಲವು ವಾರಗಳಲ್ಲಿ ಅವರು ಆಟ ಆಡುತ್ತಿದ್ದ ರೀತಿ ನೋಡಿ ವೀಕ್ಷಕರು ಅವರಿಗೆ ‘ಆನೆ’ ಪಟ್ಟ ಕೊಟ್ಟರು. ನಂತರ ಅವರು ಆನೆ ಎಂದೇ ಫೇಮಸ್ ಆದರು. ಬಿಗ್ ಬಾಸ್​ನಿಂದ ಹೊರ ಬಂದ ಬಳಿಕವೂ ಅವರಿಗೆ ಆನೆ ಪಟ್ಟ ಮುಂದುವರಿದಿದೆ. ಇತ್ತೀಚೆಗೆ ವಿನಯ್ ಗೌಡ ಬರ್ತ್​ಡೇ ಆಚರಿಸಿಕೊಂಡಿದ್ದಾರೆ. ಕೇಕ್ ಮೇಲೆ ಆನೆ ಮೂರ್ತಿ ಇತ್ತು. ಪೋಸ್ಟರ್​ನಲ್ಲೂ ಆನೆ ಚಿತ್ರ ಹೈಲೈಟ್ ಆಗಿದೆ ಅನ್ನೋದು ವಿಶೇಷ.

ವಿನಯ್ ಗೌಡ ಅವರು ಇತ್ತೀಚೆಗೆ ಖಾಸಗಿ ರೆಸ್ಟೋರೆಂಟ್ ಒಂದರಲ್ಲಿ ಬರ್ತ್​ಡೇ ಸೆಲೆಬ್ರೇಷನ್ ಮಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರ ಪತ್ನಿ ಹಾಗೂ ಮಗ ಇದ್ದರು. ಇದರ ಜೊತೆಗೆ ಬಿಗ್ ಬಾಸ್ ಫ್ಯಾಮಿಲಿಯ ಕೆಲವರು ಆಗಮಿಸಿದ್ದರು. ‘ಬಿಗ್ ಬಾಸ್’ನಲ್ಲಿ ಆಪ್ತವಾಗಿದ್ದ ಕಾರ್ತಿಕ್ ಮಹೇಶ್, ಪವಿ ಪೂವಪ್ಪ, ಮೈಕಲ್ ಅಜಯ್, ನೀತು ವನಜಾಕ್ಷಿ, ಸ್ನೇಹಿತ್ ಗೌಡ, ನಮ್ರತಾ ಗೌಡ, ದಿವ್ಯಾ ಉರುಡುಗ ಮೊದಲಾದವರು ಭಾಗಿ ಆಗಿದ್ದರು.

‘ಬಿಗ್ ಬಾಸ್​’ನಲ್ಲಿ ವಿನಯ್ ಗೌಡ ಹಾಗೂ ಸಂಗೀತಾ ಶೃಂಗೇರಿ ಮಧ್ಯೆ ಕಿರಿಕ್ ಆಗಿತ್ತು. ಈ ಕಾರಣಕ್ಕೆ ಆರಂಭದಿಂದ ಕೊನೆಯವರೆಗೂ ವಿನಯ್​ನ ವಿರೋಧಿಸುತ್ತಲೇ ಬಂದರು ಸಂಗೀತಾ. ಬಿಗ್ ಬಾಸ್​ನಿಂದ ಹೊರ ಹೋದ ಬಳಿಕವೂ ನಾನು ವಿನಯ್​ನ ಭೇಟಿ ಮಾಡಲ್ಲ ಎಂದು ಹೇಳಿದ್ದರು. ಅದೇ ರೀತಿ ಅವರು ಬರ್ತ್​ಡೇ ಆಗಮಿಸಿಲ್ಲ.

ಇದನ್ನೂ ಓದಿ: ಮುಗಿಯುತ್ತಿಲ್ಲ ಬಿಗ್ ಬಾಸ್ ವಿನ್ನರ್ ರಂಪಾಟ; ಯೂಟ್ಯೂಬರ್​ ಮೇಲೆ ಹಲ್ಲೆ, ವಿಡಿಯೋ ವೈರಲ್

ಬರ್ತ್​ಡೇ ಸೆಲೆಬ್ರೇಷನ್ ಹೇಗಿತ್ತು ಎಂಬುದನ್ನು ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದಾರೆ ವಿನಯ್ ಗೌಡ, ಕಾರ್ತಿಕ್, ನೀತು ಮೊದಲಾದವರು ಹೂಗುಚ್ಛ ನೀಡಿ ವಿನಯ್​ನ ಸ್ವಾಗತಿಸಿದ್ದಾರೆ. ‘ಆನೆ ಸರ್’ ಎಂದು ಕೆಲವರು ಈ ವಿಡಿಯೋಗೆ ಕಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ‘ಬಿಗ್ ಬಾಸ್ ಆನೆ’ ಎಂದು ಬರೆದುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ
ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ