AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನಯ್ ಗೌಡ ಬರ್ತ್​ಡೇ ಸೆಲೆಬ್ರೇಷನ್​ನಲ್ಲಿ ಆನೆಯೇ ಹೈಲೈಟ್; ಸಂಗೀತಾ ಗೈರು ಹಾಜರಿ

ವಿನಯ್ ಗೌಡ ಅವರು ಪತ್ನಿ, ಮಗ ಜೊತೆಗೆ ಬಿಗ್ ಬಾಸ್ ಫ್ಯಾಮಿಲಿಯ ಕೆಲವರು ಆಗಮಿಸಿದ್ದರು. ‘ಬಿಗ್ ಬಾಸ್’ನಲ್ಲಿ ಆಪ್ತವಾಗಿದ್ದ ಕಾರ್ತಿಕ್ ಮಹೇಶ್, ಪವಿ ಪೂವಪ್ಪ, ಮೈಕಲ್ ಅಜಯ್, ನೀತು ವನಜಾಕ್ಷಿ, ಸ್ನೇಹಿತ್ ಗೌಡ, ನಮ್ರತಾ ಗೌಡ, ದಿವ್ಯಾ ಉರುಡುಗ ಮೊದಲಾದವರು ಭಾಗಿ ಆಗಿದ್ದರು.

ವಿನಯ್ ಗೌಡ ಬರ್ತ್​ಡೇ ಸೆಲೆಬ್ರೇಷನ್​ನಲ್ಲಿ ಆನೆಯೇ ಹೈಲೈಟ್; ಸಂಗೀತಾ ಗೈರು ಹಾಜರಿ
ವಿನಯ್ ಬರ್ತ್​ಡೇ
TV9 Web
| Edited By: |

Updated on: Mar 13, 2024 | 10:48 AM

Share

ವಿನಯ್ ಗೌಡ (Vinay Gowda) ಅವರು ‘ಬಿಗ್ ಬಾಸ್’ ಮನೆಯಲ್ಲಿ ಇದ್ದಾಗ ಆನೆ ಎಂದೇ ಫೇಮಸ್ ಆಗಿದ್ದರು. ಮೊದಲ ಕೆಲವು ವಾರಗಳಲ್ಲಿ ಅವರು ಆಟ ಆಡುತ್ತಿದ್ದ ರೀತಿ ನೋಡಿ ವೀಕ್ಷಕರು ಅವರಿಗೆ ‘ಆನೆ’ ಪಟ್ಟ ಕೊಟ್ಟರು. ನಂತರ ಅವರು ಆನೆ ಎಂದೇ ಫೇಮಸ್ ಆದರು. ಬಿಗ್ ಬಾಸ್​ನಿಂದ ಹೊರ ಬಂದ ಬಳಿಕವೂ ಅವರಿಗೆ ಆನೆ ಪಟ್ಟ ಮುಂದುವರಿದಿದೆ. ಇತ್ತೀಚೆಗೆ ವಿನಯ್ ಗೌಡ ಬರ್ತ್​ಡೇ ಆಚರಿಸಿಕೊಂಡಿದ್ದಾರೆ. ಕೇಕ್ ಮೇಲೆ ಆನೆ ಮೂರ್ತಿ ಇತ್ತು. ಪೋಸ್ಟರ್​ನಲ್ಲೂ ಆನೆ ಚಿತ್ರ ಹೈಲೈಟ್ ಆಗಿದೆ ಅನ್ನೋದು ವಿಶೇಷ.

ವಿನಯ್ ಗೌಡ ಅವರು ಇತ್ತೀಚೆಗೆ ಖಾಸಗಿ ರೆಸ್ಟೋರೆಂಟ್ ಒಂದರಲ್ಲಿ ಬರ್ತ್​ಡೇ ಸೆಲೆಬ್ರೇಷನ್ ಮಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರ ಪತ್ನಿ ಹಾಗೂ ಮಗ ಇದ್ದರು. ಇದರ ಜೊತೆಗೆ ಬಿಗ್ ಬಾಸ್ ಫ್ಯಾಮಿಲಿಯ ಕೆಲವರು ಆಗಮಿಸಿದ್ದರು. ‘ಬಿಗ್ ಬಾಸ್’ನಲ್ಲಿ ಆಪ್ತವಾಗಿದ್ದ ಕಾರ್ತಿಕ್ ಮಹೇಶ್, ಪವಿ ಪೂವಪ್ಪ, ಮೈಕಲ್ ಅಜಯ್, ನೀತು ವನಜಾಕ್ಷಿ, ಸ್ನೇಹಿತ್ ಗೌಡ, ನಮ್ರತಾ ಗೌಡ, ದಿವ್ಯಾ ಉರುಡುಗ ಮೊದಲಾದವರು ಭಾಗಿ ಆಗಿದ್ದರು.

‘ಬಿಗ್ ಬಾಸ್​’ನಲ್ಲಿ ವಿನಯ್ ಗೌಡ ಹಾಗೂ ಸಂಗೀತಾ ಶೃಂಗೇರಿ ಮಧ್ಯೆ ಕಿರಿಕ್ ಆಗಿತ್ತು. ಈ ಕಾರಣಕ್ಕೆ ಆರಂಭದಿಂದ ಕೊನೆಯವರೆಗೂ ವಿನಯ್​ನ ವಿರೋಧಿಸುತ್ತಲೇ ಬಂದರು ಸಂಗೀತಾ. ಬಿಗ್ ಬಾಸ್​ನಿಂದ ಹೊರ ಹೋದ ಬಳಿಕವೂ ನಾನು ವಿನಯ್​ನ ಭೇಟಿ ಮಾಡಲ್ಲ ಎಂದು ಹೇಳಿದ್ದರು. ಅದೇ ರೀತಿ ಅವರು ಬರ್ತ್​ಡೇ ಆಗಮಿಸಿಲ್ಲ.

ಇದನ್ನೂ ಓದಿ: ಮುಗಿಯುತ್ತಿಲ್ಲ ಬಿಗ್ ಬಾಸ್ ವಿನ್ನರ್ ರಂಪಾಟ; ಯೂಟ್ಯೂಬರ್​ ಮೇಲೆ ಹಲ್ಲೆ, ವಿಡಿಯೋ ವೈರಲ್

ಬರ್ತ್​ಡೇ ಸೆಲೆಬ್ರೇಷನ್ ಹೇಗಿತ್ತು ಎಂಬುದನ್ನು ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದಾರೆ ವಿನಯ್ ಗೌಡ, ಕಾರ್ತಿಕ್, ನೀತು ಮೊದಲಾದವರು ಹೂಗುಚ್ಛ ನೀಡಿ ವಿನಯ್​ನ ಸ್ವಾಗತಿಸಿದ್ದಾರೆ. ‘ಆನೆ ಸರ್’ ಎಂದು ಕೆಲವರು ಈ ವಿಡಿಯೋಗೆ ಕಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ‘ಬಿಗ್ ಬಾಸ್ ಆನೆ’ ಎಂದು ಬರೆದುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ