AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನಯ್ ಗೌಡ ಬರ್ತ್​ಡೇ ಸೆಲೆಬ್ರೇಷನ್​ನಲ್ಲಿ ಆನೆಯೇ ಹೈಲೈಟ್; ಸಂಗೀತಾ ಗೈರು ಹಾಜರಿ

ವಿನಯ್ ಗೌಡ ಅವರು ಪತ್ನಿ, ಮಗ ಜೊತೆಗೆ ಬಿಗ್ ಬಾಸ್ ಫ್ಯಾಮಿಲಿಯ ಕೆಲವರು ಆಗಮಿಸಿದ್ದರು. ‘ಬಿಗ್ ಬಾಸ್’ನಲ್ಲಿ ಆಪ್ತವಾಗಿದ್ದ ಕಾರ್ತಿಕ್ ಮಹೇಶ್, ಪವಿ ಪೂವಪ್ಪ, ಮೈಕಲ್ ಅಜಯ್, ನೀತು ವನಜಾಕ್ಷಿ, ಸ್ನೇಹಿತ್ ಗೌಡ, ನಮ್ರತಾ ಗೌಡ, ದಿವ್ಯಾ ಉರುಡುಗ ಮೊದಲಾದವರು ಭಾಗಿ ಆಗಿದ್ದರು.

ವಿನಯ್ ಗೌಡ ಬರ್ತ್​ಡೇ ಸೆಲೆಬ್ರೇಷನ್​ನಲ್ಲಿ ಆನೆಯೇ ಹೈಲೈಟ್; ಸಂಗೀತಾ ಗೈರು ಹಾಜರಿ
ವಿನಯ್ ಬರ್ತ್​ಡೇ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Mar 13, 2024 | 10:48 AM

ವಿನಯ್ ಗೌಡ (Vinay Gowda) ಅವರು ‘ಬಿಗ್ ಬಾಸ್’ ಮನೆಯಲ್ಲಿ ಇದ್ದಾಗ ಆನೆ ಎಂದೇ ಫೇಮಸ್ ಆಗಿದ್ದರು. ಮೊದಲ ಕೆಲವು ವಾರಗಳಲ್ಲಿ ಅವರು ಆಟ ಆಡುತ್ತಿದ್ದ ರೀತಿ ನೋಡಿ ವೀಕ್ಷಕರು ಅವರಿಗೆ ‘ಆನೆ’ ಪಟ್ಟ ಕೊಟ್ಟರು. ನಂತರ ಅವರು ಆನೆ ಎಂದೇ ಫೇಮಸ್ ಆದರು. ಬಿಗ್ ಬಾಸ್​ನಿಂದ ಹೊರ ಬಂದ ಬಳಿಕವೂ ಅವರಿಗೆ ಆನೆ ಪಟ್ಟ ಮುಂದುವರಿದಿದೆ. ಇತ್ತೀಚೆಗೆ ವಿನಯ್ ಗೌಡ ಬರ್ತ್​ಡೇ ಆಚರಿಸಿಕೊಂಡಿದ್ದಾರೆ. ಕೇಕ್ ಮೇಲೆ ಆನೆ ಮೂರ್ತಿ ಇತ್ತು. ಪೋಸ್ಟರ್​ನಲ್ಲೂ ಆನೆ ಚಿತ್ರ ಹೈಲೈಟ್ ಆಗಿದೆ ಅನ್ನೋದು ವಿಶೇಷ.

ವಿನಯ್ ಗೌಡ ಅವರು ಇತ್ತೀಚೆಗೆ ಖಾಸಗಿ ರೆಸ್ಟೋರೆಂಟ್ ಒಂದರಲ್ಲಿ ಬರ್ತ್​ಡೇ ಸೆಲೆಬ್ರೇಷನ್ ಮಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರ ಪತ್ನಿ ಹಾಗೂ ಮಗ ಇದ್ದರು. ಇದರ ಜೊತೆಗೆ ಬಿಗ್ ಬಾಸ್ ಫ್ಯಾಮಿಲಿಯ ಕೆಲವರು ಆಗಮಿಸಿದ್ದರು. ‘ಬಿಗ್ ಬಾಸ್’ನಲ್ಲಿ ಆಪ್ತವಾಗಿದ್ದ ಕಾರ್ತಿಕ್ ಮಹೇಶ್, ಪವಿ ಪೂವಪ್ಪ, ಮೈಕಲ್ ಅಜಯ್, ನೀತು ವನಜಾಕ್ಷಿ, ಸ್ನೇಹಿತ್ ಗೌಡ, ನಮ್ರತಾ ಗೌಡ, ದಿವ್ಯಾ ಉರುಡುಗ ಮೊದಲಾದವರು ಭಾಗಿ ಆಗಿದ್ದರು.

‘ಬಿಗ್ ಬಾಸ್​’ನಲ್ಲಿ ವಿನಯ್ ಗೌಡ ಹಾಗೂ ಸಂಗೀತಾ ಶೃಂಗೇರಿ ಮಧ್ಯೆ ಕಿರಿಕ್ ಆಗಿತ್ತು. ಈ ಕಾರಣಕ್ಕೆ ಆರಂಭದಿಂದ ಕೊನೆಯವರೆಗೂ ವಿನಯ್​ನ ವಿರೋಧಿಸುತ್ತಲೇ ಬಂದರು ಸಂಗೀತಾ. ಬಿಗ್ ಬಾಸ್​ನಿಂದ ಹೊರ ಹೋದ ಬಳಿಕವೂ ನಾನು ವಿನಯ್​ನ ಭೇಟಿ ಮಾಡಲ್ಲ ಎಂದು ಹೇಳಿದ್ದರು. ಅದೇ ರೀತಿ ಅವರು ಬರ್ತ್​ಡೇ ಆಗಮಿಸಿಲ್ಲ.

ಇದನ್ನೂ ಓದಿ: ಮುಗಿಯುತ್ತಿಲ್ಲ ಬಿಗ್ ಬಾಸ್ ವಿನ್ನರ್ ರಂಪಾಟ; ಯೂಟ್ಯೂಬರ್​ ಮೇಲೆ ಹಲ್ಲೆ, ವಿಡಿಯೋ ವೈರಲ್

ಬರ್ತ್​ಡೇ ಸೆಲೆಬ್ರೇಷನ್ ಹೇಗಿತ್ತು ಎಂಬುದನ್ನು ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದಾರೆ ವಿನಯ್ ಗೌಡ, ಕಾರ್ತಿಕ್, ನೀತು ಮೊದಲಾದವರು ಹೂಗುಚ್ಛ ನೀಡಿ ವಿನಯ್​ನ ಸ್ವಾಗತಿಸಿದ್ದಾರೆ. ‘ಆನೆ ಸರ್’ ಎಂದು ಕೆಲವರು ಈ ವಿಡಿಯೋಗೆ ಕಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ‘ಬಿಗ್ ಬಾಸ್ ಆನೆ’ ಎಂದು ಬರೆದುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ