AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿ ಹಿಂದೆಂದೂ ಕೊಟ್ಟಿರದ ಆಫರ್​ ಕೊಟ್ಟ ವಿನಯ್ ಗೌಡ

ಟಾಸ್ಕ್ ಕೊಟ್ಟರೆ ವಿನಯ್ ಪೂರ್ಣಗೊಳಿಸುತ್ತಾರೆ ಎನ್ನುವ ಭರವಸೆ ಮನೆಯವರಿಗೆ ಇದೆ. ಈ ಬಗ್ಗೆ ಅವರಿಗೆ ಖುಷಿ ಇದೆ. ಈಗ ಫಿನಾಲೆ ಸಮೀಪಿಸಿದ್ದು, ಅದುವೇ ಅವರಿಗೆ ಮುಳುವಾಗಿದೆ. ಇದನ್ನು ವಿನಯ್ ಹೇಳಿಕೊಂಡಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಹಿಂದೆಂದೂ ಕೊಟ್ಟಿರದ ಆಫರ್​ ಕೊಟ್ಟ ವಿನಯ್ ಗೌಡ
ವಿನಯ್
ರಾಜೇಶ್ ದುಗ್ಗುಮನೆ
|

Updated on:Jan 11, 2024 | 7:40 AM

Share

ವಿನಯ್ ಗೌಡ (Vinay Gowda) ಬಿಗ್ ಬಾಸ್ ಮನೆಯಲ್ಲಿ ಗಮನ ಸೆಳೆಯುತ್ತಿದ್ದಾರೆ. ಅವರು ಆಟದಲ್ಲಿ ಸಾಕಷ್ಟು ಏರಿಳಿತ ಕಂಡಿದ್ದಾರೆ. ಈಗ ಅವರು ಬಿಗ್ ಬಾಸ್ ಮನೆಯಲ್ಲಿರುವ ಸ್ಪರ್ಧಿಗಳಿಗೆ ಒಂದು ದೊಡ್ಡ ಆಫರ್ ನೀಡಿದ್ದಾರೆ. ಆದರೆ, ಈ ಆಫರ್​ನ ಯಾರೂ ಸ್ವೀಕರಿಸಲು ಮುಂದೆ ಬಂದಿಲ್ಲ. ಇದನ್ನು ಒಂದೇ ಮಾತಲ್ಲಿ ಎಲ್ಲರೂ ರಿಜೆಕ್ಟ್ ಮಾಡಿದ್ದಾರೆ. ಇದನ್ನು ನೋಡಿ ವಿನಯ್ ಗೌಡ ಬೇಸರ ಮಾಡಿಕೊಂಡಿದ್ದಾರೆ. ಅಷ್ಟಕ್ಕೂ ಅವರು ನೀಡಿದ ಆಫರ್ ಏನು ಎನ್ನುವ ಬಗ್ಗೆ ಇಲ್ಲಿದೆ ವಿವರ.

ವಿನಯ್ ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಸ್ಟ್ರಾಂಗ್ ಸ್ಪರ್ಧಿ ಆಗಿ ಗುರುತಿಸಿಕೊಂಡಿದ್ದಾರೆ. ಅವರು ಬಹುತೇಕ ಟಾಸ್ಕ್​ಗಳಲ್ಲಿ ಒಳ್ಳೆಯ ಪರ್ಫಾರ್ಮೆನ್ಸ್ ತೋರಿಸಿ ಗೆಲುವು ಕಂಡಿದ್ದಾರೆ. ಹೀಗಾಗಿ ಟಾಸ್ಕ್ ಕೊಟ್ಟರೆ ವಿನಯ್ ಪೂರ್ಣಗೊಳಿಸುತ್ತಾರೆ ಎನ್ನುವ ಭರವಸೆ ಮನೆಯವರಿಗೆ ಇದೆ. ಈ ಬಗ್ಗೆ ಅವರಿಗೆ ಖುಷಿ ಇದೆ. ಈಗ ಫಿನಾಲೆ ಸಮೀಪಿಸಿದ್ದು, ಅದುವೇ ಅವರಿಗೆ ಮುಳುವಾಗಿದೆ. ಇದನ್ನು ವಿನಯ್ ಹೇಳಿಕೊಂಡಿದ್ದಾರೆ.

ಪ್ರತಿ ಸ್ಪರ್ಧಿ ತಮ್ಮ ಮೂರು ಎದುರಾಳಿಗಳನ್ನು ಆಯ್ಕೆ ಮಾಡಿಕೊಂಡು ಟಾಸ್ಕ್ ಆಡಬೇಕು ಎಂಬುದು ಬಿಗ್ ಬಾಸ್ ನಿಯಮದಲ್ಲಿ ಇತ್ತು. ಎಲ್ಲಾ ಸ್ಪರ್ಧಿಗಳು ತಮಗಿಂತ ಕಡಿಮೆ ಸ್ಟ್ರಾಂಗ್ ಯಾರು ಎಂಬುದನ್ನು ನೋಡುತ್ತಾರೆ. ವಿನಯ್ ಗೌಡ ಅವರು ಸ್ಟ್ರಾಂಗ್ ಇರುವ ಕಾರಣ ಅವರನ್ನು ಟಾಸ್ಕ್​ಗೆ ಆಯ್ಕೆ ಮಾಡಿಕೊಳ್ಳುವಷ್ಟು ಧೈರ್ಯ ತೋರಿಸುವುದಿಲ್ಲ. ಇದನ್ನು ಅರಿತ ಅವರು ಸ್ಪರ್ಧಿಗಳಿಗೆ ಆಫರ್ ನೀಡಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಕೊನೆಗೂ ಡ್ರೋನ್ ಪ್ರತಾಪ್ ಬಳಿ ಕ್ಷಮೆ ಕೇಳಿದ ವಿನಯ್ ಗೌಡ

ಬುದ್ಧಿಮತ್ಯೆ ಉಪಯೋಗಿಸಿ ಆಡುವ ಟಾಸ್ಕ್ ಬಂದಿತ್ತು. ಈರೀತಿಯ ಟಾಸ್ಕ್ ಬಂದಾಗ ತಮ್ಮನ್ನು ಆಯ್ಕೆ ಮಾಡಿಕೊಂಡರೆ ಅಂಥವರಿಗೆ 100 ಪಾಯಿಂಟ್ಸ್ ಕೊಡಿಸಲು ವಿನಯ್ ಸಹಾಯ ಮಾಡುತ್ತಾರಂತೆ. ಅವರು ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿಕೊಳ್ಳುತ್ತಾರಂತೆ. ಈ ರೀತಿ ಮ್ಯಾಚ್ ಫಿಕ್ಸಿಂಗ್ ಸಹವಾಸ ಬೇಡ ಎಂದು ಎಲ್ಲರೂ ಸುಮ್ಮನಾಗಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣುತ್ತದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ 24 ಗಂಟೆ ಲೈವ್ ಕೂಡ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:36 am, Thu, 11 January 24

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ