AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿ ಹಿಂದೆಂದೂ ಕೊಟ್ಟಿರದ ಆಫರ್​ ಕೊಟ್ಟ ವಿನಯ್ ಗೌಡ

ಟಾಸ್ಕ್ ಕೊಟ್ಟರೆ ವಿನಯ್ ಪೂರ್ಣಗೊಳಿಸುತ್ತಾರೆ ಎನ್ನುವ ಭರವಸೆ ಮನೆಯವರಿಗೆ ಇದೆ. ಈ ಬಗ್ಗೆ ಅವರಿಗೆ ಖುಷಿ ಇದೆ. ಈಗ ಫಿನಾಲೆ ಸಮೀಪಿಸಿದ್ದು, ಅದುವೇ ಅವರಿಗೆ ಮುಳುವಾಗಿದೆ. ಇದನ್ನು ವಿನಯ್ ಹೇಳಿಕೊಂಡಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಹಿಂದೆಂದೂ ಕೊಟ್ಟಿರದ ಆಫರ್​ ಕೊಟ್ಟ ವಿನಯ್ ಗೌಡ
ವಿನಯ್
ರಾಜೇಶ್ ದುಗ್ಗುಮನೆ
|

Updated on:Jan 11, 2024 | 7:40 AM

Share

ವಿನಯ್ ಗೌಡ (Vinay Gowda) ಬಿಗ್ ಬಾಸ್ ಮನೆಯಲ್ಲಿ ಗಮನ ಸೆಳೆಯುತ್ತಿದ್ದಾರೆ. ಅವರು ಆಟದಲ್ಲಿ ಸಾಕಷ್ಟು ಏರಿಳಿತ ಕಂಡಿದ್ದಾರೆ. ಈಗ ಅವರು ಬಿಗ್ ಬಾಸ್ ಮನೆಯಲ್ಲಿರುವ ಸ್ಪರ್ಧಿಗಳಿಗೆ ಒಂದು ದೊಡ್ಡ ಆಫರ್ ನೀಡಿದ್ದಾರೆ. ಆದರೆ, ಈ ಆಫರ್​ನ ಯಾರೂ ಸ್ವೀಕರಿಸಲು ಮುಂದೆ ಬಂದಿಲ್ಲ. ಇದನ್ನು ಒಂದೇ ಮಾತಲ್ಲಿ ಎಲ್ಲರೂ ರಿಜೆಕ್ಟ್ ಮಾಡಿದ್ದಾರೆ. ಇದನ್ನು ನೋಡಿ ವಿನಯ್ ಗೌಡ ಬೇಸರ ಮಾಡಿಕೊಂಡಿದ್ದಾರೆ. ಅಷ್ಟಕ್ಕೂ ಅವರು ನೀಡಿದ ಆಫರ್ ಏನು ಎನ್ನುವ ಬಗ್ಗೆ ಇಲ್ಲಿದೆ ವಿವರ.

ವಿನಯ್ ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಸ್ಟ್ರಾಂಗ್ ಸ್ಪರ್ಧಿ ಆಗಿ ಗುರುತಿಸಿಕೊಂಡಿದ್ದಾರೆ. ಅವರು ಬಹುತೇಕ ಟಾಸ್ಕ್​ಗಳಲ್ಲಿ ಒಳ್ಳೆಯ ಪರ್ಫಾರ್ಮೆನ್ಸ್ ತೋರಿಸಿ ಗೆಲುವು ಕಂಡಿದ್ದಾರೆ. ಹೀಗಾಗಿ ಟಾಸ್ಕ್ ಕೊಟ್ಟರೆ ವಿನಯ್ ಪೂರ್ಣಗೊಳಿಸುತ್ತಾರೆ ಎನ್ನುವ ಭರವಸೆ ಮನೆಯವರಿಗೆ ಇದೆ. ಈ ಬಗ್ಗೆ ಅವರಿಗೆ ಖುಷಿ ಇದೆ. ಈಗ ಫಿನಾಲೆ ಸಮೀಪಿಸಿದ್ದು, ಅದುವೇ ಅವರಿಗೆ ಮುಳುವಾಗಿದೆ. ಇದನ್ನು ವಿನಯ್ ಹೇಳಿಕೊಂಡಿದ್ದಾರೆ.

ಪ್ರತಿ ಸ್ಪರ್ಧಿ ತಮ್ಮ ಮೂರು ಎದುರಾಳಿಗಳನ್ನು ಆಯ್ಕೆ ಮಾಡಿಕೊಂಡು ಟಾಸ್ಕ್ ಆಡಬೇಕು ಎಂಬುದು ಬಿಗ್ ಬಾಸ್ ನಿಯಮದಲ್ಲಿ ಇತ್ತು. ಎಲ್ಲಾ ಸ್ಪರ್ಧಿಗಳು ತಮಗಿಂತ ಕಡಿಮೆ ಸ್ಟ್ರಾಂಗ್ ಯಾರು ಎಂಬುದನ್ನು ನೋಡುತ್ತಾರೆ. ವಿನಯ್ ಗೌಡ ಅವರು ಸ್ಟ್ರಾಂಗ್ ಇರುವ ಕಾರಣ ಅವರನ್ನು ಟಾಸ್ಕ್​ಗೆ ಆಯ್ಕೆ ಮಾಡಿಕೊಳ್ಳುವಷ್ಟು ಧೈರ್ಯ ತೋರಿಸುವುದಿಲ್ಲ. ಇದನ್ನು ಅರಿತ ಅವರು ಸ್ಪರ್ಧಿಗಳಿಗೆ ಆಫರ್ ನೀಡಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಕೊನೆಗೂ ಡ್ರೋನ್ ಪ್ರತಾಪ್ ಬಳಿ ಕ್ಷಮೆ ಕೇಳಿದ ವಿನಯ್ ಗೌಡ

ಬುದ್ಧಿಮತ್ಯೆ ಉಪಯೋಗಿಸಿ ಆಡುವ ಟಾಸ್ಕ್ ಬಂದಿತ್ತು. ಈರೀತಿಯ ಟಾಸ್ಕ್ ಬಂದಾಗ ತಮ್ಮನ್ನು ಆಯ್ಕೆ ಮಾಡಿಕೊಂಡರೆ ಅಂಥವರಿಗೆ 100 ಪಾಯಿಂಟ್ಸ್ ಕೊಡಿಸಲು ವಿನಯ್ ಸಹಾಯ ಮಾಡುತ್ತಾರಂತೆ. ಅವರು ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿಕೊಳ್ಳುತ್ತಾರಂತೆ. ಈ ರೀತಿ ಮ್ಯಾಚ್ ಫಿಕ್ಸಿಂಗ್ ಸಹವಾಸ ಬೇಡ ಎಂದು ಎಲ್ಲರೂ ಸುಮ್ಮನಾಗಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣುತ್ತದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ 24 ಗಂಟೆ ಲೈವ್ ಕೂಡ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:36 am, Thu, 11 January 24

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್