AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನಯ್​ಗೆ ವಿಶೇಷ ಅಡ್ವಾಂಟೇಜ್ ಕೊಟ್ಟ ಬಿಗ್ ಬಾಸ್; ಸಿಗಲಿದೆ ಬಯಸಿದ ಊಟ

ಬಿಗ್ ಬಾಸ್ ವಿನಯ್​ಗೆ ಸೀಕ್ರೆಟ್ ಟಾಸ್ಕ್ ನೀಡಿದರು. ಇದನ್ನು ಯಶಸ್ವಿಯಾಗಿ ನಿರ್ವಹಿಸುವುದಾದರೆ ವಿನಯ್​ಗೆ ಬಯಸಿದ ಊಟ ಸಿಗಲಿದೆ. ಮೊದಲ ದಿನ ಅವರು ಜಾಮೂನನ್ನು ಕೇಳಿದ್ದಾರೆ.

ವಿನಯ್​ಗೆ ವಿಶೇಷ ಅಡ್ವಾಂಟೇಜ್ ಕೊಟ್ಟ ಬಿಗ್ ಬಾಸ್; ಸಿಗಲಿದೆ ಬಯಸಿದ ಊಟ
ವಿನಯ್ ಗೌಡ
ರಾಜೇಶ್ ದುಗ್ಗುಮನೆ
|

Updated on:Jan 16, 2024 | 10:36 AM

Share

ವಿನಯ್ ಗೌಡ ಅವರು ಫಿನಾಲೆ ವಾರದ ಸಮೀಪದಲ್ಲಿದ್ದಾರೆ. ಅವರು ಸ್ಟ್ರಾಂಗ್ ಸ್ಪರ್ಧಿ ಆಗಿ ಗುರುತಿಸಿಕೊಂಡಿದ್ದಾರೆ. ಫಿನಾಲೆ ತಲುಪಿ ಕಪ್ ಎತ್ತಬೇಕು ಎನ್ನುವ ಕನಸನ್ನು ಅವರು ಹೊಂದಿದ್ದಾರೆ. ಈ ಮಧ್ಯೆ ಬಿಗ್ ಬಾಸ್ (Bigg Boss) ಮನೆಯಲ್ಲಿ ವಿನಯ್ ಗೌಡಗೆ ವಿಶೇಷ ಅಡ್ವಾಂಟೇಜ್ ಸಿಕ್ಕಿದೆ. ಇದರಿಂದ ಬಯಸಿದ ಊಟ ಅವರಿಗೆ ಸಿಗಲಿದೆ. ಬಿಗ್ ಬಾಸ್ ವಿನಯ್​ಗೆ ಸೀಕ್ರೆಟ್ ಟಾಸ್ಕ್ ಕೊಟ್ಟರು. ಇದನ್ನು ಯಶಸ್ವಿಯಾಗಿ ನಿರ್ವಹಿಸುವುದಾದರೆ ವಿನಯ್​ಗೆ ಬಯಸಿದ ಊಟ ಸಿಗುತ್ತಿದೆ. ಮೊದಲ ದಿನ ಅವರು ಜಾಮೂನನ್ನು ಕೇಳಿದರು.

ಬಿಗ್ ಬಾಸ್ ಮನೆಯಲ್ಲಿರುವ ಸ್ಪರ್ಧಿಗಳಿಗೆ ಮೂರು ಪ್ರಶ್ನೆಗಳನ್ನು ಕೇಳಿದರು. ಇದಕ್ಕೆ ಮನೆ ಮಂದಿ ಕನ್ಫೆಷನ್​ರೂಂಗೆ ಬಂದು ಉತ್ತರ ನೀಡಬೇಕು. ಇದಕ್ಕೆ ಎಲ್ಲರೂ ಅವರವರ ಉತ್ತರ ನೀಡಿದರು. ಈ ಮಧ್ಯೆ ವಿನಯ್ ಕನ್ಫೆಷನ್​ ರೂಂಗೆ ಬಂದಾಗ ಬಿಗ್ ಬಾಸ್ ಅವರಿಗೆ ಒಂದು ಸೀಕ್ರೆಟ್ ಟಾಸ್ಕ್ ನೀಡಿದರು. ಈ ಟಾಸ್ಕ್​ನ ಅನುಸಾರ ವಿನಯ್ ಸೂಚಿಸುವ ಹೆಸರು ಮನೆಯವರ ಒಮ್ಮತಕ್ಕೆ ವಿರುದ್ಧವಾಗಿರಬೇಕು. ವಿನಯ್ ನೀಡುವ ಹೆಸರೇ ಬಹುಮತ ಎಂದು ಬಿಗ್ ಬಾಸ್ ಪರಿಗಣಿಸಲಾಗುತ್ತದೆ.

ಯಾರ ಮೇಕಪ್​ ಕಿಟ್ ಹಿಂಪಡಯಬೇಕು ಎಂದು ಬಿಗ್ ಬಾಸ್ ಪ್ರಶ್ನಿಸಿದರು. ಇದಕ್ಕೆ ತನಿಷಾ ಹೆಸರನ್ನು ತೆಗೆದುಕೊಂಡರು ವಿನಯ್. ಯಾರು ಅಡುಗೆ ಮಾಡಬೇಕು ಎನ್ನುವ ವಿಚಾರದಲ್ಲಿ ತನಿಷಾ ಹೆಸರನ್ನು ಎಲ್ಲರೂ ಸೂಚಿಸಿದರು. ಆದರೆ, ವರ್ತೂರು ಸಂತೋಷ್ ಹೆಸರನ್ನು ವಿನಯ್ ತೆಗೆದುಕೊಂಡರು. ಇನ್ನು, ಮನೆಯಲ್ಲಿ ಯಾವ ಪುರುಷ ಸದಸ್ಯ ಹೆಣ್ಣಿನ ವೇಷ ಧರಿಸಿ ಸುತ್ತಾಡಬೇಕು ಎಂದು ಬಿಗ್ ಬಾಸ್ ಕೇಳಿದರು. ಬಹುತೇಕ ಸದಸ್ಯರು ವಿನಯ್ ಹೆಸರು ಹೇಳಿದರು. ಆದರೆ ವಿನಯ್ ಅವರು ಕಾರ್ತಿಕ್ ಹೆಸರು ಸೂಚಿಸಿದರು. ಇದರಿಂದ ಕಾರ್ತಿಕ್ ಹೆಣ್ಣಿನಂತೆ ವೇಷ ಧರಿಸಿದರು. ಒಂದು ವಾರಗಳ ಕಾಲ ರಾತ್ರಿ ಊಟಕ್ಕೆ ವಿನಯ್ ಬಯಸಿದ ತಿಂಡಿ ಸಿಗಲಿದೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಗೆ ಎಲಿಮಿನೇಟ್ ಆದ ಸ್ಪರ್ಧಿಗಳ ರೀ ಎಂಟ್ರಿ; ನಮ್ರತಾಗೆ ಕೈಮುಗಿದ ಸ್ನೇಹಿತ್

ಕಲರ್ಸ್ ಕನ್ನಡದಲ್ಲಿ ಬಿಗ್ ಬಾಸ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ ಲೈವ್ ನೋಡಬಹುದು. ಇನ್ನು ಕೆಲವೇ ದಿನಗಳಲ್ಲಿ ಬಿಗ್ ಬಾಸ್ ಫಿನಾಲೆ ನಡೆಯಲಿದೆ. ಯಾರು ಕಪ್ ಎತ್ತುತ್ತಾರೆ ಅನ್ನೋ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:43 am, Tue, 16 January 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!