AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಂಡಸ್ತರ ಆಡು, ಬಳೆ ಹಾಕ್ಕೊಂಡು ಹೆಂಗಸಿನ ರೀತಿ ಆಡಬೇಡ’; ವಿನಯ್ ಮಾತಿನಿಂದ ಹೆಣ್ಣುಮಕ್ಕಳಿಗೆ ಅವಮಾನ

‘ಗಂಡಸ್ತರ ಆಡು, ಬಳೆ ಹಾಕ್ಕೊಂಡು ಹೆಂಗಸಿನ ರೀತಿ ಆಡಬೇಡ’ ಎಂದು ವಿನಯ್ ಕೂಗಾಡಿದರು. ಇದಕ್ಕೆ ಸಂಗೀತಾ ಸಿಟ್ಟಾದರು. ‘ಬಳೆ ಹಾಕ್ಕೊಂಡ್ರೆ ಏನಿವಾಗ? ಏನೋ ಇವಾಗ’ ಎಂದು ಸಂಗೀತಾ ಪ್ರಶ್ನೆ ಮಾಡಿದರು. ಇಡೀ ಮನೆ ರಣರಂಗವಾಗಿ ಬದಲಾಯಿತು.

‘ಗಂಡಸ್ತರ ಆಡು, ಬಳೆ ಹಾಕ್ಕೊಂಡು ಹೆಂಗಸಿನ ರೀತಿ ಆಡಬೇಡ’; ವಿನಯ್ ಮಾತಿನಿಂದ ಹೆಣ್ಣುಮಕ್ಕಳಿಗೆ ಅವಮಾನ
ವಿನಯ್ ಗೌಡ
ರಾಜೇಶ್ ದುಗ್ಗುಮನೆ
|

Updated on:Nov 02, 2023 | 7:41 AM

Share

ನಟ ವಿನಯ್ ಗೌಡ (Vinay Gowda) ಅವರು ಬಿಗ್ ಬಾಸ್ ಮನೆಯಲ್ಲಿ ಸಾಕಷ್ಟು ಟೀಕೆಗೆ ಒಳಗಾಗುತ್ತಿದ್ದಾರೆ. ಕಳೆದ ವಾರ ಅವರನ್ನು ಸುದೀಪ್ ಹೊಗಳಿದ್ದರು. ಅವರಿಗೆ ಎದುರಾಳಿ ಯಾರೂ ಇಲ್ಲ ಎಂದು ಹೇಳಲಾಯಿತು. ಇದು ವೀಕ್ಷಕರ ಅಸಮಾಧಾನಕ್ಕೆ ಕಾರಣ ಆಗಿತ್ತು. ಅವರು ತಪ್ಪು ಮಾಡಿದ ಬಗ್ಗೆ ಏಕೆ ಮಾತನಾಡಿಲ್ಲ ಎಂದು ಅನೇಕರು ಪ್ರಶ್ನೆ ಮಾಡಿದ್ದರು. ಈಗ ವಿನಯ್ ಅವರ ಮಾತು ಎಲ್ಲೆ ಮೀರುತ್ತಿದೆ. ಬಳೆ ಹಾಕಿದವರ ಕೈಯಲ್ಲಿ ಏನೂ ಆಗಲ್ಲ ಎಂಬರ್ಥದಲ್ಲಿ ವಿನಯ್ ಮಾತನಾಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳಿಗೆ ಹೊಸ ಟಾಸ್ಕ್ ನೀಡಲಾಗಿದೆ. ಗಾರ್ಡನ್ ಏರಿಯಾದಲ್ಲಿ ಹಳ್ಳಿಯ ರೀತಿಯಲ್ಲಿ ಸೆಟ್ ನಿರ್ಮಾಣ ಆಗಿದೆ. ಹಳ್ಳಿಯಲ್ಲಿ ನಡೆಯುವ ಚಟುವಟಿಕೆಗಳನ್ನೇ ಆಯ್ದುಕೊಂಡು ಟಾಸ್ಕ್ ನೀಡಲಾಗುತ್ತಿದೆ. ಮಡಿಕೆ ಮಾಡುವ ಟಾಸ್ಕ್​​ನ ಸ್ಪರ್ಧಿಗಳಿಗೆ ಮೊದಲು ನೀಡಲಾಗಿದೆ. ಈ ವೇಳೆ ವಿನಯ್ ಆಡಿದ ಮಾತು ಸಂಗೀತಾ ಕೋಪಕ್ಕೆ ಕಾರಣ ಆಗಿದೆ.

‘ಗಂಡಸ್ತರ ಆಡು, ಬಳೆ ಹಾಕ್ಕೊಂಡು ಹೆಂಗಸಿನ ರೀತಿ ಆಡಬೇಡ’ ಎಂದು ವಿನಯ್ ಕೂಗಾಡಿದರು. ಇದಕ್ಕೆ ಸಂಗೀತಾ ಸಿಟ್ಟಾದರು. ‘ಬಳೆ ಹಾಕ್ಕೊಂಡ್ರೆ ಏನಿವಾಗ? ಏನೋ ಇವಾಗ’ ಎಂದು ಸಂಗೀತಾ ಪ್ರಶ್ನೆ ಮಾಡಿದರು. ‘ಮರ್ಯಾದಿ ಬಿಟ್ಟ ನಿನ್ನ ಬಳಿ ಮಾತೇಕೆ’ ಎಂದು ವಿನಯ್ ಕೂಗಾಡಿದರು. ಇಡೀ ಮನೆ ರಣರಂಗವಾಗಿ ಬದಲಾಯಿತು.

ಸದ್ಯ ವಿನಯ್ ಅವರು ಬಳಕೆ ಮಾಡಿದ ಬಳೆ ಶಬ್ದ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಅವರು ಈ ರೀತಿ ಹೇಳಬಾರದಿತ್ತು ಎಂದು ಅನೇಕರು ಹೇಳಿದ್ದಾರೆ. ಇನ್ನೂ ಕೆಲವರು ಇದು ಹೆಣ್ಣು ಮಕ್ಕಳಿಗೆ ವಿನಯ್ ಮಾಡಿದ ಅವಮಾನ ಎಂದು ಅಭಿಪ್ರಾಯಪಟ್ಟಿದ್ದಾರೆ. ವೀಕೆಂಡ್​ನಲ್ಲಿ ಈ ವಿಚಾರ ಇಟ್ಟುಕೊಂಡು ಸುದೀಪ್ ಅವರು ಕ್ಲಾಸ್ ತೆಗೆದುಕೊಳ್ಳಬೇಕು ಎಂದು ಹಲವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ವಿನಯ್​ ಗೌಡ ಕಾಲು ಇಟ್ಟಲ್ಲೆಲ್ಲ ಬರೀ ಜಗಳ

ಮಹಿಳೆಯರು ಬಳೆ ಹಾಕುತ್ತಾರೆ. ಈ ರೀತಿ ಬಳೆ ಹಾಕಿದ ಅನೇಕ ಮಹಿಳೆಯರು ಹಲವು ಸಾಧನೆ ಮಾಡಿದ್ದಾರೆ. ಆದರೆ, ವಿನಯ್ ಹೇಳಿರುವ ಮಾತು ಬೇರೆಯದೇ ಅರ್ಥ ನೀಡಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಅವರು ಮಾತನ್ನು ಹಿಂಪಡೆದು, ಕ್ಷಮೆ ಕೇಳಬೇಕು ಎಂಬ ಒತ್ತಾಯ ಕೇಳಿ ಬಂದಿದೆ. ಕಲರ್ಸ್ ಕನ್ನಡದಲ್ಲಿ ಎಪಿಸೋಡ್ ಹಾಗೂ ಜಿಯೋ ಸಿನಿಮಾದಲ್ಲಿ ಲೈವ್ ನೋಡಲು ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:39 am, Thu, 2 November 23

ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!