AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಂಡಸ್ತರ ಆಡು, ಬಳೆ ಹಾಕ್ಕೊಂಡು ಹೆಂಗಸಿನ ರೀತಿ ಆಡಬೇಡ’; ವಿನಯ್ ಮಾತಿನಿಂದ ಹೆಣ್ಣುಮಕ್ಕಳಿಗೆ ಅವಮಾನ

‘ಗಂಡಸ್ತರ ಆಡು, ಬಳೆ ಹಾಕ್ಕೊಂಡು ಹೆಂಗಸಿನ ರೀತಿ ಆಡಬೇಡ’ ಎಂದು ವಿನಯ್ ಕೂಗಾಡಿದರು. ಇದಕ್ಕೆ ಸಂಗೀತಾ ಸಿಟ್ಟಾದರು. ‘ಬಳೆ ಹಾಕ್ಕೊಂಡ್ರೆ ಏನಿವಾಗ? ಏನೋ ಇವಾಗ’ ಎಂದು ಸಂಗೀತಾ ಪ್ರಶ್ನೆ ಮಾಡಿದರು. ಇಡೀ ಮನೆ ರಣರಂಗವಾಗಿ ಬದಲಾಯಿತು.

‘ಗಂಡಸ್ತರ ಆಡು, ಬಳೆ ಹಾಕ್ಕೊಂಡು ಹೆಂಗಸಿನ ರೀತಿ ಆಡಬೇಡ’; ವಿನಯ್ ಮಾತಿನಿಂದ ಹೆಣ್ಣುಮಕ್ಕಳಿಗೆ ಅವಮಾನ
ವಿನಯ್ ಗೌಡ
ರಾಜೇಶ್ ದುಗ್ಗುಮನೆ
|

Updated on:Nov 02, 2023 | 7:41 AM

Share

ನಟ ವಿನಯ್ ಗೌಡ (Vinay Gowda) ಅವರು ಬಿಗ್ ಬಾಸ್ ಮನೆಯಲ್ಲಿ ಸಾಕಷ್ಟು ಟೀಕೆಗೆ ಒಳಗಾಗುತ್ತಿದ್ದಾರೆ. ಕಳೆದ ವಾರ ಅವರನ್ನು ಸುದೀಪ್ ಹೊಗಳಿದ್ದರು. ಅವರಿಗೆ ಎದುರಾಳಿ ಯಾರೂ ಇಲ್ಲ ಎಂದು ಹೇಳಲಾಯಿತು. ಇದು ವೀಕ್ಷಕರ ಅಸಮಾಧಾನಕ್ಕೆ ಕಾರಣ ಆಗಿತ್ತು. ಅವರು ತಪ್ಪು ಮಾಡಿದ ಬಗ್ಗೆ ಏಕೆ ಮಾತನಾಡಿಲ್ಲ ಎಂದು ಅನೇಕರು ಪ್ರಶ್ನೆ ಮಾಡಿದ್ದರು. ಈಗ ವಿನಯ್ ಅವರ ಮಾತು ಎಲ್ಲೆ ಮೀರುತ್ತಿದೆ. ಬಳೆ ಹಾಕಿದವರ ಕೈಯಲ್ಲಿ ಏನೂ ಆಗಲ್ಲ ಎಂಬರ್ಥದಲ್ಲಿ ವಿನಯ್ ಮಾತನಾಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳಿಗೆ ಹೊಸ ಟಾಸ್ಕ್ ನೀಡಲಾಗಿದೆ. ಗಾರ್ಡನ್ ಏರಿಯಾದಲ್ಲಿ ಹಳ್ಳಿಯ ರೀತಿಯಲ್ಲಿ ಸೆಟ್ ನಿರ್ಮಾಣ ಆಗಿದೆ. ಹಳ್ಳಿಯಲ್ಲಿ ನಡೆಯುವ ಚಟುವಟಿಕೆಗಳನ್ನೇ ಆಯ್ದುಕೊಂಡು ಟಾಸ್ಕ್ ನೀಡಲಾಗುತ್ತಿದೆ. ಮಡಿಕೆ ಮಾಡುವ ಟಾಸ್ಕ್​​ನ ಸ್ಪರ್ಧಿಗಳಿಗೆ ಮೊದಲು ನೀಡಲಾಗಿದೆ. ಈ ವೇಳೆ ವಿನಯ್ ಆಡಿದ ಮಾತು ಸಂಗೀತಾ ಕೋಪಕ್ಕೆ ಕಾರಣ ಆಗಿದೆ.

‘ಗಂಡಸ್ತರ ಆಡು, ಬಳೆ ಹಾಕ್ಕೊಂಡು ಹೆಂಗಸಿನ ರೀತಿ ಆಡಬೇಡ’ ಎಂದು ವಿನಯ್ ಕೂಗಾಡಿದರು. ಇದಕ್ಕೆ ಸಂಗೀತಾ ಸಿಟ್ಟಾದರು. ‘ಬಳೆ ಹಾಕ್ಕೊಂಡ್ರೆ ಏನಿವಾಗ? ಏನೋ ಇವಾಗ’ ಎಂದು ಸಂಗೀತಾ ಪ್ರಶ್ನೆ ಮಾಡಿದರು. ‘ಮರ್ಯಾದಿ ಬಿಟ್ಟ ನಿನ್ನ ಬಳಿ ಮಾತೇಕೆ’ ಎಂದು ವಿನಯ್ ಕೂಗಾಡಿದರು. ಇಡೀ ಮನೆ ರಣರಂಗವಾಗಿ ಬದಲಾಯಿತು.

ಸದ್ಯ ವಿನಯ್ ಅವರು ಬಳಕೆ ಮಾಡಿದ ಬಳೆ ಶಬ್ದ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಅವರು ಈ ರೀತಿ ಹೇಳಬಾರದಿತ್ತು ಎಂದು ಅನೇಕರು ಹೇಳಿದ್ದಾರೆ. ಇನ್ನೂ ಕೆಲವರು ಇದು ಹೆಣ್ಣು ಮಕ್ಕಳಿಗೆ ವಿನಯ್ ಮಾಡಿದ ಅವಮಾನ ಎಂದು ಅಭಿಪ್ರಾಯಪಟ್ಟಿದ್ದಾರೆ. ವೀಕೆಂಡ್​ನಲ್ಲಿ ಈ ವಿಚಾರ ಇಟ್ಟುಕೊಂಡು ಸುದೀಪ್ ಅವರು ಕ್ಲಾಸ್ ತೆಗೆದುಕೊಳ್ಳಬೇಕು ಎಂದು ಹಲವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ವಿನಯ್​ ಗೌಡ ಕಾಲು ಇಟ್ಟಲ್ಲೆಲ್ಲ ಬರೀ ಜಗಳ

ಮಹಿಳೆಯರು ಬಳೆ ಹಾಕುತ್ತಾರೆ. ಈ ರೀತಿ ಬಳೆ ಹಾಕಿದ ಅನೇಕ ಮಹಿಳೆಯರು ಹಲವು ಸಾಧನೆ ಮಾಡಿದ್ದಾರೆ. ಆದರೆ, ವಿನಯ್ ಹೇಳಿರುವ ಮಾತು ಬೇರೆಯದೇ ಅರ್ಥ ನೀಡಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಅವರು ಮಾತನ್ನು ಹಿಂಪಡೆದು, ಕ್ಷಮೆ ಕೇಳಬೇಕು ಎಂಬ ಒತ್ತಾಯ ಕೇಳಿ ಬಂದಿದೆ. ಕಲರ್ಸ್ ಕನ್ನಡದಲ್ಲಿ ಎಪಿಸೋಡ್ ಹಾಗೂ ಜಿಯೋ ಸಿನಿಮಾದಲ್ಲಿ ಲೈವ್ ನೋಡಲು ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:39 am, Thu, 2 November 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ