AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿನಯ್ ತುಂಬಾ ಕೆಳಗೆ ಹೋದ್ರು, ಪ್ರತಾಪ್ ಮೇಲೆ ಕಾಣಿಸಿದ್ರು’; ಅವಾಚ್ಯ ಶಬ್ದ ಬಳಕೆ ಬಗ್ಗೆ ಸಂತೋಷ್ ಮಾತು

ಪ್ರತಾಪ್ ಹಾಗೂ ಸಂಗೀತಾಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಇದು ಒಳಗಿರುವ ಸ್ಪರ್ಧಿಗಳಿಗೆ ತಿಳಿದಿಲ್ಲ. ಪ್ರತಾಪ್ ಅವರ ಜೊತೆ ಬಾಯಿಗೆ ಬಂದಂತೆ ಮಾತನಾಡಿ ವಿನಯ್ ಈಗ ಮತ್ತಷ್ಟು ಕೆಟ್ಟವರಾಗಿದ್ದಾರೆ.

‘ವಿನಯ್ ತುಂಬಾ ಕೆಳಗೆ ಹೋದ್ರು, ಪ್ರತಾಪ್ ಮೇಲೆ ಕಾಣಿಸಿದ್ರು’; ಅವಾಚ್ಯ ಶಬ್ದ ಬಳಕೆ ಬಗ್ಗೆ ಸಂತೋಷ್ ಮಾತು
ವಿನಯ್-ವರ್ತೂರು-ಪ್ರತಾಪ್
Follow us
ರಾಜೇಶ್ ದುಗ್ಗುಮನೆ
|

Updated on: Jan 10, 2024 | 7:31 AM

ಬಿಗ್ ಬಾಸ್ ಮನೆಯಲ್ಲಿ ವಿನಯ್ ಗೌಡ (Vinay Gowda) ಹಾಗೂ ಪ್ರತಾಪ್ ಮಧ್ಯೆ ಸಾಕಷ್ಟು ಕಿತ್ತಾಟ ನಡೆದವು. ವಿನಯ್ ಗೌಡ ಅವರು ಕೆಟ್ಟ ಶಬ್ದ ಬಳಕೆ ಮಾಡಿದರು. ಇದನ್ನು ಮನೆಯವರು ವಿರೋಧಿಸಿದರು. ಈ ವಾರ ಪೂರ್ತಿ  ಕಿತ್ತಾಟ ಮುಂದುವರಿಯುವ ಸಾಧ್ಯತೆ ಇದೆ. ಈ ಮಧ್ಯೆ ವಿನಯ್ ಮಾಡಿದ್ದು ತಪ್ಪು ಎಂದು ವರ್ತೂರು ಸಂತೋಷ್ ಹೇಳಿದ್ದಾರೆ. ಅಷ್ಟೇ ಅಲ್ಲ, ಇದರಿಂದ ಪ್ರತಾಪ್ ಎಲ್ಲಿ ಕಾಣಿಸಿದರು ಹಾಗೂ ವಿನಯ್ ಮೇಲಿದ್ದ ಗೌರವ ಎಲ್ಲಿಗೆ ಹೋಯಿತು ಎಂದು ಅವರು ವಿವರಿಸಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಇರುವ ಪ್ರತಿ ಸ್ಪರ್ಧಿಗೂ ಜನರು ತಮ್ಮನ್ನು ಹೇಗೆ ಸ್ವೀಕರಿಸುತ್ತಾರೆ ಎನ್ನುವ ಭಯ ಕಾಡುತ್ತಾ ಇರುತ್ತದೆ. ಆದರೆ, ಜನರಿಗೆ ಯಾರ ಮೇಲೆ ಯಾವ ರೀತಿಯ ಅಭಿಪ್ರಾಯ ಇದೆ ಅನ್ನೋದು ತಿಳಿಯೋದಿಲ್ಲ. ಪ್ರತಾಪ್ ಹಾಗೂ ಸಂಗೀತಾಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಇದು ಒಳಗಿರುವ ಸ್ಪರ್ಧಿಗಳಿಗೆ ತಿಳಿದಿಲ್ಲ. ಪ್ರತಾಪ್ ಅವರ ಜೊತೆ ಬಾಯಿಗೆ ಬಂದಂತೆ ಮಾತನಾಡಿ ವಿನಯ್ ಈಗ ಮತ್ತಷ್ಟು ಕೆಟ್ಟವರಾಗಿದ್ದಾರೆ.

ಪ್ರತಾಪ್​ಗೆ ವಿನಯ್ ಅವಾಚ್ಯ ಶಬ್ದಗಳಿಂದ ಬೈದಿದ್ದನ್ನು ವರ್ತೂರು ಸಂತೋಷ್ ಅವರು ವಿರೋಧಿಸಿದ್ದಾರೆ. ‘ಪ್ರತಾಪ್ ಮೇಲೆ ಕಂಡರು. ನೀವು ಕೆಳಗೆ ಕಾಣಿಸಿದ್ರಿ. ಸಿನಿಮಾದಲ್ಲಿ ದೊಡ್ಡ ಧ್ವನಿಯಲ್ಲಿ ಮಾತನಾಡುತ್ತಾ, ಬೈಯುತ್ತಾ ಇರುವವನ್ನು ಏನೆಂದು ಕರೆಯುತ್ತಾರೆ ಹೇಳಿ’ ಎಂದರು ವರ್ತೂರು ಸಂತೋಷ್. ಇದಕ್ಕೆ ವಿನಯ್ ‘ವಿಲನ್’ ಎಂದರು. ಸಂತೋಷ್ ಅವರು ‘ಅಷ್ಟೇ. ನೀವು ಆಗಿದ್ದೂ ಅದೇ’ ಎಂದರು.

ಇದನ್ನೂ ಓದಿ: ಬಿಗ್ ಬಾಸ್ ಮನೆಗೆ ಮರಳಿದ ಬಳಿಕ ಮೌನಕ್ಕೆ ಶರಣಾದ ಪ್ರತಾಪ್; ಮೊದಲು ಮಾಡಿದ್ದೇನು?

‘ನಾನು ಮಾತಾಡಿದ್ದು ಕೆಟ್ಟದಾಗಿ ಇತ್ತು. ನಾನು ಮಾತಾಡೋದೆ ಹಾಗೆ. ಆದರೆ ವಿಷಯ ತಪ್ಪಿರಲಿಲ್ಲ’ ಎಂದು ಸಮರ್ಥಿಸಿಕೊಂಡರು ವಿನಯ್. ಪ್ರತಾಪ್ ಹಾಗೂ ವಿನಯ್ ಈ ವಿಚಾರದ ಬಗ್ಗೆ ಕುಳಿತು ಮಾತನಾಡಿ ಪರಿಹರಿಸಿಕೊಳ್ಳಲು ಆಸಕ್ತಿ ತೋರಿಸುತ್ತಿಲ್ಲ. ಕಲರ್ಸ್ ಕನ್ನಡ ವಾಹಿನಿಯಲ್ಲಿ ರಾತ್ರಿ 9:30ಕ್ಕೆ ಬಿಗ್ ಬಾಸ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್