AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ನಲ್ಲಿ ನಡೆಯುತ್ತಿದೆ ಬ್ರೋ ಕೋಡ್​; ವಿನಯ್​ನ ಸೇವ್​ ಮಾಡೋದೇ ಉದ್ದೇಶ?

ವಿನಯ್ ಗೌಡಗೆ ಕಾರ್ತಿಕ್ ಬಕೆಟ್ ಹಿಡಿಯುತ್ತಿದ್ದಾರೆ ಅನ್ನೋದು ಸಂಗೀತಾ ಅಭಿಪ್ರಾಯ. ಈ ಬಗ್ಗೆ ಅವರು ಮಾತನಾಡಿದ್ದಾರೆ. ಇದಕ್ಕೆ ಅವರು ವಿವರಣೆ ಕೂಡ ನಡೆದಿದ್ದಾರೆ.

ಬಿಗ್ ಬಾಸ್​ನಲ್ಲಿ ನಡೆಯುತ್ತಿದೆ ಬ್ರೋ ಕೋಡ್​; ವಿನಯ್​ನ ಸೇವ್​ ಮಾಡೋದೇ ಉದ್ದೇಶ?
ನಮ್ರತಾ-ವಿನಯ್
ರಾಜೇಶ್ ದುಗ್ಗುಮನೆ
|

Updated on: Dec 15, 2023 | 8:04 AM

Share

ಬಿಗ್ ಬಾಸ್​ನಲ್ಲಿ ವಿನಯ್ ಗೌಡ (Vinay Gowda) ಹೆಸರು ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಲೇ ಇರುತ್ತದೆ. ಹಲವು ಸ್ಪರ್ಧಿಗಳ ಮೇಲೆ ಅವರ ಪ್ರಭಾವ ಇದೆ. ಅನೇಕ ಸಂದರ್ಭಗಳಲ್ಲಿ ಬೇರೆಯವರು ಮಾಡಿದ ತಪ್ಪಿಗೆ ಅವರು ಸುದೀಪ್​ ಅವರಿಂದ ಹೇಳಿಸಿಕೊಂಡಿದ್ದೂ ಇದೆ. ಈಗ ಬಿಗ್ ಬಾಸ್ ಮನೆಯಲ್ಲಿ ವಿನಯ್ ಹೆಸರಲ್ಲಿ ಬ್ರೋ ಕೋಡ್ ನಡೆಯುತ್ತಿದೆಯೇ ಎನ್ನುವ ಪ್ರಶ್ನೆ ಮೂಡಿದೆ. ಈ ಬಗ್ಗೆ ಸಂಗೀತಾ ಅವರು ಮಾತನಾಡಿದ್ದಾರೆ.

ವಿನಯ್ ಗೌಡ ಅವರನ್ನು ಕಂಡರೆ ಅನೇಕರಿಗೆ ಭಯ. ಅವರ ಟೀಂನಲ್ಲಿದ್ದರೆ ಸೇವ್ ಆಗಬಹುದು ಅನ್ನೋದು ಅನೇಕರ ನಂಬಿಕೆ. ಆದರೆ, ಈ ನಂಬಿಕೆಯಲ್ಲಿ ನಿಜವಿಲ್ಲ. ಈ ವರೆಗೆ ಎಲಿಮಿನೇಟ್ ಆದ ಬಹುತೇಕರು ಅವರ ಟೀಂನವರೇ. ವಿನಯ್ ಗೌಡಗೆ ಕಾರ್ತಿಕ್ ಬಕೆಟ್ ಹಿಡಿಯುತ್ತಿದ್ದಾರೆ ಅನ್ನೋದು ಸಂಗೀತಾ ಅಭಿಪ್ರಾಯ. ಈ ಬಗ್ಗೆ ಅವರು ಮಾತನಾಡಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತಿಲ್ಲ ಎಂದ ಸ್ನೇಹಿತ್

ನಡೆದ ಟಾಸ್ಕ್​ನಲ್ಲಿ ಕಾರ್ತಿಕ್ ಅವರು ವಿನಯ್ ಅವರನ್ನು ಓಲೈಸಲು ಪ್ರಯತ್ನಿಸಿದಂತೆ ಕಂಡುಬಂತು. ಹೀಗೇಕೆ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿತ್ತು. ಈ ಪ್ರಶ್ನೆ ಸಂಗೀತಾ ಮನದಲ್ಲೂ ಎದ್ದಿದೆ. ಈ ಬಗ್ಗೆ ಅವರು ಡ್ರೋನ್ ಪ್ರತಾಪ್ ಬಳಿ ಚರ್ಚೆ ಮಾಡಿದ್ದಾರೆ. ‘ಕಾರ್ತಿಕ್ ಯಾಕೆ ಹಾಗೆ ಆಡ್ತಾ ಇದಾನೆ? ಅವನು ಹೋಗಿ ವಿನಯ್​ಗೆ ಬಕೆಟ್ ಹಿಡಿಯುತ್ತಿದ್ದಾನೆ. ಬಹುಶಃ ನಾನು ನಿನ್ನ ಜೊತೆ ಕ್ಲೋಸ್ ಆಗಿರೋದು ಅವನಿಗೆ ಇಷ್ಟ ಆಗುತ್ತಿಲ್ಲ ಅನಿಸುತ್ತಿದೆ’ ಎಂದಿದ್ದಾರೆ ಸಂಗೀತಾ.

ಇದನ್ನೂ ಓದಿ: ಹೆಚ್ಚುತ್ತಲೇ ಇದೆ ಬಿಗ್ ಬಾಸ್ ಟಿಆರ್​ಪಿ; ಸಂಕಷ್ಟದಲ್ಲಿ ‘ಸೀತಾ ರಾಮ’ ಧಾರಾವಾಹಿ

‘ಬಿಗ್ ಬಾಸ್ ಮನೆಯಲ್ಲಿ ಬ್ರೋ ಕೋಡ್ ಇದೆ. ಅಂದರೆ, ಸೇವ್ ಮಾಡೋ ಪರಿಸ್ಥಿತಿ ಬಂದರೆ ಆ ಟೀಂನವರು ವಿನಯ್​ನ ಸೇವ್ ಮಾಡಬೇಕು. ಇದು ಬ್ರೋ ಕೋಡ್’ ಎಂದರು ಸಂಗೀತಾ. ಈ ವಿಚಾರ ತಿಳಿದು ಪ್ರತಾಪ್ ಅಚ್ಚರಿಗೊಂಡರು. ಸಂಗೀತಾ ಹೇಳಿರುವ ಮಾತು ಅನೇಕರಿಗೆ ಮೇಲ್ನೋಟಕ್ಕೆ ನಿಜ ಎನಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?