AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ನಲ್ಲಿ ನಡೆಯುತ್ತಿದೆ ಬ್ರೋ ಕೋಡ್​; ವಿನಯ್​ನ ಸೇವ್​ ಮಾಡೋದೇ ಉದ್ದೇಶ?

ವಿನಯ್ ಗೌಡಗೆ ಕಾರ್ತಿಕ್ ಬಕೆಟ್ ಹಿಡಿಯುತ್ತಿದ್ದಾರೆ ಅನ್ನೋದು ಸಂಗೀತಾ ಅಭಿಪ್ರಾಯ. ಈ ಬಗ್ಗೆ ಅವರು ಮಾತನಾಡಿದ್ದಾರೆ. ಇದಕ್ಕೆ ಅವರು ವಿವರಣೆ ಕೂಡ ನಡೆದಿದ್ದಾರೆ.

ಬಿಗ್ ಬಾಸ್​ನಲ್ಲಿ ನಡೆಯುತ್ತಿದೆ ಬ್ರೋ ಕೋಡ್​; ವಿನಯ್​ನ ಸೇವ್​ ಮಾಡೋದೇ ಉದ್ದೇಶ?
ನಮ್ರತಾ-ವಿನಯ್
ರಾಜೇಶ್ ದುಗ್ಗುಮನೆ
|

Updated on: Dec 15, 2023 | 8:04 AM

Share

ಬಿಗ್ ಬಾಸ್​ನಲ್ಲಿ ವಿನಯ್ ಗೌಡ (Vinay Gowda) ಹೆಸರು ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಲೇ ಇರುತ್ತದೆ. ಹಲವು ಸ್ಪರ್ಧಿಗಳ ಮೇಲೆ ಅವರ ಪ್ರಭಾವ ಇದೆ. ಅನೇಕ ಸಂದರ್ಭಗಳಲ್ಲಿ ಬೇರೆಯವರು ಮಾಡಿದ ತಪ್ಪಿಗೆ ಅವರು ಸುದೀಪ್​ ಅವರಿಂದ ಹೇಳಿಸಿಕೊಂಡಿದ್ದೂ ಇದೆ. ಈಗ ಬಿಗ್ ಬಾಸ್ ಮನೆಯಲ್ಲಿ ವಿನಯ್ ಹೆಸರಲ್ಲಿ ಬ್ರೋ ಕೋಡ್ ನಡೆಯುತ್ತಿದೆಯೇ ಎನ್ನುವ ಪ್ರಶ್ನೆ ಮೂಡಿದೆ. ಈ ಬಗ್ಗೆ ಸಂಗೀತಾ ಅವರು ಮಾತನಾಡಿದ್ದಾರೆ.

ವಿನಯ್ ಗೌಡ ಅವರನ್ನು ಕಂಡರೆ ಅನೇಕರಿಗೆ ಭಯ. ಅವರ ಟೀಂನಲ್ಲಿದ್ದರೆ ಸೇವ್ ಆಗಬಹುದು ಅನ್ನೋದು ಅನೇಕರ ನಂಬಿಕೆ. ಆದರೆ, ಈ ನಂಬಿಕೆಯಲ್ಲಿ ನಿಜವಿಲ್ಲ. ಈ ವರೆಗೆ ಎಲಿಮಿನೇಟ್ ಆದ ಬಹುತೇಕರು ಅವರ ಟೀಂನವರೇ. ವಿನಯ್ ಗೌಡಗೆ ಕಾರ್ತಿಕ್ ಬಕೆಟ್ ಹಿಡಿಯುತ್ತಿದ್ದಾರೆ ಅನ್ನೋದು ಸಂಗೀತಾ ಅಭಿಪ್ರಾಯ. ಈ ಬಗ್ಗೆ ಅವರು ಮಾತನಾಡಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತಿಲ್ಲ ಎಂದ ಸ್ನೇಹಿತ್

ನಡೆದ ಟಾಸ್ಕ್​ನಲ್ಲಿ ಕಾರ್ತಿಕ್ ಅವರು ವಿನಯ್ ಅವರನ್ನು ಓಲೈಸಲು ಪ್ರಯತ್ನಿಸಿದಂತೆ ಕಂಡುಬಂತು. ಹೀಗೇಕೆ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿತ್ತು. ಈ ಪ್ರಶ್ನೆ ಸಂಗೀತಾ ಮನದಲ್ಲೂ ಎದ್ದಿದೆ. ಈ ಬಗ್ಗೆ ಅವರು ಡ್ರೋನ್ ಪ್ರತಾಪ್ ಬಳಿ ಚರ್ಚೆ ಮಾಡಿದ್ದಾರೆ. ‘ಕಾರ್ತಿಕ್ ಯಾಕೆ ಹಾಗೆ ಆಡ್ತಾ ಇದಾನೆ? ಅವನು ಹೋಗಿ ವಿನಯ್​ಗೆ ಬಕೆಟ್ ಹಿಡಿಯುತ್ತಿದ್ದಾನೆ. ಬಹುಶಃ ನಾನು ನಿನ್ನ ಜೊತೆ ಕ್ಲೋಸ್ ಆಗಿರೋದು ಅವನಿಗೆ ಇಷ್ಟ ಆಗುತ್ತಿಲ್ಲ ಅನಿಸುತ್ತಿದೆ’ ಎಂದಿದ್ದಾರೆ ಸಂಗೀತಾ.

ಇದನ್ನೂ ಓದಿ: ಹೆಚ್ಚುತ್ತಲೇ ಇದೆ ಬಿಗ್ ಬಾಸ್ ಟಿಆರ್​ಪಿ; ಸಂಕಷ್ಟದಲ್ಲಿ ‘ಸೀತಾ ರಾಮ’ ಧಾರಾವಾಹಿ

‘ಬಿಗ್ ಬಾಸ್ ಮನೆಯಲ್ಲಿ ಬ್ರೋ ಕೋಡ್ ಇದೆ. ಅಂದರೆ, ಸೇವ್ ಮಾಡೋ ಪರಿಸ್ಥಿತಿ ಬಂದರೆ ಆ ಟೀಂನವರು ವಿನಯ್​ನ ಸೇವ್ ಮಾಡಬೇಕು. ಇದು ಬ್ರೋ ಕೋಡ್’ ಎಂದರು ಸಂಗೀತಾ. ಈ ವಿಚಾರ ತಿಳಿದು ಪ್ರತಾಪ್ ಅಚ್ಚರಿಗೊಂಡರು. ಸಂಗೀತಾ ಹೇಳಿರುವ ಮಾತು ಅನೇಕರಿಗೆ ಮೇಲ್ನೋಟಕ್ಕೆ ನಿಜ ಎನಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್