AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಔಟ್​ ಆದವರ ಬ್ಲಾಂಕೆಟ್​ನ ವಿನಯ್​ ಇಟ್ಟುಕೊಂಡಿದ್ದು ಯಾಕೆ? ಇಲ್ಲಿದೆ ಕಾರಣ

ತಮ್ಮದೇ ಗುಂಪಿನ ಸದಸ್ಯರು ಎಲಿಮಿನೇಟ್​ ಆದಾಗ ಅವರ ಬ್ಲಾಂಕೆಟ್​ಗಳನ್ನು ವಿನಯ್​ ಇಟ್ಟುಕೊಳ್ಳುತ್ತಿದ್ದರು. ಅದನ್ನೇ ಗುರಿಯಾಗಿಸಿಕೊಂಡು ಡ್ರೋನ್​ ಪ್ರತಾಪ್​ ಟೀಕೆ ಮಾಡಿದ್ದರು. ಅಷ್ಟಕ್ಕೂ ವಿನಯ್​ ಅವರು ಬೇರೆಯವರ ಬ್ಲಾಂಕೆಟ್​ ಇಟ್ಟುಕೊಂಡಿದ್ದು ಯಾಕೆ ಎಂಬುದನ್ನು ಸ್ವತಃ ವಿವರಿಸಿದ್ದಾರೆ. ಅನೇಕ ವಿಚಾರಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಔಟ್​ ಆದವರ ಬ್ಲಾಂಕೆಟ್​ನ ವಿನಯ್​ ಇಟ್ಟುಕೊಂಡಿದ್ದು ಯಾಕೆ? ಇಲ್ಲಿದೆ ಕಾರಣ
ವಿನಯ್​ ಗೌಡ
ಮದನ್​ ಕುಮಾರ್​
|

Updated on: Jan 29, 2024 | 10:16 PM

Share

ನಟ ವಿನಯ್​ ಗೌಡ ಅವರು ಬಿಗ್​ ಬಾಸ್​ (Bigg Boss Kannada) ಮನೆಯಲ್ಲಿ 3ನೇ ರನ್ನರ್​ಅಪ್​ ಆಗಿದ್ದಾರೆ. ದೊಡ್ಮನೆಯಲ್ಲಿ ಇದ್ದಷ್ಟು ದಿನವೂ ಅವರು ಸಖತ್​ ಸದ್ದು ಮಾಡಿದ್ದರು. ಅವರೇ ವಿನ್​ ಆಗಬಹುದು ಎಂದು ಹಲವರು ಭಾವಿಸಿದ್ದರು. ಆದರೆ ಅದು ಸಾಧ್ಯವಾಗಲಿಲ್ಲ. ಬಿಗ್​ ಬಾಸ್​ ಮನೆಯಲ್ಲಿ ವಿನಯ್​ ಗೌಡ ಮತ್ತು ಡ್ರೋನ್​ ಪ್ರತಾಪ್​ (Drone Prathap) ನಡುವೆ ಹಲವು ಬಾರಿ ಮಾತಿನ ಚಕಮಕಿ ನಡೆದಿತ್ತು. ಅದರಲ್ಲೂ ವೀಕೆಂಡ್​ ಎಪಿಸೋಡ್​ನಲ್ಲಿ ಡ್ರೋನ್​ ಪ್ರತಾಪ್​ ಅವರು ಹೇಳಿದ ಒಂದು ಮಾತಿನಿಂದ ವಿನಯ್​ಗೆ ತುಂಬ ಬೇಸರ ಆಗಿತ್ತು. ‘ಎಲಿಮಿನೇಟ್​ ಆದ ಸ್ನೇಹಿತರ ಬೆಡ್​ಶೀಟ್​ ಎಲ್ಲವೂ ವಿನಯ್​ (Vinay Gowda) ಅವರ ಬೆಡ್​ ಸೇರುತ್ತಿವೆ’ ಎಂದು ಪ್ರತಾಪ್​ ಹೇಳಿದ್ದು ಬಹಳ ಚರ್ಚೆ ಆಗಿತ್ತು. ಆ ಬಗ್ಗೆ ಈಗ ವಿನಯ್​ ಮಾತನಾಡಿದ್ದಾರೆ.

ಬಿಗ್ ಬಾಸ್​ ಶೋ ಮುಗಿದ ಬಳಿಕ ವಿನಯ್​ ಗೌಡ ಅವರು ‘ಟಿವಿ 9 ಕನ್ನಡ’ಕ್ಕೆ ಸಂದರ್ಶನ ನೀಡಿದ್ದಾರೆ. ಅದರಲ್ಲಿ ಅವರು ಅನೇಕ ವಿಚಾರಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮದೇ ಗುಂಪಿನ ಸದಸ್ಯರು ಎಲಿಮಿನೇಟ್​ ಆದಾಗ ಅವರ ಬ್ಲಾಂಕೆಟ್​ಗಳನ್ನು ವಿನಯ್​ ಇಟ್ಟುಕೊಳ್ಳುತ್ತಿದ್ದರು. ಅದನ್ನೇ ಗುರಿಯಾಗಿಸಿಕೊಂಡು ಡ್ರೋನ್​ ಪ್ರತಾಪ್​ ಟೀಕೆ ಮಾಡಿದ್ದರು. ಅಷ್ಟಕ್ಕೂ ವಿನಯ್​ ಅವರು ಬೇರೆಯವರ ಬ್ಲಾಂಕೆಟ್​ ಇಟ್ಟುಕೊಂಡಿದ್ದು ಯಾಕೆ ಎಂಬುದನ್ನು ಸ್ವತಃ ವಿವರಿಸಿದ್ದಾರೆ.

ಇದನ್ನೂ ಓದಿ: ‘ಯಾರು ಗೆಲ್ಲಬೇಕು ಅನ್ನೋದು ಫಿಕ್ಸ್​ ಆಗಿತ್ತು’: ಬಿಗ್ ಬಾಸ್​ ಮೇಲೆ ದೊಡ್ಡ ಆರೋಪ

‘ಬಿಗ್​ ಬಾಸ್​ ಮನೆಯಲ್ಲಿ 100 ದಿನ ಇರುತ್ತೇವೆ. ಸ್ನೇಹಿತರ ಪೈಕಿ ಒಬ್ಬೊಬ್ಬರನ್ನೇ ಕಳೆದುಕೊಂಡಾಗ ಅವರನ್ನು ಮಿಸ್​ ಮಾಡಿಕೊಳ್ಳುತ್ತೇವೆ. ಎಲಿಮಿನೇಟ್​ ಆದ ಸ್ನೇಹಿತರು ಅವರವರ ವಸ್ತುಗಳನ್ನು ತೆಗೆದುಕೊಂಡು ಹೋದ ಬಳಿಕ ಅಲ್ಲಿ ಉಳಿಯುತ್ತಿದ್ದದ್ದು ಅವರ ಬ್ಲಾಂಕೆಟ್ಸ್​ ಮಾತ್ರ. ಅವರ ಜೊತೆಗಿನ ಫೀಲ್​ಗಾಗಿ ಆ ಬ್ಲಾಂಕೆಟ್​ಗಳನ್ನು ನನ್ನ ಜೊತೆ ಇಟ್ಟುಕೊಳ್ಳುತ್ತಿದ್ದೆ. ಅದರ ಮೇಲೆ ನಾನು ಮಲಗುತ್ತಿದೆ’ ಎಂದು ವಿನಯ್​ ಗೌಡ ಹೇಳಿದ್ದಾರೆ.

‘ಯಾಕೆ ಬ್ಲಾಂಕೆಟ್​ ಇಟ್ಟುಕೊಂಡಿದ್ದೀರಿ ಅಂತ ಡ್ರೋನ್​ ಪ್ರತಾಪ್​ ನನ್ನ ಬಳಿ ಬಂದು ತುಂಬ ಪ್ರೀತಿಯಿಂದ ಕೇಳಿದ. ಸ್ನೇಹಿತರನ್ನು ಮಿಸ್​ ಮಾಡಿಕೊಂಡಿದ್ದಕ್ಕೆ ಇದನ್ನು ಇಟ್ಟುಕೊಂಡಿದ್ದು ಅಂತ ಅವನಿಗೆ ಹೇಳಿದೆ. ಮರುದಿನ ಇವರು ಫ್ರೆಂಡ್ಸ್​ನ ತುಳಿದು ಮೇಲೆ ಬರ್ತಾರೆ, ಬ್ಲಾಂಕೆಟ್​ ಸೇರಿಸಿಕೊಳ್ತಾರೆ ಅಂತ ಅವನು ಪಂಚಾಯ್ತಿನಲ್ಲಿ ಹೇಳಿದಾಗ ನನಗೆ ತುಂಬ ಹರ್ಟ್​ ಆಯಿತು. ನಂತರ ಅವನು ಕ್ಷಮೆ ಕೇಳಿದ. ಎಲ್ಲವೂ ಅರ್ಥವಾಯಿತು’ ಎಂದಿದ್ದಾರೆ ವಿನಯ್​.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?