AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತುಕಾಲಿ ಗೆದ್ದರೆ ನಾನು ಹಿಮಾಲಯಕ್ಕೆ ಹೋಗಿ ದೀಕ್ಷೆ ಪಡೆಯುತ್ತೇನೆ’: ವಿನಯ್​ ಗೌಡ ಪ್ರತಿಜ್ಞೆ

ಸಂಗೀತಾ ಶೃಂಗೇರಿ, ತುಕಾಲಿ ಸಂತೋಷ್​, ವರ್ತೂರು ಸಂತೋಷ್​ ಅವರು ಫಿನಾಲೆ ತಲುಪಿದ್ದಾರೆ. ‘ತುಕಾಲಿ ಫಿನಾಲೆಯಲ್ಲಿ ಗೆದ್ದರೆ ವಿನಯ್​ ಗೌಡ ಪ್ರತಿಕ್ರಿಯೆ ಏನಾಗಿರುತ್ತದೆ’ ಎಂದು ಕಿಚ್ಚ ಸುದೀಪ್​ ಕೇಳಿದ್ದಾರೆ. ಅದಕ್ಕೆ ಉತ್ತರಿಸಿದ ವಿನಯ್​ ಅವರು ಈ ರೀತಿ ಪ್ರತಿಜ್ಞೆ ಮಾಡಿದ್ದಾರೆ. ‘ಆ ಬೀನ್ ಬ್ಯಾಗ್ ಬಗ್ಗೆ ಬಹಳ ಜೋಪಾನವಾಗಿರಿ’ ಎಂದು ಸುದೀಪ್​ ಹೇಳಿದ್ದಾರೆ.

‘ತುಕಾಲಿ ಗೆದ್ದರೆ ನಾನು ಹಿಮಾಲಯಕ್ಕೆ ಹೋಗಿ ದೀಕ್ಷೆ ಪಡೆಯುತ್ತೇನೆ’: ವಿನಯ್​ ಗೌಡ ಪ್ರತಿಜ್ಞೆ
ವಿನಯ್​ ಗೌಡ, ತುಕಾಲಿ ಸಂತೋಷ್​
ಮದನ್​ ಕುಮಾರ್​
|

Updated on: Jan 21, 2024 | 8:29 AM

Share

ನೋಡನೋಡುತ್ತಿದ್ದಂತೆಯೇ ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ (BBK 10) ರಿಯಾಲಿಟಿ ಶೋ ಕೊನೆಯ ಹಂತವನ್ನು ತಲುಪಿದೆ. ಜನವರಿ 27 ಮತ್ತು 28ರಂದು ಫಿನಾಲೆ ಸಂಚಿಕೆ ಪ್ರಸಾರ ಆಗಲಿದೆ. ಈಗಾಗಲೇ ಸಂಗೀತಾ ಶೃಂಗೇರಿ, ತುಕಾಲಿ ಸಂತೋಷ್​ ಮತ್ತು ವರ್ತೂರು ಸಂತೋಷ್​ ಅವರು ಫಿನಾಲೆಗೆ ಎಂಟ್ರಿ ನೀಡಿದ್ದಾರೆ. ತುಕಾಲಿ ಸಂತೋಷ್​ (Tukali Santosh) ಅವರು ಫಿನಾಲೆಗೆ ಪ್ರವೇಶ ಪಡೆದಿರುವುದು ಅನೇಕರಿಗೆ ಅಚ್ಚರಿ ಮೂಡಿಸಿದೆ. ಆ ಬಗ್ಗೆ ಕೊನೇ ಪಂಚಾಯ್ತಿಯಲ್ಲಿ ಕಿಚ್ಚ ಸುದೀಪ್​ ಅವರು ಮಾತನಾಡಿದ್ದಾರೆ. ಈ ಸಂಚಿಕೆಯಲ್ಲಿ ವಿನಯ್​ ಗೌಡ (Vinay Gowda) ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ತುಕಾಲಿ ಸಂತೋಷ್​ ಅವರನ್ನು ಕೆಲವರು ಗಂಭೀರವಾಗಿ ಸ್ವೀಕರಿಸಿರಲಿಲ್ಲ. ಕೆಲವರು ಏನೇನೋ ತಂತ್ರಗಾರಿಕೆ ಮಾಡಿದರೂ ಕೂಡ ಫಿನಾಲೆಗೆ ಬರಲು ಸಾಧ್ಯವಾಗಲಿಲ್ಲ. ಅವರೆಲ್ಲರಿಗಿಂತಲೂ ಮುಂಚೆ ತುಕಾಲಿ ಸಂತೋಷ್​ ಅವರು ಫಿನಾಲೆಗೆ ಎಂಟ್ರಿ ಪಡೆದಿದ್ದಾರೆ. ಆ ಬಗ್ಗೆ ಸುದೀಪ್​ ಒಂದು ಪ್ರಶ್ನೆ ಕೇಳಿದ್ದಾರೆ. ‘ನೀವೆಲ್ಲ ಬಹಳ ಒದ್ದಾಡಿಕೊಂಡು, ಕಿತ್ತಾಡಿಕೊಂಡು ಇರುವಾಗ ತುಕಾಲಿ ಸಂತೋಷ್​ ಅವರು ಮೆತ್ತಗೆ ಫಿನಾಲೆ ತಲುಪಿದರು. ಅವರೇ ಫಿನಾಲೆಯಲ್ಲಿ ಗೆದ್ದರೆ ವಿನಯ್​ ಗೌಡ ಪ್ರತಿಕ್ರಿಯೆ ಏನಾಗಿರುತ್ತದೆ’ ಎಂದು ಸುದೀಪ್​ ಕೇಳಿದ್ದಾರೆ.

ಇದನ್ನೂ ಓದಿ: ಫಿನಾಲೆ ತಲುಪಿದ ವರ್ತೂರು ಸಂತೋಷ್​; ಟ್ರೋಫಿಗಾಗಿ ಸಂಗೀತಾ, ತುಕಾಲಿ ಜತೆ ಪೈಪೋಟಿ

‘ನಾನು ಏನೂ ಮಾತನಾಡದೇ, ಸೀದಾ ಹಿಮಾಲಯಕ್ಕೆ ಹೋಗಿ ದೀಕ್ಷೆ ತೆಗೆದುಕೊಳ್ಳುತ್ತೇವೆ ಸರ್​’ ಎಂದು ವಿನಯ್​ ಗೌಡ ಅವರು ಸುದೀಪ್​ ಎದುರು ಪ್ರತಿಜ್ಞೆ ಮಾಡಿದ್ದಾರೆ. ಈ ಮಾತು ಕೇಳಿ ಸುದೀಪ್​ ಅವರಿಗೆ ಅಚ್ಚರಿ ಆಗಿದೆ. ‘ಆ ಬೀನ್ ಬ್ಯಾಗ್ ಬಗ್ಗೆ ಬಹಳ ಜೋಪಾನವಾಗಿರಿ’ ಎಂದು ಸುದೀಪ್​ ಹೇಳಿದ್ದಾರೆ. ಫಿನಾಲೆಯಲ್ಲಿ ಯಾರು ಗೆಲ್ಲಬಹುದು ಎಂಬ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ನೆಟ್ಟಿಗರು ಚರ್ಚೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ‘ತಂದೆಯ ಹೆಸರು ದುರುಪಯೋಗ ಮಾಡಿಕೊಳ್ಳಬೇಡಿ’: ಬುಲೆಟ್​ ಪ್ರಕಾಶ್​ ಮಗ ರಕ್ಷಕ್​ಗೆ ಸುದೀಪ್​ ಎಚ್ಚರಿಕೆ

ಸಂಗೀತಾ ಶೃಂಗೇರಿ, ತುಕಾಲಿ ಸಂತೋಷ್​, ವರ್ತೂರು ಸಂತೋಷ್​ ಅವರು ಫಿನಾಲೆ ತಲುಪಿದ್ದಾರೆ. ಕಾಮಿಡಿ ಮಾಡುವ ಮೂಲಕ ತುಕಾಲಿ ಸಂತೋಷ್​ ಅವರು ಬಿಗ್ ಬಾಸ್​ ಮನೆಯಲ್ಲಿ ಎಲ್ಲರನ್ನೂ ನಗಿಸುತ್ತಾ ಬಂದಿದ್ದಾರೆ. ಅವರಿಂದಾಗಿ ಪ್ರೇಕ್ಷಕರಿಗೆ ಮನರಂಜನೆ ಸಿಕ್ಕಿದೆ. ವರ್ತೂರು ಸಂತೋಷ್ ಜೊತೆ ಅವರಿಗೆ ಹೆಚ್ಚು ಸ್ನೇಹ ಬೆಳೆದಿದೆ. ಫಿನಾಲೆಯಲ್ಲಿ ಸುದೀಪ್​ ಅಕ್ಕ-ಪಕ್ಕ ನಿಲ್ಲುವವರು ತಾವಿಬ್ಬರೇ ಆಗಿರಬೇಕು ಎಂದು ತುಕಾಲಿ ಸಂತೋಷ್​ ಆಸೆ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು